Homeಫ್ಯಾಕ್ಟ್‌ಚೆಕ್Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಕೇಜ್ರಿವಾಲ್ ಬಂಧನದ ಬಳಿಕ ಹಳೆಯ ಪತ್ರಿಕಾ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ವರದಿಯನ್ನು ಆಧರಿಸಿ ಕೇಜ್ರಿವಾಲ್ ವಿದ್ಯಾರ್ಥಿ ಜೀವನದಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂದು ಹೇಳಲಾಗ್ತಿದೆ.

ಜೂನ್ 8, 1987ರಲ್ಲಿ ವೈರಲ್ ಪತ್ರಿಕಾ ವರದಿ ಪ್ರಕಟಗೊಂಡಿದೆ. ಅದರಲ್ಲಿ ಸ್ಥಳೀಯ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಐಐಟಿ ಖರಗ್‌ಪುರದ 19 ವರ್ಷದ ವಿದ್ಯಾರ್ಥಿ ಅರವಿಂದ್ ಕೇಜ್ರಿವಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬರೆಯಲಾಗಿದೆ.

ಅನೇಕ ಎಕ್ಸ್‌ ಬಳಕೆದಾರರು ವೈರಲ್ ವರದಿಯನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವರದಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಮೊದಲು ನಾವು ಕೀ ವರ್ಡ್‌ಗಳನ್ನು ಬಳಸಿ ವರದಿ ಕುರಿತು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬ ಯಾವುದೇ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ವೈರಲ್ ವರದಿಯಲ್ಲಿ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್’ ಎಂದು ಬರೆಯಲಾಗಿದೆ. ಆ ಹೆಸರು ಬಳಸಿ ನಾವು ಹುಡುಕಾಡಿದರೂ ಕೇಜ್ರಿವಾಲ್‌ ಅವರು ಅತ್ಯಾಚಾರ ಪ್ರಕರಣದ ಆರೋಪಿ ಎಂಬುವುದರ ಕುರಿತು ಯಾವುದೇ ವರದಿ ನಮಗೆ ದೊರೆತಿಲ್ಲ. ಇನ್ನು ವೈರಲ್‌ ಪತ್ರಿಕಾ ವರದಿಯನ್ನು ಗಮನಿಸಿದಾಗ ನಮಗೆ ಕೆಲವೊಂದು ವ್ಯಾತ್ಯಾಸಗಳು ಕಂಡು ಬಂದಿವೆ.

ವೈರಲ್‌ ಆಗುತ್ತಿರುವ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್‌’ ಎಂದಿದೆ ಮತ್ತು ಅದರಲ್ಲಿನ ಶೀರ್ಷಿಕೆಯಲ್ಲಿಐಐಟಿ ವಿದ್ಯಾರ್ಥಿ ಅತ್ಯಾಚಾರದ ಆರೋಪಿ ಎಂದು ಅರ್ಧ ಸುದ್ದಿಯನ್ನು ಪ್ರಕಟಿಸಲಾಗಿದೆ. ಆದರೆ ಮೂರನೇ ಕಾಲಂನಲ್ಲಿ ಬೇರೆಯದ್ದೇ ಸುದ್ದಿ ಇದೆ. ಹಾಗಾಗಿ, ಪತ್ರಿಕಾ ವರದಿಯು fodey.com ನಂತಹ ವೆಬ್‌ಸೈಟ್‌ ಬಳಸಿ ಸೃಷ್ಠಿಸಿರುವ ನಕಲಿ ವರದಿ ಎಂಬುವುದು ಪತ್ತೆಯಾಗಿದೆ.

fodey.com ನಲ್ಲಿರುವ ಪತ್ರಿಕೆಯಾದ ‘ದಿ ಡೈಲಿ ವಾಟ್‌ಎವರ್‌’ ಎಂಬುವುದರಲ್ಲಿ 30 ಆಗಸ್ಟ್‌ 2006 ಎಂಬ ದಿನಾಂಕವಿದೆ. ಅದರ ಹೆಡ್‌ಲೈನ್‌ನಲ್ಲಿ ‘ಮಂಗಳ ಗ್ರಹದ ನಿವಾಸಿಗಳು ಭೂಮಿಯನ್ನು ಆಕ್ರಮಿಸುತ್ತಾರೆ’ ಎಂಬ ಶೀರ್ಷಿಕೆ ಇದೆ. ಅದನ್ನೇ ಟೆಲಿಗ್ರಾಫ್ ಹೆಸರಿನಲ್ಲಿ ಬದಲಾಯಿಸಿ ಸುಳ್ಳು ಸುದ್ದಿ ಹಬ್ಬಿರುವುದು ಗೊತ್ತಾಗಿದೆ.


ಹಾಗಾಗಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಐಐಟಿ ಖರಗ್‌ಪುರ ವಿದ್ಯಾರ್ಥಿಯಾಗಿದ್ದಾಗ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...