Homeಫ್ಯಾಕ್ಟ್‌ಚೆಕ್FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು...

FACT CHECK : ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ನವೆಂಬರ್ 5ರಂದು ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಹಿಂದೆ ಸರಿಯಬೇಕು ಎಂದು ಡೆಮಾಕ್ರಟಿಕ್ ಪಕ್ಷದ ಕನಿಷ್ಠ ಐದು ಸಂಸದರು ಭಾನುವಾರ ಆಗ್ರಹಿಸಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಇದರ ಬೆನ್ನಲ್ಲೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿದಿದ್ದಾರೆ ಎಂದು ಹೇಳಲಾಗುತ್ತಿದೆ.

“ಬ್ರೇಕಿಂಗ್ ನ್ಯೂಸ್ : ಇಂದು ಕುಟುಂಬದೊಳಗೆ ಸುದೀರ್ಘ ಚರ್ಚೆಗಳ ನಂತರ, ಜೋ 2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಮತ್ತು ಅವರ ಸ್ಥಾನಕ್ಕೆ ಹಂಟರ್ ಬೈಡನ್ ಅವರನ್ನು ನೇಮಿಸಲಾಗುವುದು. ಹಂಟರ್ ಅವರ ಉಪಾಧ್ಯಕ್ಷರಾಗಿ ಜಿಲ್ ಬೈಡನ್ ಇರಲಿದ್ದಾರೆ” ಎಂದು ಪ್ರತಿಪಾದಿಸಿ ಥ್ರೆಡ್ಸ್ ಬಳಕೆದಾರರೊಬ್ಬರು ಪೋಸ್ಟ್ ಮಾಡಿದ್ದರು.

2024ರ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿಯಲು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬೈಡನ್ ನಿರ್ಧರಿಸಿದ್ದಾರೆ ಮತ್ತು ಅವರ ಮಗ ಹಂಟರ್ ಬೈಡನ್ ಅವರನ್ನು ಬದಲಾಯಿಸಲಿದ್ದಾರೆ ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.

ವೈರಲ್ ಪೋಸ್ಟ್ ಸುದ್ದಿ ಚಾನೆಲ್ ಕೇಬಲ್ ನ್ಯೂಸ್ ನೆಟ್ವರ್ಕ್ (ಸಿಎನ್ಎನ್) ಲೋಗೋವನ್ನು ಸಹ ಹೊಂದಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಸತ್ಯಾಸತ್ಯತೆ ನಾವು ಪರಿಶೀಲಿಸಿದ್ದು , ಈ ವೇಳೆ ಜೋ ಬೈಡನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಖಚಿತಪಡಿಸಿದ ಯಾವುದೇ ವರದಿಗಳು ಲಭ್ಯವಾಗಿಲ್ಲ. ನಾವು ಬೈಡನ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮದ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅಲ್ಲೂಅವರು ಅಧ್ಯಕ್ಷೀಯ ಸ್ಪರ್ಧೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ ಎಂದು ಹೇಳುವ ಯಾವುದೇ ಪ್ರಕಟಣೆ ಕಂಡುಬಂದಿಲ್ಲ.

ಇದಕ್ಕೆ ವ್ಯತಿರಿಕ್ತವಾಗಿ, ಅಧ್ಯಕ್ಷ ಜೋ ಬೈಡನ್ “ಕ್ಯಾಪಿಟಲ್ ಹಿಲ್‌ನಲ್ಲಿರುವ ಡೆಮೋಕ್ರಾಟ್ಸ್‌ಗಳಿಗೆ” ಪತ್ರವನ್ನು ಕಳುಹಿಸುವ ಬಗ್ಗೆ ಮಾತನಾಡಿರುವ ಕುರಿತು ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಪತ್ರದಲ್ಲಿ, ಅವರು ಸ್ಪರ್ಧೆಯಲ್ಲಿ ಉಳಿಯಲಿದ್ದಾರೆ ಮತ್ತು ಪತ್ರಿಕೆಗಳಲ್ಲಿ ಮತ್ತು ಇತರ ಕಡೆಗಳಲ್ಲಿ ಊಹಾಪೋಹಗಳ ಹೊರತಾಗಿಯೂ ಟ್ರಂಪ್ ಅವರನ್ನು ಸೋಲಿಸಲಿದ್ದಾರೆ ಎಂದು ದೃಢಪಡಿಸಿದ್ದಾರೆ.

“2024 ರಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ನಾನು ಅತ್ಯುತ್ತಮ ವ್ಯಕ್ತಿ ಎಂದು ನಾನು ಸಂಪೂರ್ಣವಾಗಿ ನಂಬದಿದ್ದರೆ ನಾನು ಮತ್ತೆ ಸ್ಪರ್ಧಿಸುತ್ತಿರಲಿಲ್ಲ” ಎಂದು ಸ್ಪಷ್ಟವಾಗಿ ಮತ್ತು ನಿಸ್ಸಂದಿಗ್ಧವಾಗಿ ಹೇಳುವ ಮೂಲಕ ನಾನು ಈ ಎಲ್ಲದಕ್ಕೂ ಪ್ರತಿಕ್ರಿಯಿಸಬಲ್ಲೆ ಎಂದು ಅವರು ಹೇಳಿದ್ದಾರೆ.

ಅಧ್ಯಕ್ಷ ಜೋ ಬೈಡನ್ ಹೊರನಡೆದಿದ್ದಾರೆ ಎಂದು ವೈರಲ್ ಪೋಸ್ಟ್ ಹೇಳಿದ ಕೆಲವು ದಿನಗಳ ನಂತರ, ಜುಲೈ 4ರ ನಂತರ ಪೋಸ್ಟ್ ಮಾಡಲಾದ ಅವರ ಎಕ್ಸ್ ಹ್ಯಾಂಡಲ್‌ನಲ್ಲಿ ಹಲವಾರು ಪೋಸ್ಟ್‌ಗಳನ್ನು ನಾವು ಕಂಡುಕೊಂಡಿದ್ದೇವೆ. ಈ ಎಲ್ಲಾ ಪೋಸ್ಟ್‌ಗಳು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಅವರ ಉದ್ದೇಶಗಳನ್ನು ಪುನರುಚ್ಚರಿಸಿವೆ.

ರಾಯಿಟರ್ಸ್‌ನಲ್ಲಿ ಪ್ರಕಟವಾದ ಇತ್ತೀಚಿನ ವರದಿಯಲ್ಲಿ, “ಅಧ್ಯಕ್ಷ ಜೋ ಬೈಡೆನ್ ಅವರು ತಮ್ಮ ಕೆಲವು ಸಹ ಡೆಮೋಕ್ರಾಟ್‌ಗಳು ಸ್ಪರ್ಧೆಯಿಂದ ಹೊರಗುಳಿಯುವಂತೆ ಒತ್ತಾಯಿಸಿದ ಮಧ್ಯೆ ತಮ್ಮ ಮರುಚುನಾವಣೆಯ ಪ್ರಯತ್ನವನ್ನು ಮುಂದುವರಿಸುವುದಾಗಿ ಒತ್ತಾಯಿಸಿದರು. ತಮ್ಮ ಅನುಭವವನ್ನು ಹೇಳಿಕೊಂಡ ಬೈಡನ್, ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರ ಹೆಸರನ್ನು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಬೆರೆಸಿದರು” ಎಂದು ಹೇಳಲಾಗಿದೆ.

ಸಿಎನ್ಎನ್ ವೆಬ್‌ಸೈಟ್‌ನಲ್ಲಿ ಕೀವರ್ಡ್ ಹಾಕಿ ಹುಡುಕಾಟ ನಡೆಸಿದಾಗ ಜೋ ಬೈಡೆನ್ ಅಧ್ಯಕ್ಷೀಯ ಸ್ಪರ್ಧೆಯಿಂದ ನಿರ್ಗಮಿಸುವುದಾಗಿ ಘೋಷಿಸಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ನಮಗೆ ಲಭ್ಯವಾಗಿಲ್ಲ.

ಬೈಡನ್ ನಿಜವಾಗಿಯೂ ಅಂತಹ ಘೋಷಣೆ ಮಾಡಿದ್ದರೆ, ಈ ವಿಷಯದ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಇದು ಜಾಗತಿಕ ಮಾಧ್ಯಮಗಳ ಗಮನವನ್ನು ಸೆಳೆಯುತ್ತಿತ್ತು ಮತ್ತು ಜಗತ್ತಿನ ಪ್ರಮುಖ ಮಾಧ್ಯಮಗಳು ವರದಿ ಮಾಡಿರುತ್ತಿದ್ದವು.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಅಮೆರಿಕ ಅಧ್ಯಕ್ಷ ಜೋ ಬೈಡನ್ ಹಿಂದೆ ಸರಿಯುತ್ತಾರೆ ಎಂಬ ಹೇಳಿಕೆ ಸುಳ್ಳು. ಹಾಗಾಗಿ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...