Homeಫ್ಯಾಕ್ಟ್‌ಚೆಕ್Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು...

Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

“ದೆಹಲಿಯ ಶ್ರೀರಾಮ್ ಕಾಲೊನಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕಿ ಅತಿಶಿ ಮರ್ಲೇನಾ ಅವರು ಭಾಷಣ ಮಾಡುವಾಗ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ, ಅಲ್ಲಿಯ ಬಹುಸಂಖ್ಯಾತ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಅತಿಶಿ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದ್ದಾರೆ” ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸಚಿವೆ ಅತಿಶಿ ಅವರು ವೇದಿಕೆ ಮೇಲೆ ನಿಂತು ಭಾಷಣ ಮಾಡುತ್ತಿರುವಾಗ ಕೆಲ ವ್ಯಕ್ತಿಗಳು ಎದ್ದು ನಿಂತು ಮಾತನಾಡಲು ಶುರು ಮಾಡಿರುವುದನ್ನು ಕಾಣಬಹುದು. ಆದರೆ, ಆ ವಿಡಿಯೋದಲ್ಲಿರುವಂತೆ ನಡೆದ ಘಟನೆ ಏನು ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ನಾನುಗೌರಿ. ಕಾಂ ಪರಿಶೀಲನೆ ನಡೆಸಿದೆ. ನಾವು ಸಂಬಂಧಿತ ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದಾಗ, ದಿನಾಂಕ 9 ಮಾರ್ಚ್‌ 2024ರಂದು ಆಮ್‌ ಆದ್ಮಿ ಪಕ್ಷ ಬಿಡುಗಡೆಗೊಳಿಸಿದ್ದ ಅಧಿಕೃತ ಪತ್ರಿಕಾ ಹೇಳಿಕೆಯೊಂದು ಲಭ್ಯವಾಗಿದೆ. ಅದರಲ್ಲಿ, ಈಶಾನ್ಯ ದೆಹಲಿಯ ಶ್ರೀರಾಮ್ ಕಾಲೋನಿಯಲ್ಲಿ ಕೇಜ್ರಿವಾಲ್ ಸರ್ಕಾರ ಎರಡು ಸರ್ಕಾರಿ ಶಾಲೆಗಳನ್ನು ಉದ್ಘಾಟಿಸಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಅತಿಶಿ ಮಾತನಾಡಿ, “ಶ್ರೀರಾಮ ಕಾಲೋನಿಯ ಈ ಶಾಲೆಯು ದೆಹಲಿಯ ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ ಎಂದಿದ್ದರು” ಎಂಬ ಅಂಶವನ್ನು ಕೂಡ ಅದರಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಹುಡುಕಾಡಿದಾಗ, ‘Directorate of Education GNCT of Delhi’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ದಿನಾಂಕ 9 ಮಾರ್ಚ್‌ 2024 ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದು ಕಂಡು ಬಂದಿದೆ. ಒಟ್ಟು 49 ನಿಮಿಷ 55 ಸೆಕೆಂಡ್‌ನ ಈ ವಿಡಿಯೋದಲ್ಲಿ 32 ನಿಮಿಷ 14 ಸೆಕೆಂಡ್‌ನಿಂದ ಅತಿಶಿ ಅವರು ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಮತ್ತು ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿರುವುದು ಇದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ವಿಡಿಯೋದಲ್ಲಿ 40 ನಿಮಿಷ 30 ಸೆಕೆಂಡ್‌ನಿಂದ ಅತಿಶಿ ಅವರು ಖಜೂರಿ ಖಾಸ್ ಪ್ರದೇಶದ ಶಾಲೆಯ ಉದ್ಘಾಟನೆಯ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿ ಹಾಜರಿದ್ದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅತಿಶಿ ಅಕ್ಷೇಪ ವ್ಯಕ್ತಪಡಿಸಿದವರನ್ನು ಕುಳಿತುಕೊಳ್ಳಲು ವಿನಂತಿಸಿದಾಗ, ನಗರಸಭಾ ಸದಸ್ಯ ಮೊಹಮ್ಮದ್ ಅಮಿಲ್ ಮಲಿಕ್ ವೇದಿಕೆಯ ಹಿಂದಿನಿಂದ ಅತಿಶಿಯ ಅವರ ಬಳಿಗೆ ಬಂದು, ‘ಇದು ಶ್ರೀರಾಮ್ ಕಾಲೋನಿಯ ಶಾಲೆ, ಶ್ರೀರಾಮ್ ಕಾಲೋನಿ ಎಂದು ಹೇಳಿ’ ಎಂದು ಹೇಳಿದ್ದಾರೆ.

ತಾನು ಹೇಳಿರುವುದು ತಪ್ಪು ಎಂದು ಅರಿವಾದಾಗ, ಅತಿಶಿ ಅವರು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆಯಾಚಿಸುತ್ತಾ, “ನಾನು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆ ಕೇಳಲು ಬಯಸುತ್ತೇನೆ. ಶ್ರೀರಾಮ್ ಕಾಲೋನಿಯ ಶಾಲೆಯಲ್ಲಿ ಖಜೂರಿ ಖಾಸ್, ಕರವಾಲ್ ನಗರ ಮತ್ತು ಸೋನಿಯಾ ವಿಹಾರ್‌ನ ಮಕ್ಕಳೂ ಕಲಿಯುತ್ತಾರೆ ಎಂದು ಸ್ಥಳದ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಎಲ್ಲಿಯೂ ಅತಿಶಿ ಜೈ ಶ್ರೀರಾಮ್‌ ಎಂಬ ಘೋಷಣೆ ಕೂಗಿದ್ದಾಗಲಿ, ಅದಕ್ಕೆ ಅವರು ಕ್ಷಮೆ ಕೇಳಿದ್ದಾಗಲಿ ಕಂಡು ಬಂದಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...