Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...