Homeಫ್ಯಾಕ್ಟ್‌ಚೆಕ್Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

Fact Check: ಅರವಿಂದ್ ಕೇಜ್ರಿವಾಲ್ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪ್ರಸ್ತುತ ಅವರು ಜೈಲಿನಲ್ಲಿದ್ದಾರೆ.

ಕೇಜ್ರಿವಾಲ್ ಬಂಧನದ ಬಳಿಕ ಹಳೆಯ ಪತ್ರಿಕಾ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ವರದಿಯನ್ನು ಆಧರಿಸಿ ಕೇಜ್ರಿವಾಲ್ ವಿದ್ಯಾರ್ಥಿ ಜೀವನದಲ್ಲಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದರು ಎಂದು ಹೇಳಲಾಗ್ತಿದೆ.

ಜೂನ್ 8, 1987ರಲ್ಲಿ ವೈರಲ್ ಪತ್ರಿಕಾ ವರದಿ ಪ್ರಕಟಗೊಂಡಿದೆ. ಅದರಲ್ಲಿ ಸ್ಥಳೀಯ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಐಐಟಿ ಖರಗ್‌ಪುರದ 19 ವರ್ಷದ ವಿದ್ಯಾರ್ಥಿ ಅರವಿಂದ್ ಕೇಜ್ರಿವಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಬರೆಯಲಾಗಿದೆ.

ಅನೇಕ ಎಕ್ಸ್‌ ಬಳಕೆದಾರರು ವೈರಲ್ ವರದಿಯನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವರದಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಮೊದಲು ನಾವು ಕೀ ವರ್ಡ್‌ಗಳನ್ನು ಬಳಸಿ ವರದಿ ಕುರಿತು ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಅರವಿಂದ್ ಕೇಜ್ರಿವಾಲ್ ಅವರು ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬ ಯಾವುದೇ ಮಾಧ್ಯಮ ವರದಿಗಳು ಲಭ್ಯವಾಗಿಲ್ಲ.

ವೈರಲ್ ವರದಿಯಲ್ಲಿ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್’ ಎಂದು ಬರೆಯಲಾಗಿದೆ. ಆ ಹೆಸರು ಬಳಸಿ ನಾವು ಹುಡುಕಾಡಿದರೂ ಕೇಜ್ರಿವಾಲ್‌ ಅವರು ಅತ್ಯಾಚಾರ ಪ್ರಕರಣದ ಆರೋಪಿ ಎಂಬುವುದರ ಕುರಿತು ಯಾವುದೇ ವರದಿ ನಮಗೆ ದೊರೆತಿಲ್ಲ. ಇನ್ನು ವೈರಲ್‌ ಪತ್ರಿಕಾ ವರದಿಯನ್ನು ಗಮನಿಸಿದಾಗ ನಮಗೆ ಕೆಲವೊಂದು ವ್ಯಾತ್ಯಾಸಗಳು ಕಂಡು ಬಂದಿವೆ.

ವೈರಲ್‌ ಆಗುತ್ತಿರುವ ಪತ್ರಿಕೆಯ ಹೆಸರು ‘ದಿ ಟೆಲಿಗ್ರಾಫ್‌’ ಎಂದಿದೆ ಮತ್ತು ಅದರಲ್ಲಿನ ಶೀರ್ಷಿಕೆಯಲ್ಲಿಐಐಟಿ ವಿದ್ಯಾರ್ಥಿ ಅತ್ಯಾಚಾರದ ಆರೋಪಿ ಎಂದು ಅರ್ಧ ಸುದ್ದಿಯನ್ನು ಪ್ರಕಟಿಸಲಾಗಿದೆ. ಆದರೆ ಮೂರನೇ ಕಾಲಂನಲ್ಲಿ ಬೇರೆಯದ್ದೇ ಸುದ್ದಿ ಇದೆ. ಹಾಗಾಗಿ, ಪತ್ರಿಕಾ ವರದಿಯು fodey.com ನಂತಹ ವೆಬ್‌ಸೈಟ್‌ ಬಳಸಿ ಸೃಷ್ಠಿಸಿರುವ ನಕಲಿ ವರದಿ ಎಂಬುವುದು ಪತ್ತೆಯಾಗಿದೆ.

fodey.com ನಲ್ಲಿರುವ ಪತ್ರಿಕೆಯಾದ ‘ದಿ ಡೈಲಿ ವಾಟ್‌ಎವರ್‌’ ಎಂಬುವುದರಲ್ಲಿ 30 ಆಗಸ್ಟ್‌ 2006 ಎಂಬ ದಿನಾಂಕವಿದೆ. ಅದರ ಹೆಡ್‌ಲೈನ್‌ನಲ್ಲಿ ‘ಮಂಗಳ ಗ್ರಹದ ನಿವಾಸಿಗಳು ಭೂಮಿಯನ್ನು ಆಕ್ರಮಿಸುತ್ತಾರೆ’ ಎಂಬ ಶೀರ್ಷಿಕೆ ಇದೆ. ಅದನ್ನೇ ಟೆಲಿಗ್ರಾಫ್ ಹೆಸರಿನಲ್ಲಿ ಬದಲಾಯಿಸಿ ಸುಳ್ಳು ಸುದ್ದಿ ಹಬ್ಬಿರುವುದು ಗೊತ್ತಾಗಿದೆ.


ಹಾಗಾಗಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಐಐಟಿ ಖರಗ್‌ಪುರ ವಿದ್ಯಾರ್ಥಿಯಾಗಿದ್ದಾಗ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದರು ಎಂಬುವುದು ಸುಳ್ಳು

ಇದನ್ನೂ ಓದಿ : Fact Check: ಯೂಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನದವರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...