Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ...

FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ನ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಕೋಳಿ ಅಂಗಡಿ (ಚಿಕನ್ ಶಾಪ್) ತೆರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ದೇವಾಲಯದಂತಹ ಕಟ್ಟಡವೊಂದು ಕಾಣಿಸುತ್ತಿದ್ದು, ವ್ಯಕ್ತಿಯೊಬ್ಬರು ಸ್ನೇಹಿತರೇ ಇದು ಸೀತಾರಾಮ ಮಂದಿರ. ಇದರ ಕೆಳಗಡೆ ಚಿಕನ್ ಅಂಗಡಿ ತೆರೆಯಲಾಗಿದೆ ಎಂದು ಹೇಳುವುದು ಕೇಳಿಸುತ್ತದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋದ ಮೇಲೆ ” ಹಿಂದೂಗಳೇ ಎದ್ದೇಳಿ. ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೀತಾರಾಮ ಮಂದಿರದಲ್ಲಿ ಚಿಕನ್ ಶಾಪ್ ತೆರೆಯಲಾಗಿದೆ. ಇದನ್ನು ಈ ಹಿಂದೆ ರಾಹುಲ್ ಗಾಂಧಿ ಉದ್ಘಾಟಿಸಿದ್ದರು. ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ಬಂದರೆ. ನಮ್ಮ ಎಲ್ಲಾ ಮಂದಿರಗಳನ್ನು ಏನು ಮಾಡಬಹುದು ಎಂದು ಯೋಚಿಸಿ. ಇದಕ್ಕಾಗಿಯೇ ಮುಸ್ಲಿಮರು ಕಾಂಗ್ರೆಸ್ ವೋಟ್ ಹಾಕ್ತಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಈ ಕುರಿತು ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅನೇಕ ಮಾಧ್ಯಮಗಳು ಪಾಕಿಸ್ತಾನದಲ್ಲಿ ದೇವಾಲಯವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದೆ ಎಂದಿದೆ.

‘Makhan Ram jaipal Vlogs’ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 25 ಆಗಸ್ಟ್ 2023ರಂದು ‘Seeta Ram Mandir Became chicken shop after partition|| Condition of Mandir In Pakistan’ ಎಂಬ ಶೀರ್ಷಿಕೆಯಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋದಲ್ಲಿ. ಪಾಕಿಸ್ತಾನದಲ್ಲಿ ಬೃಹತ್ ಸೀತಾರಾಮ ಮಂದಿರವೊಂದರಲ್ಲಿ ಚಿಕನ್ ಶಾಪ್ ಸೇರಿದಂತೆ ಇತರ ಹಲವು ಅಂಗಡಿಗಳು ತೆರೆದಿರುವುದನ್ನು ವ್ಲಾಗರ್ ತೋರಿಸಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಂದಿರ ಮತ್ತು ಯೂಟ್ಯೂಬರ್ ತೋರಿಸಿರುವ ಮಂದಿರ ಒಂದೇ ಆಗಿದೆ.

ಯೂಟ್ಯೂಬ್ ವಿಡಿಯೋದಲ್ಲಿ ತೋರಿಸಿರುವ ದೇವಾಲಯವು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಆ ಪ್ರದೇಶದ ಸುತ್ತಲೂ ಯಾವುದೇ ಹಿಂದೂಗಳು ವಾಸಿಸುತ್ತಿಲ್ಲ ಎಂದು ತಿಳಿದು ಬಂದಿದೆ.

2023ರ ಡಿಸೆಂಬರ್ 17 ರಂದು ‘ಪಂಜಾಬ್ ಕೇಸರಿ’ಯಲ್ಲಿ ಪ್ರಕಟವಾಗಿದ್ದ ವರದಿಯಲ್ಲಿ, “ಪಾಕಿಸ್ತಾನದ ಅಹ್ಮದ್‌ಪುರ್ ಸಿಯಾಲ್‌ನಲ್ಲಿ ಐತಿಹಾಸಿಕ ಸೀತಾರಾಮ ಮಂದಿರ ಇತ್ತು. ಅದನ್ನು ಹಾಳುಗೆಡವಿ ಚಿಕನ್ ಅಂಗಡಿಯಾಗಿ ಪರಿವರ್ತನೆ ಮಾಡಲಾಗಿದೆ. ಈ ದೇಗುಲವನ್ನು ಶತಮಾನಗಳ ಹಿಂದೆ ನಿರ್ಮಿಸಲಾಗಿತ್ತು. ಇದಕ್ಕೆ ಐತಿಹಾಸಿಕ ಮಾತ್ರವಲ್ಲ, ಸಾಂಸ್ಕೃತಿಕ ಮಹತ್ವವೂ ಇದೆ ಎಂದು ಹೇಳಲಾಗಿದೆ.

ವರದಿ ಲಿಂಕ್ ಇಲ್ಲಿದೆ 

ಈ ದೇವಾಲಯದ ಕುರಿತು, ಪಾಕಿಸ್ತಾನದ ‘ದಿ ಫ್ರೈಡೇ ಟೈಮ್ಸ್ ವೆಬ್‌ಸೈಟ್‌’ನಲ್ಲಿ ಹಲವು ಮಾಹಿತಿಗಳು ಲಭ್ಯವಾಗಿದೆ. ಈ ಲೇಖನವನ್ನು 12 ಮೇ 2017 ರಂದು ಪ್ರಕಟಿಸಲಾಗಿದೆ. ಲೇಖನದ ಪ್ರಕಾರ, ಸೀತಾ ರಾಮ ದೇವಾಲಯವನ್ನು 1887 ರಲ್ಲಿ ನಿರ್ಮಿಸಲಾಯಿತು ಮತ್ತು ಭಾರತದ ವಿಭಜನೆಯ ಮೊದಲು ನಗರದಲ್ಲಿ ಪ್ರಮುಖ ದೇವಾಲಯವಾಗಿತ್ತು. ವಿಭಜನೆಯ ನಂತರ, ದೇವಾಲಯವನ್ನು ಕೈಬಿಡಲಾಯಿತು ಮತ್ತು ದೇವಾಲಯದ ಒಳಗಿದ್ದ ಎಲ್ಲಾ ಬೆಲೆ ಬಾಳುವ ವಸ್ತುಗಳನ್ನು ಸ್ಥಳೀಯರು ಲೂಟಿ ಮಾಡಿದರು ಎಂದು ತಿಳಿದು ಬಂದಿದೆ.

ವರದಿ ಲಿಂಕ್ ಇಲ್ಲಿದೆ 

ನಾವು ನಡೆಸಿದ ಪರಿಶೀಲನೆಯಲ್ಲಿ ಕೇರಳದ ವಯನಾಡ್‌ನಲ್ಲಿ ಸೀತಾರಾಮ ಮಂದಿರವನ್ನು ಚಿಕನ್ ಶಾಪ್ ಆಗಿ ಪರಿವರ್ತಿಸಲಾಗಿದ ಎಂಬ ಸುದ್ದಿ ಸುಳ್ಳು ಎಂಬುವುದು ಗೊತ್ತಾಗಿದೆ. ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವ ವಿಡಿಯೋದಲ್ಲಿರುವ ದೇವಸ್ಥಾನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝಾಂಗ್ ಜಿಲ್ಲೆಯ ಅಹ್ಮದ್‌ಪುರ ಸಿಯಾಲ್ ಎಂಬ ಪಟ್ಟಣದಲ್ಲಿದೆ. ಈಗ ಅದರಲ್ಲಿ ಚಿಕನ್ ಸೇರಿದಂತೆ ಇತರ ಅಂಗಡಿಗಳನ್ನು ತೆರೆದಿರುವುದು ನಿಜ.

ಇದನ್ನೂ ಓದಿ : FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...