Homeಫ್ಯಾಕ್ಟ್‌ಚೆಕ್Fact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

Fact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

‘ಈ ಬಾರಿಯ ಲೋಕಸಭೆ ಚುನಾವಣೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ’ ಎಂಬ ಸುದ್ದಿಯ ಪತ್ರಿಕಾ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವರದಿಯಲ್ಲಿ ಚುನಾವಣಾ ಆಯೋಗ ಕೈಗೊಂಡಿದೆ ಎನ್ನಲಾದ ಹೊಸ ನಿರ್ಧಾರದ ಕುರಿತು ಕೆಲವರ ಅಭಿಪ್ರಾಯವನ್ನೂ ಪ್ರಕಟಿಸಲಾಗಿದೆ. ಅನೇಕ ಸಾಮಾಜಿಕ ಬಳಕೆದಾರರು ಪತ್ರಿಕೆಯ ಪ್ರತಿಯನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಇತ್ತೀಚೆಗೆ, ಭಾರತೀಯ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳೆ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್‌ನಲ್ಲಿ ಮತದಾನ ನಡೆಸುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

ಪತ್ರಿಕಾ ವರದಿಯ ಪ್ರತಿ ವೈರಲ್ ಆಗುತ್ತಿದ್ದಂತೆ ಭಾರತೀಯ ಚುನಾವಣಾ ಆಯೋಗ ಈ ಕುರಿತು ಸ್ಪಷ್ಟನೆ ನೀಡಿದ್ದು, “ಬ್ಯಾಲೆಟ್ ಪೇಪರ್ ಮೂಲಕ 2024ರ ಲೋಕಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಎಂದು ಛತ್ತೀಸ್‌ಗಢದ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿದೆ. ಇದ ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತವಾಗಿದೆ. ಅಂತಹ ಯಾವುದೇ ನಿರ್ದೇಶನಗಳನ್ನು ನೀಡಲಾಗಿಲ್ಲ” ಎಂದು ಎಕ್ಸ್‌ನಲ್ಲಿ ತಿಳಿಸಿದೆ.

ಭಾರತದ ಸಂವಿಧಾನದ 324 ನೇ ವಿಧಿಯ ಪ್ರಕಾರ, ಭಾರತದ ಚುನಾವಣಾ ಆಯೋಗವು ದೇಶದಲ್ಲಿ ಚುನಾವಣೆಗಳನ್ನು ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣ ಮಾಡುವ ಅಧಿಕಾರವನ್ನು ಹೊಂದಿದೆ. ಹೆಚ್ಚುವರಿಯಾಗಿ, 1988ರಲ್ಲಿ, ಸಂಸತ್ತು ಜನರ ಪ್ರಾತಿನಿಧ್ಯ ಕಾಯ್ದೆ 1951ಕ್ಕೆ ತಿದ್ದುಪಡಿ ತಂದು ಸೆಕ್ಷನ್ 61ಎ ಅನ್ನು ಪರಿಚಯಿಸಿದೆ. ಇದು ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಬಳಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಅಧಿಕಾರ ನೀಡುತ್ತದೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಅಧಿಕೃತ ವೇಳಾಪಟ್ಟಿಯಲ್ಲಿಯೂ ಇವಿಎಂಗಳನ್ನು ಬಳಸಿ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ವೈರಲ್ ಸುದ್ದಿಯಲ್ಲಿರುವಂತೆ ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆ ನಡೆಸುವ ನಿರ್ಧಾರ ಮಾತ್ರವಲ್ಲ, ಒಲವನ್ನು ಕೂಡ ಚುನಾವಣಾ ಆಯೋಗ ವ್ಯಕ್ತಪಡಿಸಿಲ್ಲ.

ದೇಶದ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್‌ಗಳ ಬಳಕೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ನ್ಯಾಯಾಲಯ ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಖಚಿತತೆ ವ್ಯಕ್ತಪಡಿಸಿದೆ. ಈ ಹಿಂದೆ, ಸುಪ್ರೀಂ ಕೋರ್ಟ್ ಮತ್ತು ಹಲವು ರಾಜ್ಯಗಳ ಹೈಕೋರ್ಟ್‌ಗಳು ಕೂಡ ಇದೇ ರೀತಿಯ ಮನವಿಗಳನ್ನು ಅನೇಕ ಸಂದರ್ಭಗಳಲ್ಲಿ ತಿರಸ್ಕರಿಸಿವೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ಚುನಾವಣಾ ಆಯೋಗವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಳನ್ನು ನಡೆಸುವ ವಿಚಾರವನ್ನು ತಳ್ಳಿಹಾಕಿದೆ. ಕೆಲ ಯೂಟ್ಯೂಬ್ ಚಾನೆಲ್‌ಗಳು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳನ್ನು ಬಳಸಲಾಗುತ್ತದೆ ಎಂದು  ಈ ಹಿಂದೆ ತಪ್ಪು ಮಾಹಿತಿ ಪ್ರಸಾರ ಮಾಡಿದ್ದಾಗ, ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಅದನ್ನು ಸುಳ್ಳು ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ : Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...