Homeಫ್ಯಾಕ್ಟ್‌ಚೆಕ್FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ...

FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

“ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ. ಕಾವಲುಗಾರ ವಾಹನ ಹೀಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದರೂ ಜಿಹಾದಿಗಳು ವಾಹನವನ್ನು ಹೀಗೆ ಕಳುಹಿಸಲು ಹಠ ಹಿಡಿದಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ? ಯಾವುದೇ ಸುದ್ದಿ ವಾಹಿನಿಯು ಈ ಸುದ್ದಿಯನ್ನು ತೋರಿಸುತ್ತಿಲ್ಲ, ದಯವಿಟ್ಟು ಇದನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕೇಂದ್ರ ಸರ್ಕಾರವು ಇದರ ಬಗ್ಗೆ ಗಮನ ಹರಿಸಬೇಕು ಮತ್ತು ಅಂತಹ ಮೂರ್ಖರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬ ಬರಹದೊಂದಿಗೆ ರೈಲಿನ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿರುವ ರೈಲಿನ ಮುಂಭಾಗವನ್ನು ಗುಂಬಝ್ ರೀತಿಯ ಬ್ಯಾನರ್‌ನಿಂದ ಅಲಂಕರಿಸಲಾಗಿದೆ. ರೈಲಿನ ಬಲ ಬದಿಯಲ್ಲಿ ಅರಬಿಕ್ ಭಾಷೆಯ ಬ್ಯಾನರ್‌ವೊಂದು ಕಾಣಿಸುತ್ತಿದೆ. ಅಲ್ಲದೆ, ಕೆಲ ವ್ಯಕ್ತಿಗಳು ರೈಲಿಗೆ ಯಾವುದೋ ಸ್ಟಿಕ್ಕರ್ ಅಂಟಿಸುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲಿಸಿದೆ. ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಹಲವಾರು ಮಾಧ್ಯಮಗಳು ಈ ಕುರಿತು ಈಗಾಗಲೇ ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಕನ್ನಡದ ಏನ್‌ಸುದ್ದಿ ವೆಬ್‌ಸೈಟ್‌ ಮಾಡಿರುವ ಫ್ಯಾಕ್ಟ್‌ಚೆಕ್‌ ಅನ್ನು ನಾವು ಪರಿಶೀಲಿಸಿದಾಗ ಇದು ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿಯ ಬಳಿಯ ಹಲ್ಕಟ್ಟಾ ಶರೀಫ್‌ನ ಉರೂಸ್ ಪ್ರಯುಕ್ತ ದಕ್ಷಿಣ ಮಧ್ಯ ರೈಲ್ವೇ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಅದಕ್ಕೆ ಮುಸ್ಲಿಮರು ಈ ರೀತಿ ಅಲಂಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

2023ರ ಆಗಸ್ಟ್ 1 ರಂದು ಹೈದರಾಬಾದ್‌ನಿಂದ ಕಲಬುರಗಿಯ ವಾಡಿ ಜಂಕ್ಷ‌ನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿತ್ತು. ಹಲ್ಕಟ್ಟಾ ಶರೀಫ್‌ನಲ್ಲಿ ಹಝರತ್ ಖ್ವಾಜಾ ಸೈಯದ್ ಮೊಹಮ್ಮದ್ ಬಡೇಶ ಕ್ವಾದ್ರಿ ಚಿಸ್ತಿ ಯಮಾನಿ ಅವರ ಉರೂಸ್ ಆಚರಣೆಯಲ್ಲಿ ಪಾಲ್ಗೊಳ್ಳುವ ಯಾತ್ರಾರ್ಥಿಗಳ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನಾಲ್ಕು ವಿಶೇಷ ರೈಲುಗಳನ್ನು ಓಡಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಜುಲೈ 27, 2023 ರಂದು ದಕ್ಷಿಣ ಮಧ್ಯ ರೈಲ್ವೆ ಉರೂಸ್ ಪ್ರಯುಕ್ತ ಹೈದರಾಬಾದ್‌-ವಾಡಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿತ್ತು. ಅದನ್ನು ಕೆಳಗೆ ನೋಡಬಹುದು.

ಹಲ್ಕಟ್ಟಾ ದರ್ಗಾ ಶರೀಫ್ ಉರೂಸ್ ಪ್ರಯುಕ್ತ ವಿಶೇಷ ರೈಲಿನ ವ್ಯವಸ್ಥೆ ಮಾಡಿರುವ ಕುರಿತು ಅನೇಕರು ಯೂಟ್ಯೂಬ್‌ನಲ್ಲಿ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಲಿಂಕ್ ಕೆಳಗಿದೆ.

ವೈರಲ್ ವಿಡಿಯೋಲ್ಲಿರುವ ರೈಲು ಮತ್ತು ಯೂಟ್ಯೂಬ್‌ ವಿಡಿಯೋದಲ್ಲಿರುವ ರೈಲು ಒಂದೇ ಎಂಬುವುದನ್ನು ಕೆಳಗಿನ ಫೋಟೋ ಮೂಲಕ ಖಚಿತಪಡಿಸಬಹುದು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಅಂಶವೆಂದರೆ, ಹಲ್ಕಟ್ಟಾ ಶರೀಫ್ ದರ್ಗಾಕ್ಕೆ ನಿಗದಿಪಡಿಸಲಾದ ವಿಶೇಷ ರೈಲನ್ನು ಮುಸ್ಲಿಮರು ಅಲಂಕರಿಸಿದ ವಿಡಿಯೋವನ್ನು ಹಂಚಿಕೊಂಡು “ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ” ಎಂದು ಮುಸ್ಲಿಮರ ವಿರುದ್ದ ಕೋಮು ದ್ವೇಷದ ಸುಳ್ಳು ಸುದ್ದಿ ಹರಿಬಿಡಲಾಗಿದೆ.

ಇದನ್ನೂ ಓದಿ : FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...