Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ...

FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ನ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಕೋಳಿ ಅಂಗಡಿ (ಚಿಕನ್ ಶಾಪ್) ತೆರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ದೇವಾಲಯದಂತಹ ಕಟ್ಟಡವೊಂದು ಕಾಣಿಸುತ್ತಿದ್ದು, ವ್ಯಕ್ತಿಯೊಬ್ಬರು ಸ್ನೇಹಿತರೇ ಇದು ಸೀತಾರಾಮ ಮಂದಿರ. ಇದರ ಕೆಳಗಡೆ ಚಿಕನ್ ಅಂಗಡಿ ತೆರೆಯಲಾಗಿದೆ ಎಂದು ಹೇಳುವುದು ಕೇಳಿಸುತ್ತದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋದ ಮೇಲೆ ” ಹಿಂದೂಗಳೇ ಎದ್ದೇಳಿ. ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೀತಾರಾಮ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ. ಇದನ್ನು ಈ ಹಿಂದೆ ರಾಹುಲ್ ಗಾಂಧಿ ಉದ್ಘಾಟಿಸಿದ್ದರು. ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಬಂದರೆ. ನಮ್ಮ ಎಲ್ಲಾ ಮಂದಿರಗಳನ್ನು ಏನು ಮಾಡಬಹುದು ಎಂದು ಯೋಚಿಸಿ. ಇದಕ್ಕಾಗಿಯೇ ಮುಸ್ಲಿಮರು ಕಾಂಗ್ರೆಸ್ ವೋಟ್ ಹಾಕ್ತಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಈ ಕುರಿತು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅನೇಕ ಮಾಧ್ಯಮಗಳು ಪಾಕಿಸ್ತಾನದಲ್ಲಿ ದೇವಾಲಯವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದೆ ಎಂದಿದೆ.

‘Makhan Ram jaipal Vlogs’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 25 ಆಗಸ್ಟ್ 2023ರಂದು ‘Seeta Ram Mandir Became chicken shop after partition|| Condition of Mandir In Pakistan’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ. ಪಾಕಿಸ್ತಾನದಲ್ಲಿ ಬೃಹತ್ ಸೀತಾರಾಮ ಮಂದಿರವೊಂದರಲ್ಲಿ ಚಿಕನ್ ಶಾಪ್ ಸೇರಿದಂತೆ ಇತರ ಹಲವು ಅಂಗಡಿಗಳು ತೆರೆದಿರುವುದನ್ನು ವ್ಲಾಗರ್ ತೋರಿಸಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಂದಿರ ಮತ್ತು ಯೂಟ್ಯೂಬರ್ ತೋರಿಸಿರುವ ಮಂದಿರ ಒಂದೇ ಆಗಿದೆ.

ಯೂಟ್ಯೂಬ್ ವಿಡಿಯೋದಲ್ಲಿ ತೋರಿಸಿರುವ ದೇವಾಲಯವು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಆ ಪ್ರದೇಶದ ಸುತ್ತಲೂ ಯಾವುದೇ ಹಿಂದೂಗಳು ವಾಸಿಸುತ್ತಿಲ್ಲ ಎಂದು ತಿಳಿದು ಬಂದಿದೆ.

2023ರ ಡಿಸೆಂಬರ್ 17 ರಂದು ‘ಪಂಜಾಬ್ ಕೇಸರಿ’ಯಲ್ಲಿ ಪ್ರಕಟವಾಗಿದ್ದ ವರದಿಯಲ್ಲಿ, “ಪಾಕಿಸ್ತಾನದ ಅಹ್ಮದ್‌ಪುರ್ ಸಿಯಾಲ್‌ನಲ್ಲಿ ಐತಿಹಾಸಿಕ ಸೀತಾರಾಮ ಮಂದಿರ ಇತ್ತು. ಅದನ್ನು ಹಾಳುಗೆಡವಿ ಚಿಕನ್ ಅಂಗಡಿಯಾಗಿ ಪರಿವರ್ತನೆ ಮಾಡಲಾಗಿದೆ. ಈ ದೇಗುಲವನ್ನು ಶತಮಾನಗಳ ಹಿಂದೆ ನಿರ್ಮಿಸಲಾಗಿತ್ತು. ಇದಕ್ಕೆ ಐತಿಹಾಸಿಕ ಮಾತ್ರವಲ್ಲ, ಸಾಂಸ್ಕೃತಿಕ ಮಹತ್ವವೂ ಇದೆ ಎಂದು ಹೇಳಲಾಗಿದೆ.

ವರದಿ ಲಿಂಕ್ ಇಲ್ಲಿದೆ 

ಈ ದೇವಾಲಯದ ಕುರಿತು, ಪಾಕಿಸ್ತಾನದ ‘ದಿ ಫ್ರೈಡೇ ಟೈಮ್ಸ್ ವೆಬ್‌ಸೈಟ್‌’ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದೆ. ಈ ಲೇಖನವನ್ನು 12 ಮೇ 2017 ರಂದು ಪ್ರಕಟಿಸಲಾಗಿದೆ. ಲೇಖನದ ಪ್ರಕಾರ, ಸೀತಾ ರಾಮ ದೇವಾಲಯವನ್ನು 1887 ರಲ್ಲಿ ನಿರ್ಮಿಸಲಾಯಿತು ಮತ್ತು ಭಾರತದ ವಿಭಜನೆಯ ಮೊದಲು ನಗರದಲ್ಲಿ ಪ್ರಮುಖ ದೇವಾಲಯವಾಗಿತ್ತು. ವಿಭಜನೆಯ ನಂತರ, ದೇವಾಲಯವನ್ನು ಕೈಬಿಡಲಾಯಿತು ಮತ್ತು ದೇವಾಲಯದ ಒಳಗಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ಸ್ಥಳೀಯರು ಲೂಟಿ ಮಾಡಿದರು ಎಂದು ತಿಳಿದು ಬಂದಿದೆ.

ವರದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಕೇರಳದ ವಯನಾಡ್‌ನಲ್ಲಿ ಸೀತಾರಾಮ ಮಂದಿರವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದ ಎಂಬ ಸುದ್ದಿ ಸುಳ್ಳು ಎಂಬುವುದು ಗೊತ್ತಾಗಿದೆ. ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿರುವ ದೇವಸ್ಥಾನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಈಗ ಅದರಲ್ಲಿ ಚಿಕನ್ ಸೇರಿದಂತೆ ಇತರ ಅಂಗಡಿಗಳನ್ನು ತೆರೆದಿರುವುದು ನಿಜ.

ಇದನ್ನೂ ಓದಿ : FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...