HomeUncategorizedFACT CHECK : ಹಿಂದೂಗಳು ಭಾರತ ತೊರೆಯುವಂತೆ ಮೌಲಾನ ಮದನಿ ಹೇಳಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂಗಳು ಭಾರತ ತೊರೆಯುವಂತೆ ಮೌಲಾನ ಮದನಿ ಹೇಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಬಿಜೆಪಿ ಕೇಂದ್ರದಲ್ಲಿ ಬಹುಮತ ಪಡೆಯಲು 32 ಸೀಟ್‌ಗಳು ಕಡಿಮೆಯಾಗಿದೆ ಅಷ್ಟೆ, ಅವರು (ಮುಸ್ಲಿಮರು) ಹಿಂದೂಗಳಿಗೆ ಬೆದರಿಕೆ ಹಾಕಿದ್ದು, ಭಾರತ ತೊರೆಯುವಂತೆ ಹೇಳಿದ್ದಾರೆ. ಪಿಎಫ್‌ಐನ ಗಝ್ವಾ-ಎ-ಹಿಂದ್-𝟐𝟎𝟒𝟕 ಗುರಿಯನ್ನು ಸಾಧಿಸಲು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿರುವುದಾಗಿ ಅವರು ಭಾವಿಸಿದ್ದಾರೆ. ಹೇ ವಿಭಜಿತ ಹಿಂದೂಗಳೇ, ನಿಮಗಾಗಿ ಹೊಸ ಸ್ಥಳವನ್ನು ಕಂಡುಕೊಳ್ಳಿ ಅಥವಾ ಮತಾಂತರಗೊಳ್ಳಿ” ಎಂದು ಬರೆದುಕೊಂಡು ಜಮೀಯತುಲ್ ಉಲಮಾ-ಎ-ಹಿಂದ್ ಸಂಘಟನೆಯ ಅಧ್ಯಕ್ಷ ಮೌಲಾನ ಮಹಮೂದ್ ಅಸಾದ್ ಮದನಿ ಅವರ ಭಾಷಣದ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅಸಾದ್ ಮದನಿಯವರ ಭಾಷಣದ ವಿಡಿಯೋವನ್ನು ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ವಿವಿಧ ಬರಹಗಳೊಂದಿಗೆ ಹಂಚಿಕೊಂಡಿದ್ದಾರೆ. ಎಲ್ಲಾ ಪೋಸ್ಟ್‌ಗಳಲ್ಲಿಯೂ ಅಸಾದ್ ಮದನಿ ಹಿಂದೂಗಳು ದೇಶ ಬಿಟ್ಟು ತೆರಳುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವಿಡಿಯೋದ ಸತ್ಯಾಸತ್ಯತೆಯನ್ನ ನಾವು ಪರಿಶೀಲಿಸಿದ್ದೇವೆ. ಇದಕ್ಕಾಗಿ ನಾವು ಅಸಾದ್ ಮದನಿಯವರ ಭಾಷಣದ ಮೂಲ ವಿಡಿಯೋ ಹುಡುಕಿದ್ದೇವೆ.

ಈ ವೇಳೆ 29 ಮೇ 2022ರಲ್ಲಿ ಮಿಲ್ಲತ್‌ ಟೈಮ್ಸ್‌ ಎಂಬ ಸುದ್ದಿ ಸಂಸ್ಥೆ ಅಸಾದ್ ಮದನಿಯವರ ಭಾ‍ಷಣದ ಪೂರ್ಣ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಂಡಿರುವುದು ಕಂಡು ಬಂದಿದೆ. ಒಟ್ಟು 4:29 ಸೆಕೆಂಡ್‌ನ ವಿಡಿಯೋದಲ್ಲಿ 2:16 ಸೆಕೆಂಡ್‌ನಲ್ಲಿ ವೈರಲ್ ಆಗಿರುವ ಕ್ಲಿಪ್ ಲಭ್ಯವಾಗಿದೆ. ಅದರಲ್ಲಿ” ನಾನು ಬೆದರಿಕೆ ಹಾಕುತ್ತಿಲ್ಲ. ಈ ದೇಶವು ನಮ್ಮದೇ ಎಂದು ತಿಳಿಸುತ್ತಿದ್ದೇನೆ. ನಮಗೆ ಅವಕಾಶವಿತ್ತು, ಆದರೆ ನಾವು ಪಾಕಿಸ್ತಾನವನ್ನು ತಿರಸ್ಕರಿಸಿದ್ದೇವೆ. ನಾವು ಈ ದೇಶದ ಪ್ರಜೆಗಳು, ವಿದೇಶಿಯರಲ್ಲ. ನಮ್ಮನ್ನು ಇಷ್ಟ ಪಡದವರು ದೇಶ ಬಿಟ್ಟು ಹೋಗಲಿ” ಎಂದು ಹೇಳಿರುವುದು ಇದೆ.

ಇದೇ ಹೇಳಿಕೆ ಕುರಿತು 29 ಮೇ 2022ರಂದು ಲೈವ್ ಹಿಂದೂಸ್ತಾನ್ ವೆಬ್‌ಸೈಟ್‌ ಸುದ್ದಿ ಪ್ರಕಟಿಸಿತ್ತು.

ಒಟ್ಟಿನಲ್ಲಿ, ಲೋಕಸಭೆ ಚುನಾವಣೆಯ ನಂತರ ಮೌಲಾನ ಮಹಮೂದ್ ಅಸಾದ್ ಮದನಿ ಅವರು ಹಿಂದೂಗಳನ್ನು ದೇಶ ಬಿಟ್ಟು ಹೋಗಲು ಹೇಳಿದ್ದಾರೆ ಎಂಬುವುದು ಸುಳ್ಳು. ವೈರಲ್ ಆಗಿರುವ ವಿಡಿಯೋ 2022ರದ್ದಾಗಿದ್ದು, ಸುಳ್ಳು ಹೇಳಿಕೆಗಳೊಂದಿಗೆ ಹಂಚಿಕೆಯಾಗುತ್ತಿದೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...