Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...