Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...