Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...