Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

- Advertisement -
- Advertisement -

ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದರೊಬ್ಬರ ಮುಖಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವ ಸ್ನೋ ಫೋಮ್ ಸ್ಪ್ರೇ ಮಾಡಿದ ವಿಡಿಯೋವೊಂದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಂಧಿತ ಆರೋಪಿ ಮುಸ್ಲಿಂ ಎಂದು ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲಾಗಿದೆ.

ನಾಗೇಶ್ ಪ್ರೀತಮ್ ಎಂಬವರು ಸೆಪ್ಟೆಂಬರ್ 24ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ” ಸೈಕಲ್‌ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ದನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಗೆ ಭರ್ಜರಿ ಬ್ಯಾಟಿಂಗ್” ಎಂದು ಬರೆದುಕೊಂಡಿದ್ದರು.

ಅರುಣ್ ಕುಮಾರ್ ಹಿಂದೂ ಎಂಬ ಎಕ್ಸ್‌ ಖಾತೆಯಲ್ಲೂ ಸೆಪ್ಟೆಂಬರ್ 26ರಂದು ವಿಡಿಯೋ ಹಂಚಿಕೊಂಡು ” ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಮುಸ್ಲಿಂ ಯುವಕ ವೃದ್ದನಿಗೆ ಮುಖಕ್ಕೆ ಸ್ಪ್ರೇ ಮಾಡಿದ್ದಾನೆ ಎಂಬ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ.

ಪ್ರಕರಣದ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದಂತೆ ಅನೇಕ ವರದಿಗಳು ನಮಗೆ ಲಭ್ಯವಾಗಿದೆ.

ಸೆಪ್ಟೆಂಬರ್ 24,2024ರಂದು ನ್ಯೂಸ್‌ 18 ಈ ಕುರಿತು ವರದಿ ಪ್ರಕಟಿಸಿತ್ತು. ವರದಿಯಲ್ಲಿ “ಝಾನ್ಸಿಯ ನವಾಬಾದ್ ಪ್ರದೇಶದ ಎಲೈಟ್ -ಚಿತ್ರಾ ರಸ್ತೆಯ ಮೇಲ್ಸೇತುವೆ ಬಳಿ ಇಬ್ಬರು ಬೈಕ್ ಸವಾರರು ವೃದ್ದರೊಬ್ಬರ ಮುಖಕ್ಕೆ ನೊರೆ ಎರಚಿ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಲೈಕ್ಸ್‌ಗೋಸ್ಕರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ವಿನಯ್ ಯಾದವ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಯೂಟ್ಯೂಬರ್” ಎಂದು ಪೊಲೀಸರು ತಿಳಿಸಿರುವುದಾಗಿ ಹೇಳಲಾಗಿತ್ತು.

ಸೆಪ್ಟೆಂಬರ್ 24ರಂದು ಹಿಂದುಸ್ತಾನ್ ಟೈಮ್ಸ್ ಕೂಡ ವಿಡಿಯೋ ಕುರಿತು ವರದಿ ಪ್ರಕಟಿಸಿತ್ತು. ಅದರಲ್ಲಿ ವೃದ್ದನ ಮುಖಕ್ಕೆ ಫೋಮ್ ಸ್ಪ್ರೇ ಮಾಡಿ ವಿಕೃತಿ ಮೆರೆದ ಯೂಟ್ಯೂಬರ್ ವಿನಯ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಝಾನ್ಸಿ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೊಲೀಸ್ ಅಧೀಕ್ಷರ ಸ್ಪಷ್ಟನೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋದಲ್ಲಿ ಪೊಲೀಸ್ ಅಧೀಕ್ಷರು ಆರೋಪಿ ವಿನಯ್ ಯಾದವ್ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24ರಂದು ನವಭಾರತ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ ” ನಂದನಪುರ ನಿವಾಸಿ ಕಾನ್ಶಿರಾಂ ಪ್ರಜಾಪತಿ ಎಂಬವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಆರೋಪಿಗಳಾದ ಖೋಡಾನ್ ಗ್ರಾಮದ ವಿನಯ್ ಯಾದವ್, ಪಾಲಿ ಪಹಾರಿ ಗ್ರಾಮದ ರಿತೇಶ್ ಕೇವತ್ ಮತ್ತು ಡೈಲಿ ಗ್ರಾಮದ ಆರ್ಯನ್ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಓರ್ವ ಆರೋಪಿ ವಿನಯ್ ಯಾದವ್‌ನನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದ ಆರೋಪಿಗಳು ಮುಸ್ಲಿಮರಲ್ಲ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.

ಈ ಫ್ಯಾಕ್ಟ್‌ಚೆಕ್ ಮೂಲಕ ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಗುರುತಿಸುವ ಪ್ರಯತ್ನ ನಮ್ಮದಲ್ಲ. ಕೆಲವರು ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಕಾರಣ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...