Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಏನಾಗ್ತಿದೆಯೋ, ಅದು ಪಾಕಿಸ್ತಾನದ ಟೆಕ್ನಿಕ್. ಪಾಕಿಸ್ತಾನ ತನ್ನ ಹಣೆಗೆ ಗನ್ ಇಟ್ಟುಕೊಳ್ಳುತ್ತದೆ . ಆಮೇಲೆ ಪಾಕಿಸ್ತಾನ ಸರ್ಕಾರ ಅಮೆರಿಕದ ಕಡೆ ನೋಡಿ ಹೇಳುತ್ತದೆ, ‘ನೀವು ನಮಗೆ ದುಡ್ಡು ಕೊಟ್ಟಿಲ್ಲಾ ಅಂದ್ರೆ ನಾವು ನಮ್ಮನ್ನೇ ಶೂಟ್ ಮಾಡಿಕೊಳ್ಳುತ್ತೇವೆ’ ಎಂದು. ಪಾಕಿಸ್ತಾನ ತಾನೇ ಸತ್ತು ಹೋಗುವೆ ಅನ್ನುತ್ತೆ. ಅಮೆರಿಕ ಹೆದರಿ ದುಡ್ಡು ಕೊಡುತ್ತೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡ್ತಿರೋದು ಅದೇ. ಭರವಸೆ ಕೊಟ್ಟಿರುವುದು ನೀವು, ಗ್ಯಾರಂಟಿ ಕೊಡ್ತಿರುವುದು ನೀವು. ಈಗ ಕೇಂದ್ರ ಸರ್ಕಾರ ಅದಕ್ಕೆ ಯಾಕೆ ಸಹಾಯ ಮಾಡಬೇಕು? ನೀವು ಸಂಪನ್ಮೂಲ ಕ್ರೂಡೀಕರಿಸಿ, ನೀವು ಮಾಡಿ ತೋರಿಸಿ. ಈ ಗ್ಯಾರಂಟಿಗಳಿಂದ ರಾಜ್ಯ ನಡೆಸೋಕಾಗುತ್ತದೆ ಅಂತ ತೋರಿಸಿ ನೋಡೋಣ. ನೀವು ಬಿಟ್ಟಿ ಭಾಗ್ಯಗಳೆಲ್ಲಾ ಕೊಟ್ಟು, ಈಗ ನಿಮ್ಮ ಹಣೆಗೆ ಗನ್ ಇಟ್ಟು ನಮ್ಮನ್ನು ಹೆದರಿಸ್ತೀರಾ? ಪಾಕಿಸ್ತಾನ ಅಮೆರಿಕಕ್ಕೆ ಮಾಡಿದಂತೆಯೇ, ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಮಾಡ್ತಿದೆ” ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ ಅಣ್ಣಾಮಲೈ ಈ ಮಾತುಗಳನ್ನು ಹೇಳಿದ್ದಾರೆ. ಸಂದರ್ಶನ ಯೂಟ್ಯೂಬ್ ಲಿಂಕ್ ಕೆಳಗಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್‌ : ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆಯಾ? ಹಣ ಕೊಡದಿದ್ದರೆ ಶೂಟ್ ಮಾಡಿಕೊಳ್ಳುತ್ತೀನಿ ಎಂಬ ರೀತಿಯಲ್ಲಿ ಪಾಕಿಸ್ತಾನದಂತೆ ಕೇಂದ್ರವನ್ನು ಹೆದರಿಸುತ್ತಿದೆಯಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದರು. ಆ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ಹೇಳಿದ್ದರು. ಅದೇ ರೀತಿಯ ಹೇಳಿಕೆಯನ್ನು ಅಣ್ಣಾಮಲೈ ನೀಡಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 25ರಂದು ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ್ದ ಸಚಿವ ಕೃಷ್ಣಬೈರೇಗೌಡ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಎಷ್ಟು? ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಹಣ ನೀಡುತ್ತಿದೆಯಾ? ಇತ್ಯಾದಿ ಮಾಹಿತಿಗಳನ್ನು ಅಂಕಿ ಅಂಶ ಸಹಿತ ವಿವರಿಸಿದ್ದರು.

ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯಕ್ಕೆ ಕೇಂದ್ರದಿಂದ 2020-21ನೇ ಸಾಲಿನ ತೆರಿಗೆ ಬಾಕಿ ರೂ. 5,495 ಕೋಟಿ ಮತ್ತು 2021-26ನೇ ಸಾಲಿನಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ರೂ.6,000 ಕೋಟಿ ಸೇರಿ ಒಟ್ಟು ರೂ.11,495 ಕೋಟಿ ಬರಬೇಕಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ 2024-25 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂ., ಶಕ್ತಿ ಯೋಜನೆಗೆ 5,015 ಕೋಟಿ ರೂ., ಯುವನಿಧಿ ಯೋಜನೆಗೆ 650 ಕೋಟಿ ರೂ., ಮತ್ತು ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ನೀಡಿದೆ. ಹಾಗಾಗಿ, ಇಲ್ಲಿ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನದ ಅವಶ್ಯಕತೆ ಇಲ್ಲ.

ಅಣ್ಣಾಮಲೈ ಕೂಡ ನಿರ್ಮಲಾ ಸೀತಾರಾಮನ್ ರೀತಿಯೇ ಆರೋಪ ಮಾಡಿರುವುದರಿಂದ ಕೃಷ್ಣ ಬೈರೇಗೌಡರು ಬಿಡುಗಡೆ ಮಾಡಿರುವ ಅಂಕಿ ಅಂಶವನ್ನು ನಾವು ಇಲ್ಲಿಯೂ ಉಲ್ಲೇಖಿಸಬಹುದು. ಕೃಷ್ಣ ಬೈರೇಗೌಡರ ಸುದ್ದಿಗೋಷ್ಠಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಮಾರ್ಚ್ 26, 2024 ರಂದು ಫ್ಯಾಕ್ಟ್‌ ಸುದ್ದಿಯನ್ನು ಪ್ರಕಟಿಸಿದೆ.

 ಸುದ್ದಿ ಲಿಂಕ್ ಇಲ್ಲಿದೆ

ಏಪ್ರಿಲ್ 3, 2024ರಂದು “ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?’ ಎಂಬ ಶೀರ್ಷಿಕೆಯಲ್ಲಿ ನಾನುಗೌರಿ.ಕಾಂ ಮತ್ತೊಂದು ಫ್ಯಾಕ್ಟ್‌ಚೆಕ್ ಸುದ್ದಿಯನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲೂ ರಾಜ್ಯ ಸರ್ಕಾರ 2022-23ನೇ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಿತ್ತು. 2023-24ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುವುದರ ಕುರಿತು ವಿವರವಾಗಿ ಬರೆದಿದೆ.

ಸುದ್ದಿಯ ಲಿಂಕ್ ಇಲ್ಲಿದೆ

ಗಮನಾರ್ಹ ವಿಷಯವೆಂದರೆ, ಸಚಿವ ಕೃಷ್ಣ ಬೈರೇಗೌಡರು ದಾಖಲೆ ಸಹಿತ ವಿವರಿಸಿದಂತೆ ಮತ್ತು ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ ಹಣ ಮೀಸಲಿಟ್ಟಂತೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಬಳಸುತ್ತಿಲ್ಲ. ರಾಜ್ಯ ಕೇಳುತ್ತಿರುವುದು ಜಿಎಸ್‌ಟಿ ಪಾಲಿನ ಹಣ, ಹಣಕಾಸು ಆಯೋಗ ಶಿಫಾರಸು ಮಾಡಿದ ಬಾಕಿ ಹಣ ಮತ್ತು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿದಿಯಡಿ ಬರಬೇಕಿರುವ ಬರ ಪರಿಹಾರದ ಹಣವಾಗಿದೆ.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ರೂ.31,180 ಕೋಟಿಗೆ ಕುಸಿದಿದೆ. ಹೀಗಾಗಿ, ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. ಇನ್ನು ಜಲಮೂಲಗಳ ಪುನರುಜ್ಜೀವನಕ್ಕೆ 3 ಸಾವಿರ ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರೂ. ಸೇರಿ ಬೆಂಗಳೂರಿಗೆ ಒಟ್ಟು ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಹಳೆ ಬಾಕಿ ಸೇರಿ ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಏಪ್ರಿಲ್ 22ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಾಗಾಗಿ, ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...