Homeಫ್ಯಾಕ್ಟ್‌ಚೆಕ್FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ...

FACT CHECK : ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್ ಹಲ್ವಾ ಸಮಾರಂಭದಲ್ಲಿ ದಲಿತ ಅಧಿಕಾರಿಗಳು ಇರಲಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ಜುಲೈ 23, 2024ರಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ಮಾಡಿದ್ದರು. ಈ ಬಜೆಟ್ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಚರ್ಚೆಗೆ ಒಳಗಾಗಿತ್ತು.

ಬಜೆಟ್ ಕುರಿತು ಜುಲೈ 29ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಜೆಟ್ ಮಂಡನೆಗೂ ಮುನ್ನ ಸಂಪ್ರದಾಯದಂತೆ ನಡೆದ ಹಲ್ವಾ ಸಮಾರಂಭದ ಫೋಟೋ ಪ್ರದರ್ಶಿಸಿ ” ಸರ್ ಇದು ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದ ಫೋಟೋ. ಇದರಲ್ಲಿ ನನಗೆ ಒಬ್ಬನೇ ಒಬ್ಬ ಒಬಿಸಿ, ಆದಿವಾಸಿ ಮತ್ತು ದಲಿತ ಅಧಿಕಾರಿ ಕಾಣುತ್ತಿಲ್ಲ. ಕೇವಲ 20 ಅಧಿಕಾರಿಗಳು ಸೇರಿಕೊಂಡು ಬಜೆಟ್ ಸಿದ್ದಪಡಿಸಿದ್ದಾರೆ. ಇದರರ್ಥ ಭಾರತ ಹಲ್ವಾವನ್ನು 20 ಅಧಿಕಾರಿಗಳು ಹಂಚಿಕೊಂಡಿದ್ದಾರೆ” ಎಂದಿದ್ದರು.

ರಾಹುಲ್ ಗಾಂಧಿ ಹಲ್ವಾ ಸಮಾರಂಭ ಉಲ್ಲೇಖಿಸಿ ಜಾತಿ ತಾರತಮ್ಯದ ಗಂಭೀರತೆಯನ್ನು ಪ್ರಸ್ತಾಪಿಸುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮುಖವನ್ನು ಕೈಯಿಂದ ಮುಚ್ಚಿಕೊಂಡು, ನಗುವ ಮೂಲಕ ಪ್ರತಿಪಕ್ಷ ನಾಯಕನ ಹೇಳಿಕೆಯನ್ನು ತಮಾಷೆಯಾಗಿ ಕಂಡಿದ್ದರು.

ರಾಹುಲ್ ಗಾಂಧಿಯ ಹೇಳಿಕೆಗೆ ಪ್ರತಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದ ಅನೇಕ ಬಳಕೆದಾರರು ” ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿದ್ದಾಗ ಬಜೆಟ್‌ ಮಂಡನೆಗೂ ಮುನ್ನ ನಡೆದ ಹಲ್ವಾ ಸಮಾರಂಭದಲ್ಲಿ ಎಷ್ಟು ದಲಿತರಿದ್ದರು? ಎಂದು ಪ್ರಶ್ನಿಸಿದ್ದರು. ಅಂದರೆ, ಯುಪಿಎ ಸರ್ಕಾರದ ಅವಧಿಯಲ್ಲೂ ಹಲ್ವಾ ಸಮಾರಂಭದಲ್ಲಿ ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಯಾವೊಬ್ಬ ಅಧಿಕಾರಿಯೂ ಭಾಗಿಯಾಗಿರಲಿಲ್ಲ ಎಂದು ಪ್ರತಿಪಾದಿಸಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಮಾಡಿರುವ ಆರೋಪವೇ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ, ಯುಪಿಎ ಸರ್ಕಾರದ ಅವಧಿಯಲ್ಲಿ ಪಿ.ಚಿದಂಬರಂ ಹಣಕಾಸು ಸಚಿವರಾಗಿ ಬಜೆಟ್‌ ಕಲಾಪದಲ್ಲಿ ಭಾಗವಹಿಸುವ ಮುನ್ನ ನಡೆದ ಸಂಪ್ರದಾಯಿಕ ಹಲ್ವಾ ಸಮಾರಂಭದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ ಅಧಿಕಾರಿಗಳು ಭಾಗವಹಿಸಿರಲಿಲ್ಲ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಅದು ಫೆಬ್ರವರಿ 2014ರಲ್ಲಿ ಮಧ್ಯಂತರ ಬಜೆಟ್ ಸಮಯದಲ್ಲಿ ತೆಗೆದ ಫೋಟೋ ಎಂದು ಗೊತ್ತಾಗಿದೆ.

ಫೋಟೋದ ಶೀರ್ಷಿಕೆಯು ಫೆಬ್ರವರಿ 07, 2014 ರಂದು ನವದೆಹಲಿಯಲ್ಲಿ “ಕೇಂದ್ರ ಹಣಕಾಸು ಸಚಿವ, ಪಿ. ಚಿದಂಬರಂ ಅವರು ಮಧ್ಯಂತರ ಬಜೆಟ್ ಮುದ್ರಣ ಪ್ರಕ್ರಿಯೆಯ ಪ್ರಾರಂಭವನ್ನು ಗುರುತಿಸುವ ಹಲ್ವಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಹಣಕಾಸು ಖಾತೆಯ ರಾಜ್ಯ ಮಂತ್ರಿಗಳಾದ ಜೇಸುದಾಸು ಶೀಲಂ ಮತ್ತು ನಮೋ ನಾರಾಯಣ್ ಮೀನಾ ಅವರು ಕೂಡ ಚಿದಂಬರಂ ಜೊತೆಗಿದ್ದರು ಎಂದು ಪಿಐಬಿ ಸ್ಪಷ್ಟಪಡಿಸಿದೆ.

ರಾಜ್ಯ ಸಚಿವರ ಹಿನ್ನೆಲೆ ನೋಡಿದಾಗ ಜೇಸುದಾಸು ಶೀಲಂ ಪರಿಶಿಷ್ಟ ಜಾತಿಗೆ ಮತ್ತು ನಮೋ ನರೇನ್ ಮೀನಾ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ತಿಳಿದುಬಂದಿದೆ.

ಹಾಗಾಗಿ, ಪಿ.ಚಿದಂಬರಂ ಅವರು ಕೇಂದ್ರ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಬಜೆಟ್‌ ಮುದ್ರಣಕ್ಕೂ ಮುನ್ನ ನಡೆದ ಹಲ್ವಾ ಸಮಾರಂಭದ ವೇಳೆ ತೆಗೆದ ಫೋಟೋದಲ್ಲಿ ದಲಿತ ಮತ್ತು ಬುಡಕಟ್ಟು ವ್ಯಕ್ತಿಗಳು ಇರುವುದು ದೃಢಪಟ್ಟಿದೆ. ಆದ್ದರಿಂದ ಸಾಮಾಜಿಕ ಮಾಧ್ಯಮಗಳ ಪ್ರತಿಪಾದನೆಗಳು ಸುಳ್ಳು.

ಇದನ್ನೂ ಓದಿ : FACT CHECK : ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...