Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...