HomeUncategorizedFACT CHECK : ಹಿಂದೂಗಳು ಭಾರತ ತೊರೆಯುವಂತೆ ಮೌಲಾನ ಮದನಿ ಹೇಳಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂಗಳು ಭಾರತ ತೊರೆಯುವಂತೆ ಮೌಲಾನ ಮದನಿ ಹೇಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಬಿಜೆಪಿ ಕೇಂದ್ರದಲ್ಲಿ ಬಹುಮತ ಪಡೆಯಲು 32 ಸೀಟ್‌ಗಳು ಕಡಿಮೆಯಾಗಿದೆ ಅಷ್ಟೆ, ಅವರು (ಮುಸ್ಲಿಮರು) ಹಿಂದೂಗಳಿಗೆ ಬೆದರಿಕೆ ಹಾಕಿದ್ದು, ಭಾರತ ತೊರೆಯುವಂತೆ ಹೇಳಿದ್ದಾರೆ. ಪಿಎಫ್‌ಐನ ಗಝ್ವಾ-ಎ-ಹಿಂದ್-𝟐𝟎𝟒𝟕 ಗುರಿಯನ್ನು ಸಾಧಿಸಲು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದಾಗಿ ಅವರು ಭಾವಿಸಿದ್ದಾರೆ. ಹೇ ವಿಭಜಿತ ಹಿಂದೂಗಳೇ, ನಿಮಗಾಗಿ ಹೊಸ ಸ್ಥಳವನ್ನು ಕಂಡುಕೊಳ್ಳಿ ಅಥವಾ ಮತಾಂತರಗೊಳ್ಳಿ” ಎಂದು ಬರೆದುಕೊಂಡು ಜಮೀಯತುಲ್ ಉಲಮಾ-ಎ-ಹಿಂದ್ ಸಂಘಟನೆಯ ಅಧ್ಯಕ್ಷ ಮೌಲಾನ ಮಹಮೂದ್ ಅಸಾದ್ ಮದನಿ ಅವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅಸಾದ್ ಮದನಿಯವರ ಭಾಷಣದ ವಿಡಿಯೋವನ್ನು ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ವಿವಿಧ ಬರಹಗಳೊಂದಿಗೆ ಹಂಚಿಕೊಂಡಿದ್ದಾರೆ. ಎಲ್ಲಾ ಪೋಸ್ಟ್‌ಗಳಲ್ಲಿಯೂ ಅಸಾದ್ ಮದನಿ ಹಿಂದೂಗಳು ದೇಶ ಬಿಟ್ಟು ತೆರಳುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನ ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ ನಾವು ಅಸಾದ್ ಮದನಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ.

ಈ ವೇಳೆ 29 ಮೇ 2022ರಲ್ಲಿ ಮಿಲ್ಲತ್‌ ಟೈಮ್ಸ್‌ ಎಂಬ ಸುದ್ದಿ ಸಂಸ್ಥೆ ಅಸಾದ್ ಮದನಿಯವರ ಭಾ‍ಷಣದ ಪೂರ್ಣ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಂಡಿರುವುದು ಕಂಡು ಬಂದಿದೆ. ಒಟ್ಟು 4:29 ಸೆಕೆಂಡ್‌ನ ವಿಡಿಯೋದಲ್ಲಿ 2:16 ಸೆಕೆಂಡ್‌ನಲ್ಲಿ ವೈರಲ್ ಆಗಿರುವ ಕ್ಲಿಪ್ ಲಭ್ಯವಾಗಿದೆ. ಅದರಲ್ಲಿ” ನಾನು ಬೆದರಿಕೆ ಹಾಕುತ್ತಿಲ್ಲ. ಈ ದೇಶವು ನಮ್ಮದೇ ಎಂದು ತಿಳಿಸುತ್ತಿದ್ದೇನೆ. ನಮಗೆ ಅವಕಾಶವಿತ್ತು, ಆದರೆ ನಾವು ಪಾಕಿಸ್ತಾನವನ್ನು ತಿರಸ್ಕರಿಸಿದ್ದೇವೆ. ನಾವು ಈ ದೇಶದ ಪ್ರಜೆಗಳು, ವಿದೇಶಿಯರಲ್ಲ. ನಮ್ಮನ್ನು ಇಷ್ಟ ಪಡದವರು ದೇಶ ಬಿಟ್ಟು ಹೋಗಲಿ” ಎಂದು ಹೇಳಿರುವುದು ಇದೆ.

ಇದೇ ಹೇಳಿಕೆ ಕುರಿತು 29 ಮೇ 2022ರಂದು ಲೈವ್ ಹಿಂದೂಸ್ತಾನ್ ವೆಬ್‌ಸೈಟ್‌ ಸುದ್ದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಲೋಕಸಭೆ ಚುನಾವಣೆಯ ನಂತರ ಮೌಲಾನ ಮಹಮೂದ್ ಅಸಾದ್ ಮದನಿ ಅವರು ಹಿಂದೂಗಳನ್ನು ದೇಶ ಬಿಟ್ಟು ಹೋಗಲು ಹೇಳಿದ್ದಾರೆ ಎಂಬುವುದು ಸುಳ್ಳು. ವೈರಲ್ ಆಗಿರುವ ವಿಡಿಯೋ 2022ರದ್ದಾಗಿದ್ದು, ಸುಳ್ಳು ಹೇಳಿಕೆಗಳೊಂದಿಗೆ ಹಂಚಿಕೆಯಾಗುತ್ತಿದೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...