Homeಫ್ಯಾಕ್ಟ್‌ಚೆಕ್FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ, ಈಗಲೆ ಖರೀದಿಸಿ, ಪಪ್ಪಾಯ ಎಲೆಯ ಸಾರವನ್ನು ಒಳಗೊಂಡಿರುವ ‘CARIPILL’ ಮಾತ್ರೆಯು ಡೆಂಗಿವನ್ನು ಕೆಲವೇ ಗಂಟೆಗಳಲ್ಲಿ ಗುಣಪಡಿಸುವ ಶಕ್ತಿ ಹೊಂದಿದೆ. ‘ಅಂತಃಕರಣ’ ಇದನ್ನು ಉಚಿತವಾಗಿ ನೀಡುತ್ತಿದೆ. ಈ ಸಂದೇಶವನ್ನು ಯಾವುದೇ ಕಾರಣಕ್ಕೂ ಅಳಿಸಬೇಡಿ ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ”ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಸುದ್ದಿಯನ್ನು ಓದಿದ ಹಲವು ಮಂದಿ ಪಪಾಯಿ ಸಾರವನ್ನು ಹೊಂದಿರುವ ಕ್ಯಾರಿಪಿಲ್‌ ನಿಜಕ್ಕೂ ಡೆಂಗಿ ಖಾಯಿಲೆಯಿಂದ ತಮ್ಮನ್ನು ಮುಕ್ತಗೊಳಿಸುತ್ತದೆ ಎಂದು ಭಾವಿಸಿದ್ದಾರೆ. ಹೀಗಾಗಿ ಕೆಲವರು ಯಾವುದೇ ವೈದ್ಯರ ಸಲಹೆಯನ್ನು ಪಡೆಯದೆ ಈ CARIPILL ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗುತ್ತದೆ.

ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ CARIPILL ನಿಜಕ್ಕೂ ಡೆಂಗಿ ಖಾಯಿಲೆಯನ್ನು ನಿವಾರಣೆ ಮಾಡುತ್ತದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಈ ಮಾತ್ರೆಯ ಕುರಿತು ಪರಿಶೀಲನೆ ನಡೆಸಲು  ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 12 ಆಗಸ್ಟ್‌ 2016ರಂದು ದ ಹೆಲ್ತ್‌ ಸೈಟ್‌.ಕಾಮ್ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಈ ವರದಿಯಲ್ಲಿ ‌ಈ ಸಂಸ್ಥೆಯು ಜಾಹಿರಾತಿನಲ್ಲಿ ನೀಡಲಾದ ನಂಬರ್‌ಗೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಈ ಮಾತ್ರೆಗೂ ಅಂತಃಕರಣ ಕ್ಲಿನಿಕ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಖಚಿತ ಪಡಿಸಿಕೊಂಡಿದೆ.

ಬಳಿಕ ಈ ಕ್ಯಾರಿಪಿಲ್ ಮಾತ್ರೆಯನ್ನು  ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಎಂಬ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ತಯಾರಿಸಲ್ಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಾತ್ರೆಗಳು ಸಸ್ಯಶಾಸ್ತ್ರೀಯಕ್ಕೆ ಸಂಬಂಧಪಟ್ಟಿದೆ  ಎಂಬುದನ್ನು ಖಚಿತ ಪಡಿಸಿಕೊಂಡ ಈ ತಂಡ, ಬಳಿಕ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್‌ನ ವೈದ್ಯಕೀಯ ವ್ಯವಹಾರಗಳ ವಿಪಿ ಡಾ ಮಂಜುಳಾ ಸುರೇಶ್  ಅವರನ್ನು ಸಂಪರ್ಕಿಸಿ ಮಾತನಾಡಿದೆ. ಇದಕ್ಕೆ ಅವರು  “ಈ ಸಂದೇಶವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡುವ ಬಗ್ಗೆ ನಮಗೆ ತಿಳಿದಿಲ್ಲ. ಕ್ಯಾರಿಪಿಲ್ ಒಂದು ಪ್ರಿಸ್ಕ್ರಿಪ್ಷನ್ ಔಷಧವಾಗಿದೆ ಮತ್ತು ನಾವು ಅದನ್ನು ವೈದ್ಯರಿಗೆ ಮಾತ್ರ ಮಾರಾಟ ಮಾಡುತ್ತೇವೆ. ಡೆಂಗ್ಯೂವನ್ನು 48 ಗಂಟೆಗಳಲ್ಲಿ ಗುಣಪಡಿಸಬಹುದು ಎಂದು ನಾವು ಹೇಳುವುದಿಲ್ಲ. ವಾಸ್ತವವಾಗಿ, ಔಷಧವನ್ನು ಐದು ದಿನಗಳವರೆಗೆ ತೆಗೆದುಕೊಳ್ಳಬೇಕು.” ಎಂದು ದ ಹೆಲ್ತ್‌ ಸೈಟ್‌.ಕಾಮ್‌ಗೆ ಸ್ಪಷ್ಟ ಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ , CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕಿನಿಂದ ಕೇವಲ 48 ಗಂಟೆಗಳಲ್ಲಿ ಮುಕ್ತಿ ಪಡೆಯಬಹುದು ಎಂಬ ಪ್ರತಿಪಾದನೆ ಸುಳ್ಳಾಗಿದೆ. ಹಾಗೂ ಈ ಸಂದೇಶ 2016ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವುದರಿಂದ ಇದು ಹಳೆಯ ಮತ್ತು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...