Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

FACT CHECK : ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೇಳುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಏನಾಗ್ತಿದೆಯೋ, ಅದು ಪಾಕಿಸ್ತಾನದ ಟೆಕ್ನಿಕ್. ಪಾಕಿಸ್ತಾನ ತನ್ನ ಹಣೆಗೆ ಗನ್ ಇಟ್ಟುಕೊಳ್ಳುತ್ತದೆ . ಆಮೇಲೆ ಪಾಕಿಸ್ತಾನ ಸರ್ಕಾರ ಅಮೆರಿಕದ ಕಡೆ ನೋಡಿ ಹೇಳುತ್ತದೆ, ‘ನೀವು ನಮಗೆ ದುಡ್ಡು ಕೊಟ್ಟಿಲ್ಲಾ ಅಂದ್ರೆ ನಾವು ನಮ್ಮನ್ನೇ ಶೂಟ್ ಮಾಡಿಕೊಳ್ಳುತ್ತೇವೆ’ ಎಂದು. ಪಾಕಿಸ್ತಾನ ತಾನೇ ಸತ್ತು ಹೋಗುವೆ ಅನ್ನುತ್ತೆ. ಅಮೆರಿಕ ಹೆದರಿ ದುಡ್ಡು ಕೊಡುತ್ತೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡ್ತಿರೋದು ಅದೇ. ಭರವಸೆ ಕೊಟ್ಟಿರುವುದು ನೀವು, ಗ್ಯಾರಂಟಿ ಕೊಡ್ತಿರುವುದು ನೀವು. ಈಗ ಕೇಂದ್ರ ಸರ್ಕಾರ ಅದಕ್ಕೆ ಯಾಕೆ ಸಹಾಯ ಮಾಡಬೇಕು? ನೀವು ಸಂಪನ್ಮೂಲ ಕ್ರೂಡೀಕರಿಸಿ, ನೀವು ಮಾಡಿ ತೋರಿಸಿ. ಈ ಗ್ಯಾರಂಟಿಗಳಿಂದ ರಾಜ್ಯ ನಡೆಸೋಕಾಗುತ್ತದೆ ಅಂತ ತೋರಿಸಿ ನೋಡೋಣ. ನೀವು ಬಿಟ್ಟಿ ಭಾಗ್ಯಗಳೆಲ್ಲಾ ಕೊಟ್ಟು, ಈಗ ನಿಮ್ಮ ಹಣೆಗೆ ಗನ್ ಇಟ್ಟು ನಮ್ಮನ್ನು ಹೆದರಿಸ್ತೀರಾ? ಪಾಕಿಸ್ತಾನ ಅಮೆರಿಕಕ್ಕೆ ಮಾಡಿದಂತೆಯೇ, ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಮಾಡ್ತಿದೆ” ಎಂದು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೀಡಿರುವ ಹೇಳಿಕೆಯೊಂದು ವೈರಲ್ ಆಗಿದೆ.

ಸುದ್ದಿ ಸಂಸ್ಥೆ ಎಎನ್‌ಐ ಸಂಪಾದಕಿ ಸ್ಮಿತಾ ಪ್ರಕಾಶ್ ಅವರೊಂದಿಗಿನ ವಿಶೇಷ ಸಂದರ್ಶನದಲ್ಲಿ ಅಣ್ಣಾಮಲೈ ಈ ಮಾತುಗಳನ್ನು ಹೇಳಿದ್ದಾರೆ. ಸಂದರ್ಶನ ಯೂಟ್ಯೂಬ್ ಲಿಂಕ್ ಕೆಳಗಿದೆ.

ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್‌ : ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆಯಾ? ಹಣ ಕೊಡದಿದ್ದರೆ ಶೂಟ್ ಮಾಡಿಕೊಳ್ಳುತ್ತೀನಿ ಎಂಬ ರೀತಿಯಲ್ಲಿ ಪಾಕಿಸ್ತಾನದಂತೆ ಕೇಂದ್ರವನ್ನು ಹೆದರಿಸುತ್ತಿದೆಯಾ? ಎಂಬುವುದರ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದೆ.

ಬೆಂಗಳೂರಿನಲ್ಲಿ ಮಾರ್ಚ್ 24ರಂದು ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ‘ಬಿಟ್ಟಿ ಭಾಗ್ಯ’ ಎಂದಿದ್ದರು. ಆ ಬಿಟ್ಟಿ ಭಾಗ್ಯಗಳಿಗೆ ಕೇಂದ್ರ ಹಣ ನೀಡಲ್ಲ ಎಂದು ಹೇಳಿದ್ದರು. ಅದೇ ರೀತಿಯ ಹೇಳಿಕೆಯನ್ನು ಅಣ್ಣಾಮಲೈ ನೀಡಿದ್ದಾರೆ.

ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಸಂಬಂಧಪಟ್ಟಂತೆ ಮಾರ್ಚ್ 25ರಂದು ಸುದ್ದಿಗೋಷ್ಠಿ ನಡೆಸಿ ತಿರುಗೇಟು ನೀಡಿದ್ದ ಸಚಿವ ಕೃಷ್ಣಬೈರೇಗೌಡ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬಾಕಿ ಹಣ ಎಷ್ಟು? ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರ ಹಣ ನೀಡುತ್ತಿದೆಯಾ? ಇತ್ಯಾದಿ ಮಾಹಿತಿಗಳನ್ನು ಅಂಕಿ ಅಂಶ ಸಹಿತ ವಿವರಿಸಿದ್ದರು.

ಸಚಿವರು ನೀಡಿರುವ ಅಂಕಿ ಅಂಶಗಳ ಪ್ರಕಾರ, ರಾಜ್ಯಕ್ಕೆ ಕೇಂದ್ರದಿಂದ 2020-21ನೇ ಸಾಲಿನ ತೆರಿಗೆ ಬಾಕಿ ರೂ. 5,495 ಕೋಟಿ ಮತ್ತು 2021-26ನೇ ಸಾಲಿನಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿರುವ ರೂ.6,000 ಕೋಟಿ ಸೇರಿ ಒಟ್ಟು ರೂ.11,495 ಕೋಟಿ ಬರಬೇಕಿದೆ.

ಐದು ಗ್ಯಾರಂಟಿ ಯೋಜನೆಗಳಿಗೆ 2024-25 ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಈ ಪೈಕಿ ಗೃಹಜ್ಯೋತಿ ಯೋಜನೆಗೆ 9,657 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,079 ಕೋಟಿ ರೂ., ಶಕ್ತಿ ಯೋಜನೆಗೆ 5,015 ಕೋಟಿ ರೂ., ಯುವನಿಧಿ ಯೋಜನೆಗೆ 650 ಕೋಟಿ ರೂ., ಮತ್ತು ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ನೀಡಿದೆ. ಹಾಗಾಗಿ, ಇಲ್ಲಿ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನದ ಅವಶ್ಯಕತೆ ಇಲ್ಲ.

ಅಣ್ಣಾಮಲೈ ಕೂಡ ನಿರ್ಮಲಾ ಸೀತಾರಾಮನ್ ರೀತಿಯೇ ಆರೋಪ ಮಾಡಿರುವುದರಿಂದ ಕೃಷ್ಣ ಬೈರೇಗೌಡರು ಬಿಡುಗಡೆ ಮಾಡಿರುವ ಅಂಕಿ ಅಂಶವನ್ನು ನಾವು ಇಲ್ಲಿಯೂ ಉಲ್ಲೇಖಿಸಬಹುದು. ಕೃಷ್ಣ ಬೈರೇಗೌಡರ ಸುದ್ದಿಗೋಷ್ಠಿಗೆ ಸಂಬಂಧಪಟ್ಟಂತೆ ನಾನುಗೌರಿ.ಕಾಂ ಮಾರ್ಚ್ 26, 2024 ರಂದು ಫ್ಯಾಕ್ಟ್‌ ಸುದ್ದಿಯನ್ನು ಪ್ರಕಟಿಸಿದೆ.

 ಸುದ್ದಿ ಲಿಂಕ್ ಇಲ್ಲಿದೆ

ಏಪ್ರಿಲ್ 3, 2024ರಂದು “ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆಯಾ?’ ಎಂಬ ಶೀರ್ಷಿಕೆಯಲ್ಲಿ ನಾನುಗೌರಿ.ಕಾಂ ಮತ್ತೊಂದು ಫ್ಯಾಕ್ಟ್‌ಚೆಕ್ ಸುದ್ದಿಯನ್ನು ಪ್ರಕಟಿಸಿದೆ. ಈ ಸುದ್ದಿಯಲ್ಲೂ ರಾಜ್ಯ ಸರ್ಕಾರ 2022-23ನೇ ಹಣಕಾಸು ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಖರ್ಚು ಮಾಡಿತ್ತು. 2023-24ನೇ ಹಣಕಾಸು ವರ್ಷದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಮೀಸಲಿಟ್ಟಿದೆ ಎಂಬುವುದರ ಕುರಿತು ವಿವರವಾಗಿ ಬರೆದಿದೆ.

ಸುದ್ದಿಯ ಲಿಂಕ್ ಇಲ್ಲಿದೆ

ಗಮನಾರ್ಹ ವಿಷಯವೆಂದರೆ, ಸಚಿವ ಕೃಷ್ಣ ಬೈರೇಗೌಡರು ದಾಖಲೆ ಸಹಿತ ವಿವರಿಸಿದಂತೆ ಮತ್ತು ರಾಜ್ಯ ಸರ್ಕಾರ 2023-24ನೇ ಸಾಲಿನ ಬಜೆಟ್‌ನಲ್ಲಿ ಹಣ ಮೀಸಲಿಟ್ಟಂತೆ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದ ಅನುದಾನ ಬಳಸುತ್ತಿಲ್ಲ. ರಾಜ್ಯ ಕೇಳುತ್ತಿರುವುದು ಜಿಎಸ್‌ಟಿ ಪಾಲಿನ ಹಣ, ಹಣಕಾಸು ಆಯೋಗ ಶಿಫಾರಸು ಮಾಡಿದ ಬಾಕಿ ಹಣ ಮತ್ತು ರಾಜ್ಯಕ್ಕೆ ಎನ್‌ಡಿಆರ್‌ಎಫ್‌ ನಿದಿಯಡಿ ಬರಬೇಕಿರುವ ಬರ ಪರಿಹಾರದ ಹಣವಾಗಿದೆ.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36,675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ರೂ.31,180 ಕೋಟಿಗೆ ಕುಸಿದಿದೆ. ಹೀಗಾಗಿ, ರಾಜ್ಯಕ್ಕೆ ಆಗಿರುವ ನಷ್ಟ ರೂ. 5,495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. ಇನ್ನು ಜಲಮೂಲಗಳ ಪುನರುಜ್ಜೀವನಕ್ಕೆ 3 ಸಾವಿರ ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ ರೂ. ಸೇರಿ ಬೆಂಗಳೂರಿಗೆ ಒಟ್ಟು ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಹಳೆ ಬಾಕಿ ಸೇರಿ ಒಟ್ಟಾರೆ, ರೂ.11,495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ

ಕೇಂದ್ರದಿಂದ ರಾಜ್ಯಕ್ಕೆ ಬರ ಬೇಕಿದ್ದ ಬರ ಪರಿಹಾರದ 35,162 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ರಾಜ್ಯದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಏಪ್ರಿಲ್ 22ರಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಆಯೋಗವು ಸಮಸ್ಯೆಯನ್ನು ನಿಭಾಯಿಸಲು ಕೇಂದ್ರಕ್ಕೆ ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ ಗಮನಕ್ಕೆ ತಂದಿದೆ.

ಸುದ್ದಿ ಲಿಂಕ್ ಇಲ್ಲಿದೆ

ಹಾಗಾಗಿ, ನಿರ್ಮಲಾ ಸೀತಾರಾಮನ್ ಮತ್ತು ಅಣ್ಣಾಮಲೈ ಹೇಳಿದಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಹಣ ಕೇಳುತ್ತಿದೆ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...