Homeಫ್ಯಾಕ್ಟ್‌ಚೆಕ್Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

Fact Check: ಕರ್ನಾಟಕದಲ್ಲಿ ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ” ಇತ್ಯಾದಿ ಬರಹಗಳೊಂದಿಗೆ ಪ್ರಾಚೀನ ಮಸೀದಿಯೊಂದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

‘ಕೇಶವ ಬೀಜಾಡಿ’ ಎಂಬ ಫೇಸ್‌ಬುಕ್ ಬಳಕೆದಾರ “ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಪಣವಿಡುವೆವು ಭಗವಂತನ ಪಾದದ ಮೆಲಾಣೆ.. ಮಂದಿರವಲ್ಲೇ ಕಟ್ಟುವೆವು” ಎಂದು ಪುರಾತನ ಮಸೀದಿಯ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಿಬ್ಬರು ಎಕ್ಸ್ ಬಳಕೆದಾರರು “ಕರ್ನಾಟಕದಲ್ಲಿ ಹಿಂದೂ ಮಂದಿರವನ್ನು ಜಿಹಾದಿಗಳು ವಶಪಡಿಸಿಕೊಂಡು ಮಸೀದಿಯಾಗಿ ಪರಿವರ್ತಿಸಿದ್ದಾರೆ” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಪೋಸ್ಟ್ ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ಇದಕ್ಕಾಗಿ ನಾವು ವೈರಲ್‌ ವಿಡಿಯೋದಲ್ಲಿರುವ ಮಸೀದಿಯ ಸ್ಕ್ರೀನ್ ಶಾಟ್ ತೆಗೆದು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ಮಸೀದಿಯು ಹಲವಾರು ಯೂಟ್ಯೂಬ್ ಚಾನೆಲ್‌ಗಳಲ್ಲಿ ಕಂಡು ಬಂದಿದೆ.

‘M Shameer’ಎಂಬ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಮಸೀದಿಯ ಸಂಪೂರ್ಣ ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, ಇದು ಭಾರತದ ಮೂರನೇ ಅತ್ಯಂತ ಪುರಾತನ ಮಸೀದಿಯಾಗಿರುವ ಮಂಗಳೂರಿನ ಝೀನತ್ ಬಕ್ಷ್ ಮಸೀದಿ ಎಂದು ತಿಳಿಸಿದ್ದಾರೆ.

ಯೂಟ್ಯೂಬ್ ಲಿಂಕ್ 

ನಾವು ಗೂಗಲ್‌ನಲ್ಲಿ ‘ಝೀನತ್ ಬಕ್ಷ್’ ಎಂದು ಸರ್ಚ್‌ ಮಾಡಿದಾಗ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಝೀನತ್ ಬಕ್ಸ್‌ ಮಸೀದಿಯ ಕುರಿತು ಮಾಹಿತಿ ದೊರೆತಿದೆ.

ಸರ್ಕಾರದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ “ಮಸ್ಜಿದ್ ಝೀನತ್ ಬಕ್ಷ್ ಮಂಗಳೂರಿನ ಬಂದರ್ ಪ್ರದೇಶದಲ್ಲಿದೆ. ಈ ಮಸೀದಿಯು ಪ್ರವಾದಿ ಮೊಹಮ್ಮದ್ ಅವರ ಜೀವನ ಕಥೆಗಳನ್ನು ಚಿತ್ರಿಸುತ್ತದೆ. ಕ್ರಿಸ್ತಶಕ 644 ರಲ್ಲಿ ಅರಬ್ ಮುಸ್ಲಿಂ ವ್ಯಾಪಾರಿಗಳಿಂದ ಇದು ಸ್ಥಾಪಿಸಲ್ಪಟ್ಟಿದೆ ಎಂದು ನಂಬಲಾಗಿದೆ. ಈ ಮಸೀದಿಯು ತನ್ನ ಶುದ್ಧ ಭಾರತೀಯ ವಾಸ್ತುಶಿಲ್ಪದ ಶೈಲಿಯಿಂದಾಗಿ ಎಲ್ಲಾ ಮಸೀದಿಗಳನ್ನು ಮೀರಿಸುತ್ತದೆ. ಇದು ಬಹುಶಃ ಸಂಪೂರ್ಣವಾಗಿ ಮರದಿಂದ ಮಾಡಿದ ಕರ್ನಾಟಕದ ಏಕೈಕ ಮಸೀದಿಯಾಗಿದೆ. ಮಸೀದಿಯ ಮುಖ್ಯ ಮುಖ್ಯಾಂಶವೆಂದರೆ ತೇಗದಿಂದ ಮಾಡಿದ 16 ಕಂಬಗಳನ್ನು ಇದು ಒಳಗೊಂಡಿದೆ.

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್ ಲಿಂಕ್

ಸರ್ಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಝೀನತ್ ಬಕ್ಷ್ ಮಸೀದಿಯು ಯಾವುದೇ ದೇವಸ್ಥಾನವನ್ನು ಪರಿವರ್ತಿಸಿ ಮಾಡಿರುವಂತದಲ್ಲ.

“ಝೀನತ್ ಬಕ್ಷ್ ಜುಮಾ ಮಸೀದಿ (ಸೌಂದರ್ಯವನ್ನು ಪ್ರತಿಬಿಂಬಿಸುವ ಮಸೀದಿ) ಸಾಮಾನ್ಯವಾಗಿ ಮಸ್ಜಿದ್ ಜೀನತ್ ಬಕ್ಷ್ ಎಂದು ಇದನ್ನು ಕರೆಯಲ್ಪಡುತ್ತದೆ. ಇದು ಭಾರತದ 3 ನೇ ಅತ್ಯಂತ ಹಳೆಯ ಮಸೀದಿಯಾಗಿದೆ ಮತ್ತು 644 ಎಡಿ ಯಲ್ಲಿ ನಿರ್ಮಿಸಲಾದ ಕರ್ನಾಟಕ ರಾಜ್ಯದ ಅತ್ಯಂತ ಹಳೆಯ ಮಸೀದಿಯಾಗಿದೆ. ‘ಬೆಳ್ಳಿಯೆ ಪಲ್ಲಿ’ (ಬ್ಯಾರಿ ಭಾಷೆಯಲ್ಲಿ ದೊಡ್ಡ ಮಸೀದಿ) ಎಂದೂ ಕರೆಯಲ್ಪಡುವ ಈ ಮಸೀದಿಯು ಮಂಗಳೂರು ನಗರದ ಬಂದರ್ ಪ್ರದೇಶದಲ್ಲಿದೆ. ಇದು ಶುದ್ಧ ಭಾರತೀಯ ವಾಸ್ತುಶಿಲ್ಪ ಶೈಲಿಗೆ ಹೆಸರುವಾಸಿಯಾಗಿದೆ” ಎಂದು ವಿಕಿಪೀಡಿಯದಲ್ಲಿ ಮಾಹಿತಿಯಿದೆ.

18ನೇ ಶತಮಾನದಲ್ಲಿ, ಅಂದಿನ ಮೈಸೂರು ಸಂಸ್ಥಾನದ ರಾಜನಾಗಿದ್ದ ಟಿಪ್ಪು ಸುಲ್ತಾನ್ ಅವರು ಮಸೀದಿಯ ನವೀಕರಣ ಕಾರ್ಯ ನಡೆಸಿದ್ದರು. ಮಾತ್ರವಲ್ಲದೆ ಸೊಗಸಾದ ಮರದ ಕೆತ್ತನೆಯಿಂದ ಮಸೀದಿಯನ್ನು ಸುಂದರಗೊಳಿಸಿದ್ದರು. ಅಲ್ಲದೆ, ‘ಮಾಲಿಕ್ ದೀನಾರ್ ವೆಳಿಯ ಜುಮಅತ್ ಮಸ್ಜಿದ್’ ಎಂದಿದ್ದ ಮಸೀದಿಯ ಹೆಸರನ್ನು ‘ಝೀನತ್ ಬಕ್ಷ್’ ಎಂದು ಬದಲಾಯಿಸಿದರು ಎಂದು ಹೇಳಲಾಗಿದೆ.

ವಿಕಿಪೀಡಿಯ ಲಿಂಕ್ 

ಇವಿಷ್ಟೆ ಅಲ್ಲದೆ ಝೀನತ್ ಬಕ್ಷ್ ಮಸೀದಿಯ ಕುರಿತು ಹಲವಾರು ಲೇಖನಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಇವೆಲ್ಲದರ ಆಧಾರದಲ್ಲಿ ಹೇಳುವುದಾದರೆ, ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮುಂಚೆ ದೇವಸ್ಥಾನವಾಗಿತ್ತು ಎಂಬುವುದು ಸುಳ್ಳು.

ಮಸೀದಿಯ ಇತಿಹಾಸದ ಕುರಿತ ಇನ್ನಷ್ಟು ಲೇಖನಗಳುಇಲ್ಲಿ ಇಲ್ಲಿ ಇಲ್ಲಿ

ಸುಳ್ಳು : ಏಷ್ಯಾದ ಮೊದಲ ಮಸೀದಿ ಮುಂಚೆ ದೇವಾಲಯವಾಗಿತ್ತು. ಕರ್ನಾಟಕದಲ್ಲಿ ಹಿಂದೂ ದೇವಾಲಯವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ.

ಸತ್ಯ :
ವೈರಲ್ ವಿಡಿಯೋದಲ್ಲಿರುವುದು ಮಂಗಳೂರಿನ ಝೀನತ್ ಬಕ್ಷ್ ಮಸೀದಿ. ಅದು ಮಂದಿರವನ್ನು ಮಸೀದಿಯಾಗಿ ಪರಿವರ್ತಿಸಿದಲ್ಲ. 

ಇದನ್ನೂ ಓದಿ : Fact Check: ಮಸೀದಿ ಮುಂದೆ ಮಹಿಳೆಯರಿಂದ ಅಶ್ಲೀಲ ಕೃತ್ಯವೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...