Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...