Homeಫ್ಯಾಕ್ಟ್‌ಚೆಕ್Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು...

Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

“ದೆಹಲಿಯ ಶ್ರೀರಾಮ್ ಕಾಲೊನಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕಿ ಅತಿಶಿ ಮರ್ಲೇನಾ ಅವರು ಭಾಷಣ ಮಾಡುವಾಗ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ, ಅಲ್ಲಿಯ ಬಹುಸಂಖ್ಯಾತ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಅತಿಶಿ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದ್ದಾರೆ” ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸಚಿವೆ ಅತಿಶಿ ಅವರು ವೇದಿಕೆ ಮೇಲೆ ನಿಂತು ಭಾಷಣ ಮಾಡುತ್ತಿರುವಾಗ ಕೆಲ ವ್ಯಕ್ತಿಗಳು ಎದ್ದು ನಿಂತು ಮಾತನಾಡಲು ಶುರು ಮಾಡಿರುವುದನ್ನು ಕಾಣಬಹುದು. ಆದರೆ, ಆ ವಿಡಿಯೋದಲ್ಲಿರುವಂತೆ ನಡೆದ ಘಟನೆ ಏನು ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ನಾನುಗೌರಿ. ಕಾಂ ಪರಿಶೀಲನೆ ನಡೆಸಿದೆ. ನಾವು ಸಂಬಂಧಿತ ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದಾಗ, ದಿನಾಂಕ 9 ಮಾರ್ಚ್‌ 2024ರಂದು ಆಮ್‌ ಆದ್ಮಿ ಪಕ್ಷ ಬಿಡುಗಡೆಗೊಳಿಸಿದ್ದ ಅಧಿಕೃತ ಪತ್ರಿಕಾ ಹೇಳಿಕೆಯೊಂದು ಲಭ್ಯವಾಗಿದೆ. ಅದರಲ್ಲಿ, ಈಶಾನ್ಯ ದೆಹಲಿಯ ಶ್ರೀರಾಮ್ ಕಾಲೋನಿಯಲ್ಲಿ ಕೇಜ್ರಿವಾಲ್ ಸರ್ಕಾರ ಎರಡು ಸರ್ಕಾರಿ ಶಾಲೆಗಳನ್ನು ಉದ್ಘಾಟಿಸಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಅತಿಶಿ ಮಾತನಾಡಿ, “ಶ್ರೀರಾಮ ಕಾಲೋನಿಯ ಈ ಶಾಲೆಯು ದೆಹಲಿಯ ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ ಎಂದಿದ್ದರು” ಎಂಬ ಅಂಶವನ್ನು ಕೂಡ ಅದರಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಹುಡುಕಾಡಿದಾಗ, ‘Directorate of Education GNCT of Delhi’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ದಿನಾಂಕ 9 ಮಾರ್ಚ್‌ 2024 ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದು ಕಂಡು ಬಂದಿದೆ. ಒಟ್ಟು 49 ನಿಮಿಷ 55 ಸೆಕೆಂಡ್‌ನ ಈ ವಿಡಿಯೋದಲ್ಲಿ 32 ನಿಮಿಷ 14 ಸೆಕೆಂಡ್‌ನಿಂದ ಅತಿಶಿ ಅವರು ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಮತ್ತು ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿರುವುದು ಇದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ವಿಡಿಯೋದಲ್ಲಿ 40 ನಿಮಿಷ 30 ಸೆಕೆಂಡ್‌ನಿಂದ ಅತಿಶಿ ಅವರು ಖಜೂರಿ ಖಾಸ್ ಪ್ರದೇಶದ ಶಾಲೆಯ ಉದ್ಘಾಟನೆಯ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿ ಹಾಜರಿದ್ದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅತಿಶಿ ಅಕ್ಷೇಪ ವ್ಯಕ್ತಪಡಿಸಿದವರನ್ನು ಕುಳಿತುಕೊಳ್ಳಲು ವಿನಂತಿಸಿದಾಗ, ನಗರಸಭಾ ಸದಸ್ಯ ಮೊಹಮ್ಮದ್ ಅಮಿಲ್ ಮಲಿಕ್ ವೇದಿಕೆಯ ಹಿಂದಿನಿಂದ ಅತಿಶಿಯ ಅವರ ಬಳಿಗೆ ಬಂದು, ‘ಇದು ಶ್ರೀರಾಮ್ ಕಾಲೋನಿಯ ಶಾಲೆ, ಶ್ರೀರಾಮ್ ಕಾಲೋನಿ ಎಂದು ಹೇಳಿ’ ಎಂದು ಹೇಳಿದ್ದಾರೆ.

ತಾನು ಹೇಳಿರುವುದು ತಪ್ಪು ಎಂದು ಅರಿವಾದಾಗ, ಅತಿಶಿ ಅವರು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆಯಾಚಿಸುತ್ತಾ, “ನಾನು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆ ಕೇಳಲು ಬಯಸುತ್ತೇನೆ. ಶ್ರೀರಾಮ್ ಕಾಲೋನಿಯ ಶಾಲೆಯಲ್ಲಿ ಖಜೂರಿ ಖಾಸ್, ಕರವಾಲ್ ನಗರ ಮತ್ತು ಸೋನಿಯಾ ವಿಹಾರ್‌ನ ಮಕ್ಕಳೂ ಕಲಿಯುತ್ತಾರೆ ಎಂದು ಸ್ಥಳದ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಎಲ್ಲಿಯೂ ಅತಿಶಿ ಜೈ ಶ್ರೀರಾಮ್‌ ಎಂಬ ಘೋಷಣೆ ಕೂಗಿದ್ದಾಗಲಿ, ಅದಕ್ಕೆ ಅವರು ಕ್ಷಮೆ ಕೇಳಿದ್ದಾಗಲಿ ಕಂಡು ಬಂದಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...