Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...