Homeಫ್ಯಾಕ್ಟ್‌ಚೆಕ್FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ...

FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

“ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ. ಕಾವಲುಗಾರ ವಾಹನ ಹೀಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದರೂ ಜಿಹಾದಿಗಳು ವಾಹನವನ್ನು ಹೀಗೆ ಕಳುಹಿಸಲು ಹಠ ಹಿಡಿದಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ? ಯಾವುದೇ ಸುದ್ದಿ ವಾಹಿನಿಯು ಈ ಸುದ್ದಿಯನ್ನು ತೋರಿಸುತ್ತಿಲ್ಲ, ದಯವಿಟ್ಟು ಇದನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕೇಂದ್ರ ಸರ್ಕಾರವು ಇದರ ಬಗ್ಗೆ ಗಮನ ಹರಿಸಬೇಕು ಮತ್ತು ಅಂತಹ ಮೂರ್ಖರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬ ಬರಹದೊಂದಿಗೆ ರೈಲಿನ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿರುವ ರೈಲಿನ ಮುಂಭಾಗವನ್ನು ಗುಂಬಝ್ ರೀತಿಯ ಬ್ಯಾನರ್‌ನಿಂದ ಅಲಂಕರಿಸಲಾಗಿದೆ. ರೈಲಿನ ಬಲ ಬದಿಯಲ್ಲಿ ಅರಬಿಕ್ ಭಾಷೆಯ ಬ್ಯಾನರ್‌ವೊಂದು ಕಾಣಿಸುತ್ತಿದೆ. ಅಲ್ಲದೆ, ಕೆಲ ವ್ಯಕ್ತಿಗಳು ರೈಲಿಗೆ ಯಾವುದೋ ಸ್ಟಿಕ್ಕರ್ ಅಂಟಿಸುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲಿಸಿದೆ. ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಹಲವಾರು ಮಾಧ್ಯಮಗಳು ಈ ಕುರಿತು ಈಗಾಗಲೇ ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಕನ್ನಡದ ಏನ್‌ಸುದ್ದಿ ವೆಬ್‌ಸೈಟ್‌ ಮಾಡಿರುವ ಫ್ಯಾಕ್ಟ್‌ಚೆಕ್‌ ಅನ್ನು ನಾವು ಪರಿಶೀಲಿಸಿದಾಗ ಇದು ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿಯ ಬಳಿಯ ಹಲ್ಕಟ್ಟಾ ಶರೀಫ್‌ನ ಉರೂಸ್ ಪ್ರಯುಕ್ತ ದಕ್ಷಿಣ ಮಧ್ಯ ರೈಲ್ವೇ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಅದಕ್ಕೆ ಮುಸ್ಲಿಮರು ಈ ರೀತಿ ಅಲಂಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

2023ರ ಆಗಸ್ಟ್ 1 ರಂದು ಹೈದರಾಬಾದ್‌ನಿಂದ ಕಲಬುರಗಿಯ ವಾಡಿ ಜಂಕ್ಷ‌ನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿತ್ತು. ಹಲ್ಕಟ್ಟಾ ಶರೀಫ್‌ನಲ್ಲಿ ಹಝರತ್ ಖ್ವಾಜಾ ಸೈಯದ್ ಮೊಹಮ್ಮದ್ ಬಡೇಶ ಕ್ವಾದ್ರಿ ಚಿಸ್ತಿ ಯಮಾನಿ ಅವರ ಉರೂಸ್ ಆಚರಣೆಯಲ್ಲಿ ಪಾಲ್ಗೊಳ್ಳುವ ಯಾತ್ರಾರ್ಥಿಗಳ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನಾಲ್ಕು ವಿಶೇಷ ರೈಲುಗಳನ್ನು ಓಡಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಜುಲೈ 27, 2023 ರಂದು ದಕ್ಷಿಣ ಮಧ್ಯ ರೈಲ್ವೆ ಉರೂಸ್ ಪ್ರಯುಕ್ತ ಹೈದರಾಬಾದ್‌-ವಾಡಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿತ್ತು. ಅದನ್ನು ಕೆಳಗೆ ನೋಡಬಹುದು.

ಹಲ್ಕಟ್ಟಾ ದರ್ಗಾ ಶರೀಫ್ ಉರೂಸ್ ಪ್ರಯುಕ್ತ ವಿಶೇಷ ರೈಲಿನ ವ್ಯವಸ್ಥೆ ಮಾಡಿರುವ ಕುರಿತು ಅನೇಕರು ಯೂಟ್ಯೂಬ್‌ನಲ್ಲಿ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಲಿಂಕ್ ಕೆಳಗಿದೆ.

ವೈರಲ್ ವಿಡಿಯೋಲ್ಲಿರುವ ರೈಲು ಮತ್ತು ಯೂಟ್ಯೂಬ್‌ ವಿಡಿಯೋದಲ್ಲಿರುವ ರೈಲು ಒಂದೇ ಎಂಬುವುದನ್ನು ಕೆಳಗಿನ ಫೋಟೋ ಮೂಲಕ ಖಚಿತಪಡಿಸಬಹುದು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಅಂಶವೆಂದರೆ, ಹಲ್ಕಟ್ಟಾ ಶರೀಫ್ ದರ್ಗಾಕ್ಕೆ ನಿಗದಿಪಡಿಸಲಾದ ವಿಶೇಷ ರೈಲನ್ನು ಮುಸ್ಲಿಮರು ಅಲಂಕರಿಸಿದ ವಿಡಿಯೋವನ್ನು ಹಂಚಿಕೊಂಡು “ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ” ಎಂದು ಮುಸ್ಲಿಮರ ವಿರುದ್ದ ಕೋಮು ದ್ವೇಷದ ಸುಳ್ಳು ಸುದ್ದಿ ಹರಿಬಿಡಲಾಗಿದೆ.

ಇದನ್ನೂ ಓದಿ : FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...