Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

- Advertisement -
- Advertisement -

ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದರೊಬ್ಬರ ಮುಖಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವ ಸ್ನೋ ಫೋಮ್ ಸ್ಪ್ರೇ ಮಾಡಿದ ವಿಡಿಯೋವೊಂದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಂಧಿತ ಆರೋಪಿ ಮುಸ್ಲಿಂ ಎಂದು ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲಾಗಿದೆ.

ನಾಗೇಶ್ ಪ್ರೀತಮ್ ಎಂಬವರು ಸೆಪ್ಟೆಂಬರ್ 24ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ” ಸೈಕಲ್‌ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ದನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಗೆ ಭರ್ಜರಿ ಬ್ಯಾಟಿಂಗ್” ಎಂದು ಬರೆದುಕೊಂಡಿದ್ದರು.

ಅರುಣ್ ಕುಮಾರ್ ಹಿಂದೂ ಎಂಬ ಎಕ್ಸ್‌ ಖಾತೆಯಲ್ಲೂ ಸೆಪ್ಟೆಂಬರ್ 26ರಂದು ವಿಡಿಯೋ ಹಂಚಿಕೊಂಡು ” ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಮುಸ್ಲಿಂ ಯುವಕ ವೃದ್ದನಿಗೆ ಮುಖಕ್ಕೆ ಸ್ಪ್ರೇ ಮಾಡಿದ್ದಾನೆ ಎಂಬ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ.

ಪ್ರಕರಣದ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದಂತೆ ಅನೇಕ ವರದಿಗಳು ನಮಗೆ ಲಭ್ಯವಾಗಿದೆ.

ಸೆಪ್ಟೆಂಬರ್ 24,2024ರಂದು ನ್ಯೂಸ್‌ 18 ಈ ಕುರಿತು ವರದಿ ಪ್ರಕಟಿಸಿತ್ತು. ವರದಿಯಲ್ಲಿ “ಝಾನ್ಸಿಯ ನವಾಬಾದ್ ಪ್ರದೇಶದ ಎಲೈಟ್ -ಚಿತ್ರಾ ರಸ್ತೆಯ ಮೇಲ್ಸೇತುವೆ ಬಳಿ ಇಬ್ಬರು ಬೈಕ್ ಸವಾರರು ವೃದ್ದರೊಬ್ಬರ ಮುಖಕ್ಕೆ ನೊರೆ ಎರಚಿ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಲೈಕ್ಸ್‌ಗೋಸ್ಕರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ವಿನಯ್ ಯಾದವ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಯೂಟ್ಯೂಬರ್” ಎಂದು ಪೊಲೀಸರು ತಿಳಿಸಿರುವುದಾಗಿ ಹೇಳಲಾಗಿತ್ತು.

ಸೆಪ್ಟೆಂಬರ್ 24ರಂದು ಹಿಂದುಸ್ತಾನ್ ಟೈಮ್ಸ್ ಕೂಡ ವಿಡಿಯೋ ಕುರಿತು ವರದಿ ಪ್ರಕಟಿಸಿತ್ತು. ಅದರಲ್ಲಿ ವೃದ್ದನ ಮುಖಕ್ಕೆ ಫೋಮ್ ಸ್ಪ್ರೇ ಮಾಡಿ ವಿಕೃತಿ ಮೆರೆದ ಯೂಟ್ಯೂಬರ್ ವಿನಯ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಝಾನ್ಸಿ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೊಲೀಸ್ ಅಧೀಕ್ಷರ ಸ್ಪಷ್ಟನೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋದಲ್ಲಿ ಪೊಲೀಸ್ ಅಧೀಕ್ಷರು ಆರೋಪಿ ವಿನಯ್ ಯಾದವ್ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24ರಂದು ನವಭಾರತ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ ” ನಂದನಪುರ ನಿವಾಸಿ ಕಾನ್ಶಿರಾಂ ಪ್ರಜಾಪತಿ ಎಂಬವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಆರೋಪಿಗಳಾದ ಖೋಡಾನ್ ಗ್ರಾಮದ ವಿನಯ್ ಯಾದವ್, ಪಾಲಿ ಪಹಾರಿ ಗ್ರಾಮದ ರಿತೇಶ್ ಕೇವತ್ ಮತ್ತು ಡೈಲಿ ಗ್ರಾಮದ ಆರ್ಯನ್ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಓರ್ವ ಆರೋಪಿ ವಿನಯ್ ಯಾದವ್‌ನನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದ ಆರೋಪಿಗಳು ಮುಸ್ಲಿಮರಲ್ಲ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.

ಈ ಫ್ಯಾಕ್ಟ್‌ಚೆಕ್ ಮೂಲಕ ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಗುರುತಿಸುವ ಪ್ರಯತ್ನ ನಮ್ಮದಲ್ಲ. ಕೆಲವರು ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಕಾರಣ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...