Homeಫ್ಯಾಕ್ಟ್‌ಚೆಕ್Fact Check: ಅಖಿಲೇಶ್ ಯಾದವ್ ದಂಪತಿ ಅತೀಕ್ ಅಹ್ಮದ್ ಸಮಾಧಿಗೆ ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

Fact Check: ಅಖಿಲೇಶ್ ಯಾದವ್ ದಂಪತಿ ಅತೀಕ್ ಅಹ್ಮದ್ ಸಮಾಧಿಗೆ ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ಸಮಾಧಿಯೊಂದಕ್ಕೆ ನಮಸ್ಕರಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, “ಅಖಿಲೇಶ್ ದಂಪತಿ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್‌ ಅವರ ಸಮಾಧಿಗೆ ಗೌರವ ಸಲ್ಲಿಸಿದ್ದಾರೆ” ಎಂದು ಸುದ್ದಿ ಹಬ್ಬಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋಗೆ ಸಂಬಂಧಿಸಿದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಪೋಟೋ ಹುಡುಕಿದ್ದೇವೆ. ಈ ವೇಳೆ 2022ರ ನವೆಂಬರ್‌ 14ರಂದು ಅಖಿಲೇಶ್ ಯಾದವ್ ಅವರು ಆ ಫೋಟೋವನ್ನು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವುದು ಕಂಡು ಬಂದಿದೆ.

ಅಖಿಲೇಶ್ ಯಾದವ್‌ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಂತೆ, ಅವರ ಪತ್ನಿ ಡಿಂಪಲ್ ಯಾದವ್ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಮೊದಲು ಸಮಾಜವಾದಿ ಪಕ್ಷದ ನಾಯಕ ದಿವಂಗತ ಮುಲಾಯಂ ಸಿಂಗ್ ಯಾದವ್ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮಸ್ಕರಿಸಿದ್ದು ಎಂದು ತಿಳಿದು ಬಂದಿದೆ.

ಹೆಚ್ಚುವರಿಯಾಗಿ, ಡಿಂಪಲ್ ಯಾದವ್ ಅವರು ಕೂಡ ತನ್ನ ಎಕ್ಸ್‌ ಖಾತೆಯಲ್ಲಿ ಅದೇ ಫೋಟೋವನ್ನು ಪೋಸ್ಟ್ ಮಾಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿರುವುದನ್ನು ಅವರು ಖಚಿತಪಡಿಸಿದ್ದಾರೆ. ಹಾಗಾಗಿ, ಅಖಿಲೇಶ್ ದಂಪತಿ ಗ್ಯಾಂಗ್‌ಸ್ಟರ್‌ ಸಮಾಧಿಗೆ ನಮಸ್ಕರಿದ್ದಾರೆ ಎಂಬುವುದು ಸುಳ್ಳು ಎಂದು ಈ ಮೂಲಕ ಖಚಿತಪಡಿಸಬಹುದು.

ಅಖಿಲೇಶ್ ದಂಪತಿ ಮುಲಾಯಂ ಸಿಂಗ್ ಯಾದವ್ ಅವರ ಸಮಾಧಿಗೆ ನಮಸ್ಕರಿಸಿದ ಬಗ್ಗೆ ನವೆಂಬರ್ 14,2022ರಂದು ಈಟಿವಿ ಭಾರತ್ ಇಂಗ್ಲಿಷ್ ಕೂಡ ವರದಿ ಮಾಡಿತ್ತು. ಅದರ ಸ್ಕ್ರೀನ್ ಶಾಟ್ ಕೆಳಗಡೆ ಇದೆ.

ಒಟ್ಟಾರೆಯಾಗಿ ಹೇಳುವುದಾದರೆ, ಅಖಿಲೇಶ್ ಮತ್ತು ಡಿಂಪಲ್ ಯಾದವ್ ಅವರ ವೈರಲ್ ಫೋಟೋ ಮುಲಾಯಂ ಸಿಂಗ್ ಯಾದವ್ ಅವರ ಸಮಾಧಿಗೆ ನಮಸ್ಕರಿಸುವಾಗ ತೆಗೆದಿರುವುದಾಗಿದೆ. ಅಲ್ಲದೆ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್‌ ಅವರ ಸಮಾಧಿಗೆ ನಮಸ್ಕರಿಸಿದ ಫೋಟೋ ಅದಲ್ಲ.

ಅತೀಕ್ ಅಹ್ಮದ್ 2023ರ ಏಪ್ರಿಲ್‌ನಲ್ಲಿ ಪೊಲೀಸ್ ವಶದಲ್ಲಿದ್ದಾಗಲೇ ಗುಂಡೇಟಿಗೆ ಬಲಿಯಾಗಿದ್ದರು. ಸಾವಿಗೂ ಮುನ್ನ ಗ್ಯಾಂಗ್‌ಸ್ಟರ್ ಆಗಿ ಗುರುತಿಸಿಕೊಂಡಿದ್ದ ಅತೀಕ್ ಅಹ್ಮದ್, ಸಮಾಜವಾದಿ ಪಕ್ಷದಿಂದ ಲೋಕಸಭೆಯನ್ನು ಪ್ರತಿನಿಧಿಸಿದ್ದರು. ಉತ್ತರ ಪ್ರದೇಶದ ಫುಲ್ಪುರ್ ಕ್ಷೇತ್ರದಿಂದ 14ನೇ ಲೋಕಸಭೆಗೆ ಅತೀಕ್ ಅಹ್ಮದ್ ಸದಸ್ಯರಾಗಿದ್ದರು. ಸಂಸತ್‌ನಲ್ಲಿ ರೈಲ್ವೆ ಸಂಬಂಧಿಸಿದ ಸಮಿತಿಯೊಂದರ ಸದಸ್ಯರೂ ಆಗಿದ್ದರು. ಅಲ್ಲದೆ, ಉತ್ತರ ಪ್ರದೇಶ ವಿಧಾನಸಭೆಗೂ ಅವರು ಆಯ್ಕೆಯಾಗಿದ್ದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ: ಖಾಸಗಿ ಎಫ್‌ಎಸ್‌ಎಲ್‌ ವರದಿ ಹರಿಬಿಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...