Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ 'ಗೋ ಬ್ಯಾಕ್' ಘೋಷಣೆ ಕೂಗಲಾಗಿದೆ ಎಂಬುವುದು...

FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಹಿಂಸಾಚಾರ ಪೀಡಿತ ಮಣಿಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿದ್ದು “ಮಣಿಪುರದ ಜನರ ಮಾತುಗಳನ್ನು ಆಲಿಸಿ ಮತ್ತು ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ” ಎಂದಿದ್ದಾರೆ.

ರಾಹುಲ್ ಗಾಂಧಿಯ ಮಣಿಪುರ ಭೇಟಿಯ ಬಳಿಕ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿಗಳು ಎಎನ್‌ಐ ಸುದ್ದಿ ಸಂಸ್ಥೆಯ ವಿಡಿಯೋವೊಂದನ್ನು ಹಂಚಿಕೊಂಡು “ರಾಹುಲ್ ಗಾಂಧಿ ವಿರುದ್ದ ಮಣಿಪುರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಸದಾ ಬಿಜೆಪಿ ಪರ ಮತ್ತು ಸುಳ್ಳು ಸುದ್ದಿ ಹರಡುವ ಬಲಪಂಥೀಯ ಎಕ್ಸ್ ಬಳಕೆದಾರ @MrSinha ಎಎನ್‌ಐಯ ವಿಡಿಯೋವನ್ನು ಹಂಚಿಕೊಂಡಿದ್ದು ” ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸ್ಥಳೀಯರು ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ತನ್ನ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಮತ್ತೋರ್ವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅರುಣ್ ಪುದೂರ್ ಕೂಡ ಎಎನ್‌ಐಯ ವಿಡಿಯೋ ಹಂಚಿಕೊಂಡಿದ್ದು, “ಮಣಿಪುರದಲ್ಲಿ ಪಪ್ಪು ಹೋದಲೆಲ್ಲ ಗೋ ಬ್ಯಾಕ್ ಘೋಷಣೆ ಪ್ರತಿಧ್ವನಿಸಿದೆ. ಅವರು ತಮ್ಮ ಸಿಸಿಪಿ (ಚೈನೀಸ್ ಕಮ್ಯನಿಸ್ಟ್ ಪಾರ್ಟಿ) ಮಾಸ್ಟರ್‌ಗಳಿಗೆ ಸಹಾಯ ಮಾಡಲು ರಾಜ್ಯದಲ್ಲಿ ಮತ್ತೆ ಘರ್ಷಣೆ ಹುಟ್ಟು ಹಾಕುತ್ತಾರೆ ಎಂಬುವುದು ಜನರಿಗೆ ತಿಳಿದಿದೆ” ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, “ಈಶಾನ್ಯ ಹಿಂದೂ ಬುಡಕಟ್ಟುಗಳ ವಿನಾಶಕ್ಕೆ ನೆಹರೂ-ಗಾಂಧಿ ವಂಶಸ್ಥರು ಕಾರಣ” ಎಂದು ಆರೋಪಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಎಂದಾದರೂ ರಾಜ್ಯಕ್ಕೆ ಭೇಟಿ ನೀಡಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡು “ರಾಹುಲ್ ಗಾಂಧಿ ಇತ್ತೀಚೆಗೆ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಜನರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡಿರುವ ಕಾರಣ ನಾವು ಆ ವಿಡಿಯೋವನ್ನು ಎಎನ್‌ಐ ಯಾವಾಗ ಪೋಸ್ಟ್ ಮಾಡಿದೆ ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಜನವರಿ 21,2024ರಂದು ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ ಎಎನ್‌ಐ ಹೀಗೆ ಬರೆದಿತ್ತು “ಅಸ್ಸಾಂನ ನಾಗಾಂವ್‌ನ ಅಂಬಾಗಾನ್ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನರು ‘ರಾಹುಲ್ ಗಾಂಧಿ ಗೋ ಬ್ಯಾಕ್, ಅನ್ಯಾಯ ಯಾತ್ರೆ’ ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟಿಸಿದರು.” ಈ ಪೋಸ್ಟ್ ವಿಡಿಯೋ ಹಳೇದು ಮಾತ್ರವಲ್ಲ ಅಸ್ಸಾಂನದ್ದು ಎಂದು ನಮಗೆ ತಿಳಿಸುತ್ತದೆ.

ಎಎನ್‌ಐ ವಿಡಿಯೋ ಪೋಸ್ಟ್ ಮಾಡಿದ್ದ ಅದೇ ಘಟನೆಯ ಕುರಿತು 22 ಜನವರಿ 2024ರಂದು ಡೆಕ್ಕನ್ ಹೆರಾಲ್ಟ್ ಸುದ್ದಿ ಪ್ರಕಟಿಸಿತ್ತು. ವರದಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನ ನಾಗಾಂವ್ ಜಿಲ್ಲೆ ತಲುಪಿದ ವೇಳೆ ಈ ಘಟನೆ ಸಂಭವಿಸಿದೆ ತಿಳಿಸಲಾಗಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿ ಮತ್ತು ಇತರ ಕೆಲವು ನಾಯಕರು ರೂಪೋಹಿಗೆ ಹೋಗುವಾಗ ಅಂಬಾಗನ್‌ನಲ್ಲಿರುವ ರಸ್ತೆ ಬದಿಯ ರೆಸ್ಟೋರೆಂಟ್‌ ಬಳಿ ವಾಹನ ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ಗುಂಪು ಸೇರಿದ ಜನರು ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಾರೆ.

ಅದೇ ದಿನ, ಇತರ ದಾಳಿಯ ಘಟನೆಗಳು ವರದಿಯಾಗಿತ್ತು. ಯಾತ್ರೆಯಿಂದ ವಾಪಸಾಗುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ವಾಹನಗಳ ಮೇಲೆ ದಾಳಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ಮೂವರು ಸದಸ್ಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿತ್ತು. ಸೋನಿತ್‌ಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಜೈರಾಮ್ ರಮೇಶ್ ಅವರ ಕಾರಿನ ಮೇಲೂ ದಾಳಿ ನಡೆಸಿದ್ದ ಬಗ್ಗೆ ವರದಿಯಾಗಿತ್ತು. ಈ ನಡುವೆ ಯಾತ್ರೆ ನಾಗಾಂವ್ ತಲುಪಿತ್ತು.

ಈ ಆಪಾದಿತ ದಾಳಿಗಳನ್ನು ಖಂಡಿಸಿ ಕಾಂಗ್ರೆಸ್ ಜನವರಿ 22 ರಂದು ದೇಶದಾದ್ಯಂತ ಪ್ರತಿಭಟನೆ ಘೋಷಿಸಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಅಸ್ಸಾಂನಲ್ಲಿ ಯಾತ್ರೆ ಪ್ರವೇಶಿಸಿದಾಗಿನಿಂದ ನಮ್ಮ ಬೆಂಗಾವಲು ವಾಹನಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದೆ ಎಂದು ಹೇಳಿದ್ದರು.

ಒಟ್ಟಿನಲ್ಲಿ ಜನವರಿ 21, 2024ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿದ್ದ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಅಸ್ಸಾಂನ ನಾಗಾಂವ್‌ ತಲುಪಿದ್ದಾಗ ಅವರ ವಿರುದ್ದ ಪೋಸ್ಟರ್ ಪ್ರದರ್ಶಿಸಿ ಘೋಷಣೆಗಳನ್ನು ಕೂಗಲಾಗಿತ್ತು. ಅದರ ವಿಡಿಯೋವನ್ನು, ಇತ್ತೀಚೆಗೆ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದಾಗ ಗೋ ಬ್ಯಾಕ್‌ ಘೋಷಣೆ ಕೂಗಲಾಗಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...