Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...