Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಏನಾಗ್ತಿದೆಯೋ, ಅದು ಪಾಕಿಸ್ತಾನದ ಟೆಕ್ನಿಕ್. ಪಾಕಿಸ್ತಾನ ತನ್ನ ಹಣೆಗೆ ಗನ್ ಇಟ್ಟುಕೊಳ್ಳುತ್ತದೆ . ಆಮೇಲೆ ಪಾಕಿಸ್ತಾನ ಸರ್ಕಾರ ಅಮೆರಿಕದ ಕಡೆ ನೋಡಿ ಹೇಳುತ್ತದೆ, ‘ನೀವು ನಮಗೆ ದುಡ್ಡು ಕೊಟ್ಟಿಲ್ಲಾ ಅಂದ್ರೆ ನಾವು ನಮ್ಮನ್ನೇ ಶೂಟ್ ಮಾಡಿಕೊಳ್ಳುತ್ತೇವೆ’ ಎಂದು. ಪಾಕಿಸ್ತಾನ ತಾನೇ ಸತ್ತು ಹೋಗುವೆ ಅನ್ನುತ್ತೆ. ಅಮೆರಿಕ ಹೆದರಿ ದುಡ್ಡು ಕೊಡುತ್ತೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡ್ತಿರೋದು ಅದೇ. ಭರವಸೆ ಕೊಟ್ಟಿರುವುದು ನೀವು, ಗ್ಯಾರಂಟಿ ಕೊಡ್ತಿರುವುದು ನೀವು. ಈಗ ಕೇಂದ್ರ ಸರ್ಕಾರ ಅದಕ್ಕೆ ಯಾಕೆ ಸಹಾಯ ಮಾಡಬೇಕು? ನೀವು ಸಂಪನ್ಮೂಲ ಕ್ರೂಡೀಕರಿಸಿ, ನೀವು ಮಾಡಿ ತೋರಿಸಿ. ಈ ಗ್ಯಾರಂಟಿಗಳಿಂದ ರಾಜ್ಯ ನಡೆಸೋಕಾಗುತ್ತದೆ ಅಂತ ತೋರಿಸಿ ನೋಡೋಣ. ನೀವು ಬಿಟ್ಟಿ ಭಾಗ್ಯಗಳೆಲ್ಲಾ ಕೊಟ್ಟು, ಈಗ ನಿಮ್ಮ ಹಣೆಗೆ ಗನ್ ಇಟ್ಟು ನಮ್ಮನ್ನು ಹೆದರಿಸ್ತೀರಾ? ಪಾಕಿಸ್ತಾನ ಅಮೆರಿಕಕ್ಕೆ ಮಾಡಿದಂತೆಯೇ, ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಮಾಡ್ತಿದೆ” ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ ಅಣ್ಣಾಮಲೈ ಈ ಮಾತುಗಳನ್ನು ಹೇಳಿದ್ದಾರೆ. ಸಂದರ್ಶನ ಯೂಟ್ಯೂಬ್ ಲಿಂಕ್ ಕೆಳಗಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್‌ : ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆಯಾ? ಹಣ ಕೊಡದಿದ್ದರೆ ಶೂಟ್ ಮಾಡಿಕೊಳ್ಳುತ್ತೀನಿ ಎಂಬ ರೀತಿಯಲ್ಲಿ ಪಾಕಿಸ್ತಾನದಂತೆ ಕೇಂದ್ರವನ್ನು ಹೆದರಿಸುತ್ತಿದೆಯಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದರು. ಆ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ಹೇಳಿದ್ದರು. ಅದೇ ರೀತಿಯ ಹೇಳಿಕೆಯನ್ನು ಅಣ್ಣಾಮಲೈ ನೀಡಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 25ರಂದು ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ್ದ ಸಚಿವ ಕೃಷ್ಣಬೈರೇಗೌಡ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಎಷ್ಟು? ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಹಣ ನೀಡುತ್ತಿದೆಯಾ? ಇತ್ಯಾದಿ ಮಾಹಿತಿಗಳನ್ನು ಅಂಕಿ ಅಂಶ ಸಹಿತ ವಿವರಿಸಿದ್ದರು.

ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯಕ್ಕೆ ಕೇಂದ್ರದಿಂದ 2020-21ನೇ ಸಾಲಿನ ತೆರಿಗೆ ಬಾಕಿ ರೂ. 5,495 ಕೋಟಿ ಮತ್ತು 2021-26ನೇ ಸಾಲಿನಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ರೂ.6,000 ಕೋಟಿ ಸೇರಿ ಒಟ್ಟು ರೂ.11,495 ಕೋಟಿ ಬರಬೇಕಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ 2024-25 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂ., ಶಕ್ತಿ ಯೋಜನೆಗೆ 5,015 ಕೋಟಿ ರೂ., ಯುವನಿಧಿ ಯೋಜನೆಗೆ 650 ಕೋಟಿ ರೂ., ಮತ್ತು ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ನೀಡಿದೆ. ಹಾಗಾಗಿ, ಇಲ್ಲಿ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನದ ಅವಶ್ಯಕತೆ ಇಲ್ಲ.

ಅಣ್ಣಾಮಲೈ ಕೂಡ ನಿರ್ಮಲಾ ಸೀತಾರಾಮನ್ ರೀತಿಯೇ ಆರೋಪ ಮಾಡಿರುವುದರಿಂದ ಕೃಷ್ಣ ಬೈರೇಗೌಡರು ಬಿಡುಗಡೆ ಮಾಡಿರುವ ಅಂಕಿ ಅಂಶವನ್ನು ನಾವು ಇಲ್ಲಿಯೂ ಉಲ್ಲೇಖಿಸಬಹುದು. ಕೃಷ್ಣ ಬೈರೇಗೌಡರ ಸುದ್ದಿಗೋಷ್ಠಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಮಾರ್ಚ್ 26, 2024 ರಂದು ಫ್ಯಾಕ್ಟ್‌ ಸುದ್ದಿಯನ್ನು ಪ್ರಕಟಿಸಿದೆ.

 ಸುದ್ದಿ ಲಿಂಕ್ ಇಲ್ಲಿದೆ

ಏಪ್ರಿಲ್ 3, 2024ರಂದು “ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?’ ಎಂಬ ಶೀರ್ಷಿಕೆಯಲ್ಲಿ ನಾನುಗೌರಿ.ಕಾಂ ಮತ್ತೊಂದು ಫ್ಯಾಕ್ಟ್‌ಚೆಕ್ ಸುದ್ದಿಯನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲೂ ರಾಜ್ಯ ಸರ್ಕಾರ 2022-23ನೇ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಿತ್ತು. 2023-24ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುವುದರ ಕುರಿತು ವಿವರವಾಗಿ ಬರೆದಿದೆ.

ಸುದ್ದಿಯ ಲಿಂಕ್ ಇಲ್ಲಿದೆ

ಗಮನಾರ್ಹ ವಿಷಯವೆಂದರೆ, ಸಚಿವ ಕೃಷ್ಣ ಬೈರೇಗೌಡರು ದಾಖಲೆ ಸಹಿತ ವಿವರಿಸಿದಂತೆ ಮತ್ತು ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ ಹಣ ಮೀಸಲಿಟ್ಟಂತೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಬಳಸುತ್ತಿಲ್ಲ. ರಾಜ್ಯ ಕೇಳುತ್ತಿರುವುದು ಜಿಎಸ್‌ಟಿ ಪಾಲಿನ ಹಣ, ಹಣಕಾಸು ಆಯೋಗ ಶಿಫಾರಸು ಮಾಡಿದ ಬಾಕಿ ಹಣ ಮತ್ತು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿದಿಯಡಿ ಬರಬೇಕಿರುವ ಬರ ಪರಿಹಾರದ ಹಣವಾಗಿದೆ.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ರೂ.31,180 ಕೋಟಿಗೆ ಕುಸಿದಿದೆ. ಹೀಗಾಗಿ, ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. ಇನ್ನು ಜಲಮೂಲಗಳ ಪುನರುಜ್ಜೀವನಕ್ಕೆ 3 ಸಾವಿರ ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರೂ. ಸೇರಿ ಬೆಂಗಳೂರಿಗೆ ಒಟ್ಟು ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಹಳೆ ಬಾಕಿ ಸೇರಿ ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಏಪ್ರಿಲ್ 22ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಾಗಾಗಿ, ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...