Homeಫ್ಯಾಕ್ಟ್‌ಚೆಕ್FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು...

FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ನವೆಂಬರ್ 5ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಹಿಂದೆ ಸರಿಯಬೇಕು ಎಂದು ಡೆಮಾಕ್ರಟಿಕ್ ಪಕ್ಷದ ಕನಿಷ್ಠ ಐದು ಸಂಸದರು ಭಾನುವಾರ ಆಗ್ರಹಿಸಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಇದರ ಬೆನ್ನಲ್ಲೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.

“ಬ್ರೇಕಿಂಗ್ ನ್ಯೂಸ್ : ಇಂದು ಕುಟುಂಬದೊಳಗೆ ಸುದೀರ್ಘ ಚರ್ಚೆಗಳ ನಂತರ, ಜೋ 2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಮತ್ತು ಅವರ ಸ್ಥಾನಕ್ಕೆ ಹಂಟರ್ ಬೈಡನ್ ಅವರನ್ನು ನೇಮಿಸಲಾಗುವುದು. ಹಂಟರ್ ಅವರ ಉಪಾಧ್ಯಕ್ಷರಾಗಿ ಜಿಲ್ ಬೈಡನ್ ಇರಲಿದ್ದಾರೆ” ಎಂದು ಪ್ರತಿಪಾದಿಸಿ ಥ್ರೆಡ್ಸ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದರು.

2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ನಿರ್ಧರಿಸಿದ್ದಾರೆ ಮತ್ತು ಅವರ ಮಗ ಹಂಟರ್ ಬೈಡನ್ ಅವರನ್ನು ಬದಲಾಯಿಸಲಿದ್ದಾರೆ ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.

ವೈರಲ್ ಪೋಸ್ಟ್ ಸುದ್ದಿ ಚಾನೆಲ್ ಕೇಬಲ್ ನ್ಯೂಸ್ ನೆಟ್ವರ್ಕ್ (ಸಿಎನ್ಎನ್) ಲೋಗೋವನ್ನು ಸಹ ಹೊಂದಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಸತ್ಯಾಸತ್ಯತೆ ನಾವು ಪರಿಶೀಲಿಸಿದ್ದು , ಈ ವೇಳೆ ಜೋ ಬೈಡನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಖಚಿತಪಡಿಸಿದ ಯಾವುದೇ ವರದಿಗಳು ಲಭ್ಯವಾಗಿಲ್ಲ. ನಾವು ಬೈಡನ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮದ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅಲ್ಲೂಅವರು ಅಧ್ಯಕ್ಷೀಯ ಸ್ಪರ್ಧೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ಹೇಳುವ ಯಾವುದೇ ಪ್ರಕಟಣೆ ಕಂಡುಬಂದಿಲ್ಲ.

ಇದಕ್ಕೆ ವ್ಯತಿರಿಕ್ತವಾಗಿ, ಅಧ್ಯಕ್ಷ ಜೋ ಬೈಡನ್ “ಕ್ಯಾಪಿಟಲ್ ಹಿಲ್‌ನಲ್ಲಿರುವ ಡೆಮೋಕ್ರಾಟ್ಸ್‌ಗಳಿಗೆ” ಪತ್ರವನ್ನು ಕಳುಹಿಸುವ ಬಗ್ಗೆ ಮಾತನಾಡಿರುವ ಕುರಿತು ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪತ್ರದಲ್ಲಿ, ಅವರು ಸ್ಪರ್ಧೆಯಲ್ಲಿ ಉಳಿಯಲಿದ್ದಾರೆ ಮತ್ತು ಪತ್ರಿಕೆಗಳಲ್ಲಿ ಮತ್ತು ಇತರ ಕಡೆಗಳಲ್ಲಿ ಊಹಾಪೋಹಗಳ ಹೊರತಾಗಿಯೂ ಟ್ರಂಪ್ ಅವರನ್ನು ಸೋಲಿಸಲಿದ್ದಾರೆ ಎಂದು ದೃಢಪಡಿಸಿದ್ದಾರೆ.

“2024 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ನಾನು ಅತ್ಯುತ್ತಮ ವ್ಯಕ್ತಿ ಎಂದು ನಾನು ಸಂಪೂರ್ಣವಾಗಿ ನಂಬದಿದ್ದರೆ ನಾನು ಮತ್ತೆ ಸ್ಪರ್ಧಿಸುತ್ತಿರಲಿಲ್ಲ” ಎಂದು ಸ್ಪಷ್ಟವಾಗಿ ಮತ್ತು ನಿಸ್ಸಂದಿಗ್ಧವಾಗಿ ಹೇಳುವ ಮೂಲಕ ನಾನು ಈ ಎಲ್ಲದಕ್ಕೂ ಪ್ರತಿಕ್ರಿಯಿಸಬಲ್ಲೆ ಎಂದು ಅವರು ಹೇಳಿದ್ದಾರೆ.

ಅಧ್ಯಕ್ಷ ಜೋ ಬೈಡನ್ ಹೊರನಡೆದಿದ್ದಾರೆ ಎಂದು ವೈರಲ್ ಪೋಸ್ಟ್ ಹೇಳಿದ ಕೆಲವು ದಿನಗಳ ನಂತರ, ಜುಲೈ 4ರ ನಂತರ ಪೋಸ್ಟ್ ಮಾಡಲಾದ ಅವರ ಎಕ್ಸ್ ಹ್ಯಾಂಡಲ್‌ನಲ್ಲಿ ಹಲವಾರು ಪೋಸ್ಟ್‌ಗಳನ್ನು ನಾವು ಕಂಡುಕೊಂಡಿದ್ದೇವೆ. ಈ ಎಲ್ಲಾ ಪೋಸ್ಟ್‌ಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಅವರ ಉದ್ದೇಶಗಳನ್ನು ಪುನರುಚ್ಚರಿಸಿವೆ.

ರಾಯಿಟರ್ಸ್‌ನಲ್ಲಿ ಪ್ರಕಟವಾದ ಇತ್ತೀಚಿನ ವರದಿಯಲ್ಲಿ, “ಅಧ್ಯಕ್ಷ ಜೋ ಬೈಡೆನ್ ಅವರು ತಮ್ಮ ಕೆಲವು ಸಹ ಡೆಮೋಕ್ರಾಟ್‌ಗಳು ಸ್ಪರ್ಧೆಯಿಂದ ಹೊರಗುಳಿಯುವಂತೆ ಒತ್ತಾಯಿಸಿದ ಮಧ್ಯೆ ತಮ್ಮ ಮರುಚುನಾವಣೆಯ ಪ್ರಯತ್ನವನ್ನು ಮುಂದುವರಿಸುವುದಾಗಿ ಒತ್ತಾಯಿಸಿದರು. ತಮ್ಮ ಅನುಭವವನ್ನು ಹೇಳಿಕೊಂಡ ಬೈಡನ್, ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರ ಹೆಸರನ್ನು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಬೆರೆಸಿದರು” ಎಂದು ಹೇಳಲಾಗಿದೆ.

ಸಿಎನ್ಎನ್ ವೆಬ್‌ಸೈಟ್‌ನಲ್ಲಿ ಕೀವರ್ಡ್ ಹಾಕಿ ಹುಡುಕಾಟ ನಡೆಸಿದಾಗ ಜೋ ಬೈಡೆನ್ ಅಧ್ಯಕ್ಷೀಯ ಸ್ಪರ್ಧೆಯಿಂದ ನಿರ್ಗಮಿಸುವುದಾಗಿ ಘೋಷಿಸಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ನಮಗೆ ಲಭ್ಯವಾಗಿಲ್ಲ.

ಬೈಡನ್ ನಿಜವಾಗಿಯೂ ಅಂತಹ ಘೋಷಣೆ ಮಾಡಿದ್ದರೆ, ಈ ವಿಷಯದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಇದು ಜಾಗತಿಕ ಮಾಧ್ಯಮಗಳ ಗಮನವನ್ನು ಸೆಳೆಯುತ್ತಿತ್ತು ಮತ್ತು ಜಗತ್ತಿನ ಪ್ರಮುಖ ಮಾಧ್ಯಮಗಳು ವರದಿ ಮಾಡಿರುತ್ತಿದ್ದವು.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿಯುತ್ತಾರೆ ಎಂಬ ಹೇಳಿಕೆ ಸುಳ್ಳು. ಹಾಗಾಗಿ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...