Homeಫ್ಯಾಕ್ಟ್‌ಚೆಕ್FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ...

FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

“ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ. ಕಾವಲುಗಾರ ವಾಹನ ಹೀಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದರೂ ಜಿಹಾದಿಗಳು ವಾಹನವನ್ನು ಹೀಗೆ ಕಳುಹಿಸಲು ಹಠ ಹಿಡಿದಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ? ಯಾವುದೇ ಸುದ್ದಿ ವಾಹಿನಿಯು ಈ ಸುದ್ದಿಯನ್ನು ತೋರಿಸುತ್ತಿಲ್ಲ, ದಯವಿಟ್ಟು ಇದನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕೇಂದ್ರ ಸರ್ಕಾರವು ಇದರ ಬಗ್ಗೆ ಗಮನ ಹರಿಸಬೇಕು ಮತ್ತು ಅಂತಹ ಮೂರ್ಖರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬ ಬರಹದೊಂದಿಗೆ ರೈಲಿನ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿರುವ ರೈಲಿನ ಮುಂಭಾಗವನ್ನು ಗುಂಬಝ್ ರೀತಿಯ ಬ್ಯಾನರ್‌ನಿಂದ ಅಲಂಕರಿಸಲಾಗಿದೆ. ರೈಲಿನ ಬಲ ಬದಿಯಲ್ಲಿ ಅರಬಿಕ್ ಭಾಷೆಯ ಬ್ಯಾನರ್‌ವೊಂದು ಕಾಣಿಸುತ್ತಿದೆ. ಅಲ್ಲದೆ, ಕೆಲ ವ್ಯಕ್ತಿಗಳು ರೈಲಿಗೆ ಯಾವುದೋ ಸ್ಟಿಕ್ಕರ್ ಅಂಟಿಸುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲಿಸಿದೆ. ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಹಲವಾರು ಮಾಧ್ಯಮಗಳು ಈ ಕುರಿತು ಈಗಾಗಲೇ ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಕನ್ನಡದ ಏನ್‌ಸುದ್ದಿ ವೆಬ್‌ಸೈಟ್‌ ಮಾಡಿರುವ ಫ್ಯಾಕ್ಟ್‌ಚೆಕ್‌ ಅನ್ನು ನಾವು ಪರಿಶೀಲಿಸಿದಾಗ ಇದು ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿಯ ಬಳಿಯ ಹಲ್ಕಟ್ಟಾ ಶರೀಫ್‌ನ ಉರೂಸ್ ಪ್ರಯುಕ್ತ ದಕ್ಷಿಣ ಮಧ್ಯ ರೈಲ್ವೇ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಅದಕ್ಕೆ ಮುಸ್ಲಿಮರು ಈ ರೀತಿ ಅಲಂಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

2023ರ ಆಗಸ್ಟ್ 1 ರಂದು ಹೈದರಾಬಾದ್‌ನಿಂದ ಕಲಬುರಗಿಯ ವಾಡಿ ಜಂಕ್ಷ‌ನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿತ್ತು. ಹಲ್ಕಟ್ಟಾ ಶರೀಫ್‌ನಲ್ಲಿ ಹಝರತ್ ಖ್ವಾಜಾ ಸೈಯದ್ ಮೊಹಮ್ಮದ್ ಬಡೇಶ ಕ್ವಾದ್ರಿ ಚಿಸ್ತಿ ಯಮಾನಿ ಅವರ ಉರೂಸ್ ಆಚರಣೆಯಲ್ಲಿ ಪಾಲ್ಗೊಳ್ಳುವ ಯಾತ್ರಾರ್ಥಿಗಳ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನಾಲ್ಕು ವಿಶೇಷ ರೈಲುಗಳನ್ನು ಓಡಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಜುಲೈ 27, 2023 ರಂದು ದಕ್ಷಿಣ ಮಧ್ಯ ರೈಲ್ವೆ ಉರೂಸ್ ಪ್ರಯುಕ್ತ ಹೈದರಾಬಾದ್‌-ವಾಡಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿತ್ತು. ಅದನ್ನು ಕೆಳಗೆ ನೋಡಬಹುದು.

ಹಲ್ಕಟ್ಟಾ ದರ್ಗಾ ಶರೀಫ್ ಉರೂಸ್ ಪ್ರಯುಕ್ತ ವಿಶೇಷ ರೈಲಿನ ವ್ಯವಸ್ಥೆ ಮಾಡಿರುವ ಕುರಿತು ಅನೇಕರು ಯೂಟ್ಯೂಬ್‌ನಲ್ಲಿ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಲಿಂಕ್ ಕೆಳಗಿದೆ.

ವೈರಲ್ ವಿಡಿಯೋಲ್ಲಿರುವ ರೈಲು ಮತ್ತು ಯೂಟ್ಯೂಬ್‌ ವಿಡಿಯೋದಲ್ಲಿರುವ ರೈಲು ಒಂದೇ ಎಂಬುವುದನ್ನು ಕೆಳಗಿನ ಫೋಟೋ ಮೂಲಕ ಖಚಿತಪಡಿಸಬಹುದು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಅಂಶವೆಂದರೆ, ಹಲ್ಕಟ್ಟಾ ಶರೀಫ್ ದರ್ಗಾಕ್ಕೆ ನಿಗದಿಪಡಿಸಲಾದ ವಿಶೇಷ ರೈಲನ್ನು ಮುಸ್ಲಿಮರು ಅಲಂಕರಿಸಿದ ವಿಡಿಯೋವನ್ನು ಹಂಚಿಕೊಂಡು “ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ” ಎಂದು ಮುಸ್ಲಿಮರ ವಿರುದ್ದ ಕೋಮು ದ್ವೇಷದ ಸುಳ್ಳು ಸುದ್ದಿ ಹರಿಬಿಡಲಾಗಿದೆ.

ಇದನ್ನೂ ಓದಿ : FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...