Homeಫ್ಯಾಕ್ಟ್‌ಚೆಕ್FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ, ಈಗಲೆ ಖರೀದಿಸಿ, ಪಪ್ಪಾಯ ಎಲೆಯ ಸಾರವನ್ನು ಒಳಗೊಂಡಿರುವ ‘CARIPILL’ ಮಾತ್ರೆಯು ಡೆಂಗಿವನ್ನು ಕೆಲವೇ ಗಂಟೆಗಳಲ್ಲಿ ಗುಣಪಡಿಸುವ ಶಕ್ತಿ ಹೊಂದಿದೆ. ‘ಅಂತಃಕರಣ’ ಇದನ್ನು ಉಚಿತವಾಗಿ ನೀಡುತ್ತಿದೆ. ಈ ಸಂದೇಶವನ್ನು ಯಾವುದೇ ಕಾರಣಕ್ಕೂ ಅಳಿಸಬೇಡಿ ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ”ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಸುದ್ದಿಯನ್ನು ಓದಿದ ಹಲವು ಮಂದಿ ಪಪಾಯಿ ಸಾರವನ್ನು ಹೊಂದಿರುವ ಕ್ಯಾರಿಪಿಲ್‌ ನಿಜಕ್ಕೂ ಡೆಂಗಿ ಖಾಯಿಲೆಯಿಂದ ತಮ್ಮನ್ನು ಮುಕ್ತಗೊಳಿಸುತ್ತದೆ ಎಂದು ಭಾವಿಸಿದ್ದಾರೆ. ಹೀಗಾಗಿ ಕೆಲವರು ಯಾವುದೇ ವೈದ್ಯರ ಸಲಹೆಯನ್ನು ಪಡೆಯದೆ ಈ CARIPILL ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗುತ್ತದೆ.

ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ CARIPILL ನಿಜಕ್ಕೂ ಡೆಂಗಿ ಖಾಯಿಲೆಯನ್ನು ನಿವಾರಣೆ ಮಾಡುತ್ತದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಈ ಮಾತ್ರೆಯ ಕುರಿತು ಪರಿಶೀಲನೆ ನಡೆಸಲು  ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 12 ಆಗಸ್ಟ್‌ 2016ರಂದು ದ ಹೆಲ್ತ್‌ ಸೈಟ್‌.ಕಾಮ್ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಈ ವರದಿಯಲ್ಲಿ ‌ಈ ಸಂಸ್ಥೆಯು ಜಾಹಿರಾತಿನಲ್ಲಿ ನೀಡಲಾದ ನಂಬರ್‌ಗೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಈ ಮಾತ್ರೆಗೂ ಅಂತಃಕರಣ ಕ್ಲಿನಿಕ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಖಚಿತ ಪಡಿಸಿಕೊಂಡಿದೆ.

ಬಳಿಕ ಈ ಕ್ಯಾರಿಪಿಲ್ ಮಾತ್ರೆಯನ್ನು  ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಎಂಬ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ತಯಾರಿಸಲ್ಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಾತ್ರೆಗಳು ಸಸ್ಯಶಾಸ್ತ್ರೀಯಕ್ಕೆ ಸಂಬಂಧಪಟ್ಟಿದೆ  ಎಂಬುದನ್ನು ಖಚಿತ ಪಡಿಸಿಕೊಂಡ ಈ ತಂಡ, ಬಳಿಕ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್‌ನ ವೈದ್ಯಕೀಯ ವ್ಯವಹಾರಗಳ ವಿಪಿ ಡಾ ಮಂಜುಳಾ ಸುರೇಶ್  ಅವರನ್ನು ಸಂಪರ್ಕಿಸಿ ಮಾತನಾಡಿದೆ. ಇದಕ್ಕೆ ಅವರು  “ಈ ಸಂದೇಶವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡುವ ಬಗ್ಗೆ ನಮಗೆ ತಿಳಿದಿಲ್ಲ. ಕ್ಯಾರಿಪಿಲ್ ಒಂದು ಪ್ರಿಸ್ಕ್ರಿಪ್ಷನ್ ಔಷಧವಾಗಿದೆ ಮತ್ತು ನಾವು ಅದನ್ನು ವೈದ್ಯರಿಗೆ ಮಾತ್ರ ಮಾರಾಟ ಮಾಡುತ್ತೇವೆ. ಡೆಂಗ್ಯೂವನ್ನು 48 ಗಂಟೆಗಳಲ್ಲಿ ಗುಣಪಡಿಸಬಹುದು ಎಂದು ನಾವು ಹೇಳುವುದಿಲ್ಲ. ವಾಸ್ತವವಾಗಿ, ಔಷಧವನ್ನು ಐದು ದಿನಗಳವರೆಗೆ ತೆಗೆದುಕೊಳ್ಳಬೇಕು.” ಎಂದು ದ ಹೆಲ್ತ್‌ ಸೈಟ್‌.ಕಾಮ್‌ಗೆ ಸ್ಪಷ್ಟ ಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ , CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕಿನಿಂದ ಕೇವಲ 48 ಗಂಟೆಗಳಲ್ಲಿ ಮುಕ್ತಿ ಪಡೆಯಬಹುದು ಎಂಬ ಪ್ರತಿಪಾದನೆ ಸುಳ್ಳಾಗಿದೆ. ಹಾಗೂ ಈ ಸಂದೇಶ 2016ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವುದರಿಂದ ಇದು ಹಳೆಯ ಮತ್ತು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...