Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ 'ಗೋ ಬ್ಯಾಕ್' ಘೋಷಣೆ ಕೂಗಲಾಗಿದೆ ಎಂಬುವುದು...

FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಹಿಂಸಾಚಾರ ಪೀಡಿತ ಮಣಿಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿದ್ದು “ಮಣಿಪುರದ ಜನರ ಮಾತುಗಳನ್ನು ಆಲಿಸಿ ಮತ್ತು ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ” ಎಂದಿದ್ದಾರೆ.

ರಾಹುಲ್ ಗಾಂಧಿಯ ಮಣಿಪುರ ಭೇಟಿಯ ಬಳಿಕ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿಗಳು ಎಎನ್‌ಐ ಸುದ್ದಿ ಸಂಸ್ಥೆಯ ವಿಡಿಯೋವೊಂದನ್ನು ಹಂಚಿಕೊಂಡು “ರಾಹುಲ್ ಗಾಂಧಿ ವಿರುದ್ದ ಮಣಿಪುರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಸದಾ ಬಿಜೆಪಿ ಪರ ಮತ್ತು ಸುಳ್ಳು ಸುದ್ದಿ ಹರಡುವ ಬಲಪಂಥೀಯ ಎಕ್ಸ್ ಬಳಕೆದಾರ @MrSinha ಎಎನ್‌ಐಯ ವಿಡಿಯೋವನ್ನು ಹಂಚಿಕೊಂಡಿದ್ದು ” ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸ್ಥಳೀಯರು ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ತನ್ನ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಮತ್ತೋರ್ವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅರುಣ್ ಪುದೂರ್ ಕೂಡ ಎಎನ್‌ಐಯ ವಿಡಿಯೋ ಹಂಚಿಕೊಂಡಿದ್ದು, “ಮಣಿಪುರದಲ್ಲಿ ಪಪ್ಪು ಹೋದಲೆಲ್ಲ ಗೋ ಬ್ಯಾಕ್ ಘೋಷಣೆ ಪ್ರತಿಧ್ವನಿಸಿದೆ. ಅವರು ತಮ್ಮ ಸಿಸಿಪಿ (ಚೈನೀಸ್ ಕಮ್ಯನಿಸ್ಟ್ ಪಾರ್ಟಿ) ಮಾಸ್ಟರ್‌ಗಳಿಗೆ ಸಹಾಯ ಮಾಡಲು ರಾಜ್ಯದಲ್ಲಿ ಮತ್ತೆ ಘರ್ಷಣೆ ಹುಟ್ಟು ಹಾಕುತ್ತಾರೆ ಎಂಬುವುದು ಜನರಿಗೆ ತಿಳಿದಿದೆ” ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, “ಈಶಾನ್ಯ ಹಿಂದೂ ಬುಡಕಟ್ಟುಗಳ ವಿನಾಶಕ್ಕೆ ನೆಹರೂ-ಗಾಂಧಿ ವಂಶಸ್ಥರು ಕಾರಣ” ಎಂದು ಆರೋಪಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಎಂದಾದರೂ ರಾಜ್ಯಕ್ಕೆ ಭೇಟಿ ನೀಡಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡು “ರಾಹುಲ್ ಗಾಂಧಿ ಇತ್ತೀಚೆಗೆ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಜನರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡಿರುವ ಕಾರಣ ನಾವು ಆ ವಿಡಿಯೋವನ್ನು ಎಎನ್‌ಐ ಯಾವಾಗ ಪೋಸ್ಟ್ ಮಾಡಿದೆ ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಜನವರಿ 21,2024ರಂದು ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ ಎಎನ್‌ಐ ಹೀಗೆ ಬರೆದಿತ್ತು “ಅಸ್ಸಾಂನ ನಾಗಾಂವ್‌ನ ಅಂಬಾಗಾನ್ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನರು ‘ರಾಹುಲ್ ಗಾಂಧಿ ಗೋ ಬ್ಯಾಕ್, ಅನ್ಯಾಯ ಯಾತ್ರೆ’ ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟಿಸಿದರು.” ಈ ಪೋಸ್ಟ್ ವಿಡಿಯೋ ಹಳೇದು ಮಾತ್ರವಲ್ಲ ಅಸ್ಸಾಂನದ್ದು ಎಂದು ನಮಗೆ ತಿಳಿಸುತ್ತದೆ.

ಎಎನ್‌ಐ ವಿಡಿಯೋ ಪೋಸ್ಟ್ ಮಾಡಿದ್ದ ಅದೇ ಘಟನೆಯ ಕುರಿತು 22 ಜನವರಿ 2024ರಂದು ಡೆಕ್ಕನ್ ಹೆರಾಲ್ಟ್ ಸುದ್ದಿ ಪ್ರಕಟಿಸಿತ್ತು. ವರದಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನ ನಾಗಾಂವ್ ಜಿಲ್ಲೆ ತಲುಪಿದ ವೇಳೆ ಈ ಘಟನೆ ಸಂಭವಿಸಿದೆ ತಿಳಿಸಲಾಗಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿ ಮತ್ತು ಇತರ ಕೆಲವು ನಾಯಕರು ರೂಪೋಹಿಗೆ ಹೋಗುವಾಗ ಅಂಬಾಗನ್‌ನಲ್ಲಿರುವ ರಸ್ತೆ ಬದಿಯ ರೆಸ್ಟೋರೆಂಟ್‌ ಬಳಿ ವಾಹನ ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ಗುಂಪು ಸೇರಿದ ಜನರು ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಾರೆ.

ಅದೇ ದಿನ, ಇತರ ದಾಳಿಯ ಘಟನೆಗಳು ವರದಿಯಾಗಿತ್ತು. ಯಾತ್ರೆಯಿಂದ ವಾಪಸಾಗುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ವಾಹನಗಳ ಮೇಲೆ ದಾಳಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ಮೂವರು ಸದಸ್ಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿತ್ತು. ಸೋನಿತ್‌ಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಜೈರಾಮ್ ರಮೇಶ್ ಅವರ ಕಾರಿನ ಮೇಲೂ ದಾಳಿ ನಡೆಸಿದ್ದ ಬಗ್ಗೆ ವರದಿಯಾಗಿತ್ತು. ಈ ನಡುವೆ ಯಾತ್ರೆ ನಾಗಾಂವ್ ತಲುಪಿತ್ತು.

ಈ ಆಪಾದಿತ ದಾಳಿಗಳನ್ನು ಖಂಡಿಸಿ ಕಾಂಗ್ರೆಸ್ ಜನವರಿ 22 ರಂದು ದೇಶದಾದ್ಯಂತ ಪ್ರತಿಭಟನೆ ಘೋಷಿಸಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಅಸ್ಸಾಂನಲ್ಲಿ ಯಾತ್ರೆ ಪ್ರವೇಶಿಸಿದಾಗಿನಿಂದ ನಮ್ಮ ಬೆಂಗಾವಲು ವಾಹನಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದೆ ಎಂದು ಹೇಳಿದ್ದರು.

ಒಟ್ಟಿನಲ್ಲಿ ಜನವರಿ 21, 2024ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿದ್ದ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಅಸ್ಸಾಂನ ನಾಗಾಂವ್‌ ತಲುಪಿದ್ದಾಗ ಅವರ ವಿರುದ್ದ ಪೋಸ್ಟರ್ ಪ್ರದರ್ಶಿಸಿ ಘೋಷಣೆಗಳನ್ನು ಕೂಗಲಾಗಿತ್ತು. ಅದರ ವಿಡಿಯೋವನ್ನು, ಇತ್ತೀಚೆಗೆ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದಾಗ ಗೋ ಬ್ಯಾಕ್‌ ಘೋಷಣೆ ಕೂಗಲಾಗಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...