Homeಫ್ಯಾಕ್ಟ್‌ಚೆಕ್Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಎಕ್ಸ್‌ ಬಳೆದಾರರು ಈ ಕುರಿತ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿ, ಇಲ್ಲಿ

ಫ್ಯಾಕ್ಟ್‌ಚೆಕ್ : ಇಬ್ಬರು ಸಂಪುಟ ಸಚಿವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬ ಸುದ್ದಿಯ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ‘Twexport‘ಗೂಗಲ್‌ ಕ್ರೋಮ್ ಎಕ್ಸ್‌ಟೆಂಶನ್ ಟೂಲ್ ಬಳಸಿ ನಾವು ಸಚಿವ ಭಾರಧ್ವಾಜ್ ಅವರು ಫಾಲೋ ಮಾಡುತ್ತಿರುವ ವ್ಯಕ್ತಿಗಳ ಪಟ್ಟಿ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಈ ಕುರಿತು ಸಚಿವ ಸೌರಭ್ ಭಾರದ್ವಾಜ್ ಅವರು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬುವುದು ಸುಳ್ಳು ಸುದ್ದಿ. ನಾವಿಬ್ಬರು ಪರಸ್ಪರ ಫಾಲೋ ಮಾಡುತ್ತಿದ್ದೇವೆ” ಎಂದಿದ್ದಾರೆ.

Phantombuster‘ಮತ್ತೊಂದು ಟೂಲ್ ಬಳಸಿ ನಾವು ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿರುವವರ ಪಟ್ಟಿ ಪರಿಶೀಲಿಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಆಮ್‌ ಆದ್ಮಿ ಪಕ್ಷದ ಮುಖ್ಯ ಮಾಧ್ಯಮ ಸಂಯೋಜಕರಾಗಿರುವ ವಿಕಾಸ್ ಯೋಗಿ ಅವರು ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಇಬ್ಬರು ಸಚಿವರಾದ ಅತಿಶಿ ಮತ್ತು ಭಾರದ್ವಾಜ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಬಿಜೆಪಿ ಐಟಿ ಸೆಲ್‌ ಸುಳ್ಳು ಸುದ್ದಿಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ನಾವು ವಿವಿಧ ಟೂಲ್‌ಗಳನ್ನು ಬಳಸಿ ನಡೆಸಿದ ಪರಿಶೀಲನೆ ಮತ್ತು ಆಮ್‌ ಆದ್ಮಿ ಪಕ್ಷದ ಅಧಿಕೃತ ಮೂಲಗಳ ಪ್ರಕಾರ ದೆಹಲಿ ಸರ್ಕಾರ ಸಚಿವ ಸಂಪುಟದ ಸಚಿವರು ಹಾಗೂ ಆಪ್ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...