Homeಫ್ಯಾಕ್ಟ್‌ಚೆಕ್FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ...

FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 23, 2024ರಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ಮಾಡಿದ್ದರು. ಈ ಬಜೆಟ್ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಚರ್ಚೆಗೆ ಒಳಗಾಗಿತ್ತು.

ಬಜೆಟ್ ಕುರಿತು ಜುಲೈ 29ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿ ” ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ” ಎಂದಿದ್ದರು.

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಕಂಡಿದ್ದರು.

ರಾಹುಲ್ ಗಾಂಧಿಯ ಹೇಳಿಕೆಗೆ ಪ್ರತಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದ ಅನೇಕ ಬಳಕೆದಾರರು ” ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದಲ್ಲಿ ಎಷ್ಟು ದಲಿತರಿದ್ದರು? ಎಂದು ಪ್ರಶ್ನಿಸಿದ್ದರು. ಅಂದರೆ, ಯುಪಿಎ ಸರ್ಕಾರದ ಅವಧಿಯಲ್ಲೂ ಹಲ್ವಾ ಸಮಾರಂಭದಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಯಾವೊಬ್ಬ ಅಧಿಕಾರಿಯೂ ಭಾಗಿಯಾಗಿರಲಿಲ್ಲ ಎಂದು ಪ್ರತಿಪಾದಿಸಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಮಾಡಿರುವ ಆರೋಪವೇ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ, ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿ ಬಜೆಟ್‌ ಕಲಾಪದಲ್ಲಿ ಭಾಗವಹಿಸುವ ಮುನ್ನ ನಡೆದ ಸಂಪ್ರದಾಯಿಕ ಹಲ್ವಾ ಸಮಾರಂಭದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳು ಭಾಗವಹಿಸಿರಲಿಲ್ಲ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅದು ಫೆಬ್ರವರಿ 2014ರಲ್ಲಿ ಮಧ್ಯಂತರ ಬಜೆಟ್ ಸಮಯದಲ್ಲಿ ತೆಗೆದ ಫೋಟೋ ಎಂದು ಗೊತ್ತಾಗಿದೆ.

ಫೋಟೋದ ಶೀರ್ಷಿಕೆಯು ಫೆಬ್ರವರಿ 07, 2014 ರಂದು ನವದೆಹಲಿಯಲ್ಲಿ “ಕೇಂದ್ರ ಹಣಕಾಸು ಸಚಿವ, ಪಿ. ಚಿದಂಬರಂ ಅವರು ಮಧ್ಯಂತರ ಬಜೆಟ್ ಮುದ್ರಣ ಪ್ರಕ್ರಿಯೆಯ ಪ್ರಾರಂಭವನ್ನು ಗುರುತಿಸುವ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಹಣಕಾಸು ಖಾತೆಯ ರಾಜ್ಯ ಮಂತ್ರಿಗಳಾದ ಜೇಸುದಾಸು ಶೀಲಂ ಮತ್ತು ನಮೋ ನಾರಾಯಣ್ ಮೀನಾ ಅವರು ಕೂಡ ಚಿದಂಬರಂ ಜೊತೆಗಿದ್ದರು ಎಂದು ಪಿಐಬಿ ಸ್ಪಷ್ಟಪಡಿಸಿದೆ.

ರಾಜ್ಯ ಸಚಿವರ ಹಿನ್ನೆಲೆ ನೋಡಿದಾಗ ಜೇಸುದಾಸು ಶೀಲಂ ಪರಿಶಿಷ್ಟ ಜಾತಿಗೆ ಮತ್ತು ನಮೋ ನರೇನ್ ಮೀನಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಹಾಗಾಗಿ, ಪಿ.ಚಿದಂಬರಂ ಅವರು ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಬಜೆಟ್‌ ಮುದ್ರಣಕ್ಕೂ ಮುನ್ನ ನಡೆದ ಹಲ್ವಾ ಸಮಾರಂಭದ ವೇಳೆ ತೆಗೆದ ಫೋಟೋದಲ್ಲಿ ದಲಿತ ಮತ್ತು ಬುಡಕಟ್ಟು ವ್ಯಕ್ತಿಗಳು ಇರುವುದು ದೃಢಪಟ್ಟಿದೆ. ಆದ್ದರಿಂದ ಸಾಮಾಜಿಕ ಮಾಧ್ಯಮಗಳ ಪ್ರತಿಪಾದನೆಗಳು ಸುಳ್ಳು.

ಇದನ್ನೂ ಓದಿ : FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...