Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...