Homeಫ್ಯಾಕ್ಟ್‌ಚೆಕ್FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ, ಈಗಲೆ ಖರೀದಿಸಿ, ಪಪ್ಪಾಯ ಎಲೆಯ ಸಾರವನ್ನು ಒಳಗೊಂಡಿರುವ ‘CARIPILL’ ಮಾತ್ರೆಯು ಡೆಂಗಿವನ್ನು ಕೆಲವೇ ಗಂಟೆಗಳಲ್ಲಿ ಗುಣಪಡಿಸುವ ಶಕ್ತಿ ಹೊಂದಿದೆ. ‘ಅಂತಃಕರಣ’ ಇದನ್ನು ಉಚಿತವಾಗಿ ನೀಡುತ್ತಿದೆ. ಈ ಸಂದೇಶವನ್ನು ಯಾವುದೇ ಕಾರಣಕ್ಕೂ ಅಳಿಸಬೇಡಿ ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ”ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಸುದ್ದಿಯನ್ನು ಓದಿದ ಹಲವು ಮಂದಿ ಪಪಾಯಿ ಸಾರವನ್ನು ಹೊಂದಿರುವ ಕ್ಯಾರಿಪಿಲ್‌ ನಿಜಕ್ಕೂ ಡೆಂಗಿ ಖಾಯಿಲೆಯಿಂದ ತಮ್ಮನ್ನು ಮುಕ್ತಗೊಳಿಸುತ್ತದೆ ಎಂದು ಭಾವಿಸಿದ್ದಾರೆ. ಹೀಗಾಗಿ ಕೆಲವರು ಯಾವುದೇ ವೈದ್ಯರ ಸಲಹೆಯನ್ನು ಪಡೆಯದೆ ಈ CARIPILL ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗುತ್ತದೆ.

ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ CARIPILL ನಿಜಕ್ಕೂ ಡೆಂಗಿ ಖಾಯಿಲೆಯನ್ನು ನಿವಾರಣೆ ಮಾಡುತ್ತದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಈ ಮಾತ್ರೆಯ ಕುರಿತು ಪರಿಶೀಲನೆ ನಡೆಸಲು  ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 12 ಆಗಸ್ಟ್‌ 2016ರಂದು ದ ಹೆಲ್ತ್‌ ಸೈಟ್‌.ಕಾಮ್ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಈ ವರದಿಯಲ್ಲಿ ‌ಈ ಸಂಸ್ಥೆಯು ಜಾಹಿರಾತಿನಲ್ಲಿ ನೀಡಲಾದ ನಂಬರ್‌ಗೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಈ ಮಾತ್ರೆಗೂ ಅಂತಃಕರಣ ಕ್ಲಿನಿಕ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಖಚಿತ ಪಡಿಸಿಕೊಂಡಿದೆ.

ಬಳಿಕ ಈ ಕ್ಯಾರಿಪಿಲ್ ಮಾತ್ರೆಯನ್ನು  ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಎಂಬ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ತಯಾರಿಸಲ್ಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಾತ್ರೆಗಳು ಸಸ್ಯಶಾಸ್ತ್ರೀಯಕ್ಕೆ ಸಂಬಂಧಪಟ್ಟಿದೆ  ಎಂಬುದನ್ನು ಖಚಿತ ಪಡಿಸಿಕೊಂಡ ಈ ತಂಡ, ಬಳಿಕ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್‌ನ ವೈದ್ಯಕೀಯ ವ್ಯವಹಾರಗಳ ವಿಪಿ ಡಾ ಮಂಜುಳಾ ಸುರೇಶ್  ಅವರನ್ನು ಸಂಪರ್ಕಿಸಿ ಮಾತನಾಡಿದೆ. ಇದಕ್ಕೆ ಅವರು  “ಈ ಸಂದೇಶವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡುವ ಬಗ್ಗೆ ನಮಗೆ ತಿಳಿದಿಲ್ಲ. ಕ್ಯಾರಿಪಿಲ್ ಒಂದು ಪ್ರಿಸ್ಕ್ರಿಪ್ಷನ್ ಔಷಧವಾಗಿದೆ ಮತ್ತು ನಾವು ಅದನ್ನು ವೈದ್ಯರಿಗೆ ಮಾತ್ರ ಮಾರಾಟ ಮಾಡುತ್ತೇವೆ. ಡೆಂಗ್ಯೂವನ್ನು 48 ಗಂಟೆಗಳಲ್ಲಿ ಗುಣಪಡಿಸಬಹುದು ಎಂದು ನಾವು ಹೇಳುವುದಿಲ್ಲ. ವಾಸ್ತವವಾಗಿ, ಔಷಧವನ್ನು ಐದು ದಿನಗಳವರೆಗೆ ತೆಗೆದುಕೊಳ್ಳಬೇಕು.” ಎಂದು ದ ಹೆಲ್ತ್‌ ಸೈಟ್‌.ಕಾಮ್‌ಗೆ ಸ್ಪಷ್ಟ ಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ , CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕಿನಿಂದ ಕೇವಲ 48 ಗಂಟೆಗಳಲ್ಲಿ ಮುಕ್ತಿ ಪಡೆಯಬಹುದು ಎಂಬ ಪ್ರತಿಪಾದನೆ ಸುಳ್ಳಾಗಿದೆ. ಹಾಗೂ ಈ ಸಂದೇಶ 2016ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವುದರಿಂದ ಇದು ಹಳೆಯ ಮತ್ತು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...