Homeಫ್ಯಾಕ್ಟ್‌ಚೆಕ್Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು...

Fact Check: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಆಪ್ ನಾಯಕಿ ಅತಿಶಿ ಕ್ಷಮೆ ಕೇಳಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

“ದೆಹಲಿಯ ಶ್ರೀರಾಮ್ ಕಾಲೊನಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ)ದ ನಾಯಕಿ ಅತಿಶಿ ಮರ್ಲೇನಾ ಅವರು ಭಾಷಣ ಮಾಡುವಾಗ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಕ್ಕೆ, ಅಲ್ಲಿಯ ಬಹುಸಂಖ್ಯಾತ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ಅತಿಶಿ ಅವರು ಕ್ಷಮೆ ಕೇಳಿ ಭಾಷಣ ಮುಂದುವರಿಸಿದ್ದಾರೆ” ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸಚಿವೆ ಅತಿಶಿ ಅವರು ವೇದಿಕೆ ಮೇಲೆ ನಿಂತು ಭಾಷಣ ಮಾಡುತ್ತಿರುವಾಗ ಕೆಲ ವ್ಯಕ್ತಿಗಳು ಎದ್ದು ನಿಂತು ಮಾತನಾಡಲು ಶುರು ಮಾಡಿರುವುದನ್ನು ಕಾಣಬಹುದು. ಆದರೆ, ಆ ವಿಡಿಯೋದಲ್ಲಿರುವಂತೆ ನಡೆದ ಘಟನೆ ಏನು ಎಂಬುವುದರ ಬಗ್ಗೆ ಮಾಹಿತಿಯಿಲ್ಲ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯ ಸತ್ಯಾಸತ್ಯತೆಯನ್ನು ನಾನುಗೌರಿ. ಕಾಂ ಪರಿಶೀಲನೆ ನಡೆಸಿದೆ. ನಾವು ಸಂಬಂಧಿತ ಕೀ ವರ್ಡ್‌ಗಳನ್ನು ಬಳಸಿ ಗೂಗಲ್ ಸರ್ಚ್‌ ಮಾಡಿದಾಗ, ದಿನಾಂಕ 9 ಮಾರ್ಚ್‌ 2024ರಂದು ಆಮ್‌ ಆದ್ಮಿ ಪಕ್ಷ ಬಿಡುಗಡೆಗೊಳಿಸಿದ್ದ ಅಧಿಕೃತ ಪತ್ರಿಕಾ ಹೇಳಿಕೆಯೊಂದು ಲಭ್ಯವಾಗಿದೆ. ಅದರಲ್ಲಿ, ಈಶಾನ್ಯ ದೆಹಲಿಯ ಶ್ರೀರಾಮ್ ಕಾಲೋನಿಯಲ್ಲಿ ಕೇಜ್ರಿವಾಲ್ ಸರ್ಕಾರ ಎರಡು ಸರ್ಕಾರಿ ಶಾಲೆಗಳನ್ನು ಉದ್ಘಾಟಿಸಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಅತಿಶಿ ಮಾತನಾಡಿ, “ಶ್ರೀರಾಮ ಕಾಲೋನಿಯ ಈ ಶಾಲೆಯು ದೆಹಲಿಯ ಅತ್ಯುತ್ತಮ ಶಾಲೆಗಳಲ್ಲಿ ಒಂದಾಗಿದೆ ಎಂದಿದ್ದರು” ಎಂಬ ಅಂಶವನ್ನು ಕೂಡ ಅದರಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ವಿಡಿಯೋ ಕುರಿತು ನಾವು ಇನ್ನಷ್ಟು ಹುಡುಕಾಡಿದಾಗ, ‘Directorate of Education GNCT of Delhi’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ದಿನಾಂಕ 9 ಮಾರ್ಚ್‌ 2024 ರಂದು ಅಪ್ಲೋಡ್ ಮಾಡಲಾದ ವಿಡಿಯೋವೊಂದು ಕಂಡು ಬಂದಿದೆ. ಒಟ್ಟು 49 ನಿಮಿಷ 55 ಸೆಕೆಂಡ್‌ನ ಈ ವಿಡಿಯೋದಲ್ಲಿ 32 ನಿಮಿಷ 14 ಸೆಕೆಂಡ್‌ನಿಂದ ಅತಿಶಿ ಅವರು ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಮತ್ತು ಇಂಕ್ವಿಲಾಬ್ ಜಿಂದಾಬಾದ್’ ಎಂಬ ಘೋಷಣೆಗಳೊಂದಿಗೆ ತಮ್ಮ ಭಾಷಣವನ್ನು ಪ್ರಾರಂಭಿಸಿರುವುದು ಇದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ವಿಡಿಯೋದಲ್ಲಿ 40 ನಿಮಿಷ 30 ಸೆಕೆಂಡ್‌ನಿಂದ ಅತಿಶಿ ಅವರು ಖಜೂರಿ ಖಾಸ್ ಪ್ರದೇಶದ ಶಾಲೆಯ ಉದ್ಘಾಟನೆಯ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಕಾರ್ಯಕ್ರಮದಲ್ಲಿ ಹಾಜರಿದ್ದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅತಿಶಿ ಅಕ್ಷೇಪ ವ್ಯಕ್ತಪಡಿಸಿದವರನ್ನು ಕುಳಿತುಕೊಳ್ಳಲು ವಿನಂತಿಸಿದಾಗ, ನಗರಸಭಾ ಸದಸ್ಯ ಮೊಹಮ್ಮದ್ ಅಮಿಲ್ ಮಲಿಕ್ ವೇದಿಕೆಯ ಹಿಂದಿನಿಂದ ಅತಿಶಿಯ ಅವರ ಬಳಿಗೆ ಬಂದು, ‘ಇದು ಶ್ರೀರಾಮ್ ಕಾಲೋನಿಯ ಶಾಲೆ, ಶ್ರೀರಾಮ್ ಕಾಲೋನಿ ಎಂದು ಹೇಳಿ’ ಎಂದು ಹೇಳಿದ್ದಾರೆ.

ತಾನು ಹೇಳಿರುವುದು ತಪ್ಪು ಎಂದು ಅರಿವಾದಾಗ, ಅತಿಶಿ ಅವರು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆಯಾಚಿಸುತ್ತಾ, “ನಾನು ಶ್ರೀರಾಮ್ ಕಾಲೋನಿಯ ನಿವಾಸಿಗಳಿಗೆ ಕ್ಷಮೆ ಕೇಳಲು ಬಯಸುತ್ತೇನೆ. ಶ್ರೀರಾಮ್ ಕಾಲೋನಿಯ ಶಾಲೆಯಲ್ಲಿ ಖಜೂರಿ ಖಾಸ್, ಕರವಾಲ್ ನಗರ ಮತ್ತು ಸೋನಿಯಾ ವಿಹಾರ್‌ನ ಮಕ್ಕಳೂ ಕಲಿಯುತ್ತಾರೆ ಎಂದು ಸ್ಥಳದ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ. ಆದರೆ, ಈ ವಿಡಿಯೋದಲ್ಲಿ ಎಲ್ಲಿಯೂ ಅತಿಶಿ ಜೈ ಶ್ರೀರಾಮ್‌ ಎಂಬ ಘೋಷಣೆ ಕೂಗಿದ್ದಾಗಲಿ, ಅದಕ್ಕೆ ಅವರು ಕ್ಷಮೆ ಕೇಳಿದ್ದಾಗಲಿ ಕಂಡು ಬಂದಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : Fact Check: ಮಹುವಾ ಮೊಯಿತ್ರಾ ‘ಎಗ್ಸ್’ ಎಂದಿರುವುದನ್ನು ‘ಸೆಕ್ಸ್’ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...