Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು...

FACT CHECK : ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರಿಗೆ ಥಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಬುರ್ಖಾ ಧರಿಸಿಲ್ಲ ಎಂಬ ಕಾರಣಕ್ಕೆ ಹಿಂದೂ ಮಹಿಳೆಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ಕೆಲ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು.

“ಬಾಂಗ್ಲಾದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ನೋಡಿ. ಹಿಂದೂ ಹೆಣ್ಣು ಮಕ್ಕಳು ಬುರ್ಕಾ ಹಾಕದೆ ರಸ್ತೆಯಲ್ಲಿ ಹೋಗುತ್ತಾ ಇದ್ದಾರೆ ಎಂದು, ಅವರನ್ನು ಸೂ*ಯರು ಎಂದು ನಡು ರಸ್ತೆಯಲ್ಲಿ ಜರಿದು ಒಬ್ಬ ಮತಾಂಧ ಜಿಹಾದಿ ಮುಸ್ಲಿಂ ಯುವಕ ಹೇಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಮಾಡುತ್ತಾ ಇದ್ದಾರೆ ನೋಡಿ, ಮನುಷ್ಯತ್ವ ಇಲ್ಲದವರು’ ಎಂಬ ಬರಹದೊಂದಿಗೆ ಪದ್ಮನಾಭ ಉಪಾಧ್ಯಾಯ ಎಂಬ ಎಕ್ಸ್‌ ಖಾತೆಯಲ್ಲಿ ಸೆಪ್ಟೆಂಬರ್ 12ರಂದು ವಿಡಿಯೋ ಹಂಚಿಕೊಳ್ಳಲಾಗಿದೆ.

“ಬಾಂಗ್ಲಾದೇಶದಲ್ಲಿ ಬುರ್ಖಾ ಹಾಕಿಲ್ಲ ಎಂಬ ಕಾರಣಕ್ಕೆ ಹಿಂದೂ ಹುಡುಗಿಯರನ್ನು ಬೆನ್ನಟ್ಟಿ ಥಳಿಸಲಾಗುತ್ತಿದೆ. ಈ ಭೂಮಿಯನ್ನು ನರಕವನ್ನಾಗಿ ಮಾಡಲು ಮಾತ್ರ ಅವರನ್ನು ಕಳುಹಿಸಲಾಗಿದೆ. ಭವಿಷ್ಯದಲ್ಲಿ ನಿಮ್ಮ ಮುಂದಿನ ಪೀಳಿಗೆಯನ್ನು ನಾವು ನೋಡುತ್ತಿದ್ದೇವೆ. ಇದು ನಿಮಗೆ ಇನ್ನೂ ಅರ್ಥವಾಗುತ್ತಿಲ್ಲವೇ? ಎಂದು 11 ಸೆಪ್ಟೆಂಬರ್ 2024 ರಂದು ಸನಾತನಿ ಹಿಂದೂ ರಾಕೇಶ್ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವಿಡಿಯೋ ಮೇಲೆ ‘ಇಸ್ಲಾಮಿಕ್ ಮೀಡಿಯಾ ಟಿವಿ ತಬಕ್‌ಪುರ್’ ಎಂದು ಬರೆದಿರುವುದು ಕಂಡು ಬಂದಿದೆ. ನಾವು ಈ ಕುರಿತು ಸರ್ಚ್ ಮಾಡಿದಾಗ, 30 ಆಗಸ್ಟ್‌ 2024 ರಂದು ಫೇಸ್​ಬುಕ್​ ಪೇಜ್‌ನಲ್ಲಿ ಹಂಚಿಕೊಂಡ ಪೋಸ್ಟ್ ಲಭ್ಯವಾಗಿದೆ. ಪೋಸ್ಟ್ ಪ್ರಕಾರ, ಈ ಘಟನೆ ಢಾಕಾದ ಶ್ಯಾಮೋಲಿ ಚೌಕದಲ್ಲಿ ನಡೆದಿದೆ.

ವಿಡಿಯೋ ಜೊತೆಗೆ “ದಯವಿಟ್ಟು ಕೊನೆಯವರೆಗೂ ವೀಡಿಯೊ ನೋಡಿ ಅದಕ್ಕು ಮೊದಲು ಕಾಮೆಂಟ್ ಮಾಡಬೇಡಿ. ಈ ವಿಡಿಯೋದಲ್ಲಿರುವುದು ಮುಖ್ಯ ಮಾಲೀಕ ಮಹಿಳೆ. ನೀವು ಅವಳನ್ನು ನೋಡಿದರೆ ಕೊಲ್ಲಿ. ಇದು ನಿಮ್ಮ ಧಾರ್ಮಿಕ ಜವಾಬ್ದಾರಿಯಾಗಿದೆ. ಸೇನಾ ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ. ದಯವಿಟ್ಟು ನನ್ನನ್ನು ಅಪಾರ್ಥ ಮಾಡಿಕೊಳ್ಳಬೇಡಿ. ವಿಡಿಯೋವನ್ನು ಆದಷ್ಟು ಶೇರ್ ಮಾಡಿ. ಶ್ಯಾಮೋಲಿ ಚೌಕದಲ್ಲಿ ಇದು ನಡೆದಿದೆ. ಎಲ್ಲರೂ ಪ್ರತಿಭಟನೆಯಲ್ಲಿ ಭಾಗವಹಿಸಿ” ಎಂದು ಬರೆಯಲಾಗಿದೆ.

ವಿಡಿಯೋ ಕುರಿತು ಸ್ಪಷ್ಟ ಮಾಹಿತಿ ಸಿಗದ ಕಾರಣ ನಾವು ಈ ಘಟನೆಯ ಕುರಿತು ಹೆಚ್ಚಿನ ವಿವರಣೆಗಾಗಿ ಗೂಗಲ್​ನಲ್ಲಿ ‘dhaka men beaten women’ಎಂದು ಕೀವರ್ಡ್ ಸರ್ಚ್ ಮಾಡಿದ್ದೇವೆ. ಆಗ ಬೆಂಗಾಲಿ ಭಾಷೆಯಲ್ಲಿ ಪ್ರಕಟವಾದ ಕೆಲವು ಲೇಖನ ಲಭ್ಯವಾಗಿದೆ. Our News BD ಎಂಬ ವೆಬ್​ಸೈಟ್​ನಲ್ಲಿ ಇದೇ ವಿಡಿಯೋದ ಸ್ಕ್ರೀನ್ ಶಾಟ್​ನೊಂದಿಗೆ ಸೆ. 2, 2024 ರಂದು ಸುದ್ದಿ ಪ್ರಕಟವಾಗಿದ್ದು ‘ರಾಜಧಾನಿಯಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ’ ಎಂದ ಶೀರ್ಷಿಕೆ ನೀಡಲಾಗಿದೆ.

ವರದಿಯ ಪ್ರಕಾರ, ಡಾಕಾದ ಹಲವು ಪ್ರದೇಶಗಳಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿದ ವಿಡಿಯೋ ವೈರಲ್ ಆಗಿದೆ. ಲೈಂಗಿಕ ಕಾರ್ಯಕರ್ತರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ. ಯುವಕನೋರ್ವ ಹಸಿರು ಬಣ್ಣದ ಪೈಪ್‌ನಿಂದ ಮಹಿಳೆಗೆ ತೀವ್ರವಾಗಿ ಥಳಿಸಿದ್ದಾನೆ.

ಕಲ್ಯಾಣಮಯಿ ನಾರಿ ಸಂಘ ಸಂಸ್ಥೆ ನೀಡಿದ ಮಾಹಿತಿ ಪ್ರಕಾರ, ಕಳೆದ ಆಗಸ್ಟ್ 27 ರಿಂದ ಲೈಂಗಿಕ ಕಾರ್ಯಕರ್ತೆಯರ ಮೇಲೆ ಒಬ್ಬರ ನಂತರ ಒಬ್ಬರು ಹಲ್ಲೆ ನಡೆಸುತ್ತಿದ್ದಾರೆ. ಕನಿಷ್ಠ 60 ಮಹಿಳಾ ಲೈಂಗಿಕ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇಂತಹ ಘಟನೆಗಳಿಗೆ ಕಾರಣರಾದವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಈಗಾಗಲೇ ಮಾತನಾಡಿದ್ದೇವೆ ಎಂದು ಮಹಿಳಾ ಸಂಘ ನೀಡಿದ ಹೇಳಿಕೆ ಈ ವರದಿಯಲ್ಲಿದೆ.

ಹಾಗೆಯೆ ಬಾಂಗ್ಲಾದೇಶದ Kaler Kanthojaijaidinbd ಮಾಧ್ಯಮ ಕೂಡ ಈ ಕುರಿತು ಸುದ್ದಿ ಪ್ರಕಟಿಸಿದ್ದು, ‘ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸುವ ವಿಡಿಯೋ ವೈರಲ್ ಆಗಿದೆ. ಕೆಲವು ಯುವಕರು ವಿವಿಧ ಪ್ರದೇಶಗಳಲ್ಲಿ ತಮ್ಮ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಸಂತ್ರಸ್ತ ಲೈಂಗಿಕ ಕಾರ್ಯಕರ್ತರು ದೂರಿದ್ದಾರೆ’ ಎಂದು ಬರೆಯಲಾಗಿದೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ಢಾಕಾದಲ್ಲಿ ಲೈಂಗಿಕ ಕಾರ್ಯಕರ್ತೆಯರನ್ನು ಥಳಿಸಿರುವ ಘಟನೆಯನ್ನು ಬುರ್ಖಾ ಧರಿಸದ ಕಾರಣಕ್ಕಾಗಿ ಹಿಂದೂ ಮಹಿಳೆಯರನ್ನು ಥಳಿಸಲಾಗಿದೆ ಎಂಬ ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ರಾಜ್ಯದ ಹಲವೆಡೆ ರಾತ್ರಿ ಹೊತ್ತು ಸಿಂಹಗಳ ಓಡಾಟ…ವೈರಲ್ ವಿಡಿಯೋಗಳ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...