Homeಫ್ಯಾಕ್ಟ್‌ಚೆಕ್Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

Fact Check: ಆಪ್ ನಾಯಕರು ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ದೆಹಲಿಯ ಸಂಪುಟ ಸಚಿವರು ಹಾಗೂ ಎಎಪಿ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ (ಹಿಂದಿನ ಟ್ವಿಟರ್) ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂದು ಹೇಳುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಎಕ್ಸ್‌ ಬಳೆದಾರರು ಈ ಕುರಿತ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಇಲ್ಲಿ, ಇಲ್ಲಿ

ಫ್ಯಾಕ್ಟ್‌ಚೆಕ್ : ಇಬ್ಬರು ಸಂಪುಟ ಸಚಿವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬ ಸುದ್ದಿಯ ಬಗ್ಗೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ‘Twexport‘ಗೂಗಲ್‌ ಕ್ರೋಮ್ ಎಕ್ಸ್‌ಟೆಂಶನ್ ಟೂಲ್ ಬಳಸಿ ನಾವು ಸಚಿವ ಭಾರಧ್ವಾಜ್ ಅವರು ಫಾಲೋ ಮಾಡುತ್ತಿರುವ ವ್ಯಕ್ತಿಗಳ ಪಟ್ಟಿ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಈ ಕುರಿತು ಸಚಿವ ಸೌರಭ್ ಭಾರದ್ವಾಜ್ ಅವರು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ನಾನು ಅರವಿಂದ್ ಕೇಜ್ರಿವಾಲ್ ಅವರನ್ನು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿಲ್ಲ ಎಂಬುವುದು ಸುಳ್ಳು ಸುದ್ದಿ. ನಾವಿಬ್ಬರು ಪರಸ್ಪರ ಫಾಲೋ ಮಾಡುತ್ತಿದ್ದೇವೆ” ಎಂದಿದ್ದಾರೆ.

Phantombuster‘ಮತ್ತೊಂದು ಟೂಲ್ ಬಳಸಿ ನಾವು ಸಚಿವೆ ಅತಿಶಿ ಅವರು ಎಕ್ಸ್‌ನಲ್ಲಿ ಫಾಲೋ ಮಾಡುತ್ತಿರುವವರ ಪಟ್ಟಿ ಪರಿಶೀಲಿಸಿದ್ದೇವೆ. ಈ ವೇಳೆ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿರುವುದು ಕಂಡು ಬಂದಿದೆ.

Yogi took to his official X handle to clarify that both the cabinet ministers follow Kejriwal on the platform.

ಆಮ್‌ ಆದ್ಮಿ ಪಕ್ಷದ ಮುಖ್ಯ ಮಾಧ್ಯಮ ಸಂಯೋಜಕರಾಗಿರುವ ವಿಕಾಸ್ ಯೋಗಿ ಅವರು ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಇಬ್ಬರು ಸಚಿವರಾದ ಅತಿಶಿ ಮತ್ತು ಭಾರದ್ವಾಜ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ. ಬಿಜೆಪಿ ಐಟಿ ಸೆಲ್‌ ಸುಳ್ಳು ಸುದ್ದಿಗಳ ಬಗ್ಗೆ ಜಾಗರೂಕರಾಗಿರಿ” ಎಂದು ಬರೆದುಕೊಂಡಿದ್ದಾರೆ.

ನಾವು ವಿವಿಧ ಟೂಲ್‌ಗಳನ್ನು ಬಳಸಿ ನಡೆಸಿದ ಪರಿಶೀಲನೆ ಮತ್ತು ಆಮ್‌ ಆದ್ಮಿ ಪಕ್ಷದ ಅಧಿಕೃತ ಮೂಲಗಳ ಪ್ರಕಾರ ದೆಹಲಿ ಸರ್ಕಾರ ಸಚಿವ ಸಂಪುಟದ ಸಚಿವರು ಹಾಗೂ ಆಪ್ ನಾಯಕರಾದ ಅತಿಶಿ ಮರ್ಲೇನಾ ಮತ್ತು ಸೌರಭ್ ಭಾರದ್ವಾಜ್ ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಫಾಲೋ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು.

ಇದನ್ನೂ ಓದಿ : Fact Check : ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...