Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸುತ್ತಿದ್ದ ಮುಸ್ಲಿಮರ ಸುಮಾರು 40 ಹೋಟೆಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜಾಗ್ರತೆ ಹಿಂದೂಗಳೇ ಜಾಗ್ರತೆ…ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಡಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹಿಂದೂ ಧರ್ಮವನ್ನು ನಾಶಮಾಡಲು, ಇವರ ಯಾವುದೇ ಆಹಾರ ಮಳಿಗೆಗಳಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ರಾಸಾಯನಿಕಗಳನ್ನು ಬಳಸುತ್ತಿರುವುದು ಪದೇಪದೇ ಬೆಳಕಿಗೆ ಬರುತ್ತಿವೆ. ಸಾಕಷ್ಟು ಕಡೆ ಸರ್ಕಾರಿ ಬಸ್ಸುಗಳನ್ನೂ ಇಂತಹದೇ ಹೋಟೆಲ್ ಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿಕೊಂಡಿರುತ್ತಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.

ಈ ಹಿಂದೆ ಇದೇ ಸುದ್ದಿಯನ್ನು “ತಮಿಳುನಾಡಿನ ಕೊಯಮತ್ತೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಿರಿಯಾನಿಯಲ್ಲಿ ಪುರುಷತ್ವ ಹರಣ ಔಷಧವನ್ನು ಸೇರಿಸಿದ್ದಾನೆ. ಈ ಬಿರಿಯಾನಿ ತಿನ್ನುವ ಗಂಡಸು ಅಥವಾ ಹೆಂಗಸರಿಗೆ ಮಕ್ಕಳಾಗೋದಿಲ್ಲ. ಹೀಗಾಗಿ, ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸಬೇಡಿ” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋಗಳ ಬಗ್ಗೆ ಮಾಹಿತಿ ಕೆಳಗಿದೆ.

ಫೋಟೋ -1 :

ಈ ಫೋಟೋ ಯೂಟ್ಯೂಬ್‌ ವಿಡಿಯೋ ಒಂದರಿಂದ ತೆಗೆದುಕೊಳ್ಳಲಾಗಿದೆ. ಸ್ಟ್ರೀಟ್‌ ಫುಡ್ ಅಫಿಷಿಯಲ್ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ “Indian Muslim festival DUM BIRYANI Preparation for 30 People & STREET FOOD” ಎಂಬ ಶೀರ್ಷಿಕೆಯಲ್ಲಿ ಜುಲೈ 1, 2026ರಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ಕೊಡಲಾಗಿದ್ದ ತಂಬ್‌ನೈಲ್‌ ಫೋಟೋ ಇದಾಗಿದೆ. ಈ ಫೋಟೋವನ್ನು ತಪ್ಪಾದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ ಎಂದು ಜೂನ್ 10, 2020ರಂದು ಟೈಮ್ಸ್‌ ಆಫ್ ಇಂಡಿಯಾ ಸುದ್ದಿ ಮಾಡಿತ್ತು.

ಮುಸ್ಲಿಮರು ತಮ್ಮ ಕಾರ್ಯಕ್ರಮಗಳಿಗೆ ಮಾಡುವ ರುಚಿಯಾದ ದಮ್ ಬಿರಿಯಾನಿ ಹೇಗೆ ತಯಾರಿಸುವುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ.

ಫೋಟೋ -2 :

ಸಾಮಾಜಿಕ ಜಾಲತಾಣದ ಪೋಸ್ಟ್‌ನ ಎರಡನೇ ಫೋಟೋ ಉತ್ತರ ಪ್ರದೇಶದ ಬಿಜ್ನೂರ್‌ಗೆ ಸಂಬಂಧಿಸಿದ್ದಾಗಿದೆ. ಈ ಫೋಟೋವನ್ನು ಬಿಜ್ನೋರ್ ಪೊಲೀಸರು ಜುಲೈ 11, 2019ರಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಿಜ್ನೋರ್‌ನ ಶೆರ್ಕೋಟ್ ಠಾಣೆಯ ಪೊಲೀಸರು ಮದ್ರಸಾವೊಂದರ ಮೇಲೆ ದಾಳಿ ಮಾಡಿದ್ದು, ಶಸ್ತ್ರಾಸ್ತ್ರ ಮಾರಾಟ ದಂಧೆಯನ್ನು ಬೇಧಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿತ್ತು.

ಫೋಟೋ-3 :

ಸಮವಸ್ತ್ರ ಧರಿಸಿದ ಸಿಬ್ಬಂದಿ ಮಾತ್ರೆಗಳಿರುವ ಬಾಕ್ಸ್‌ಗಳನ್ನು ಪರಿಶೀಲಿಸುತ್ತಿರುವ ಎರಡು ಫೋಟೋಗಳನ್ನು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅವುಗಳ ಬಗ್ಗೆ ಮಾಹಿತಿ ಹುಡುಕಿದಾಗ, ಅದು “ಶ್ರೀಲಂಕಾದ ಕೊಲಂಬೋದಲ್ಲಿ ವಶಕ್ಕೆ ಪಡೆಯಲಾದ ಮಾದಕ ವಸ್ತುಗಳ ಫೋಟೋ ಎಂದು ತಿಳಿದು ಬಂದಿದೆ. ಈ ಫೋಟೋಗಳನ್ನು ಕಳೆದ ವರ್ಷ ತೆಗೆಯಲಾಗಿತ್ತು. ಡೈಲಿ ಮಿರರ್ ಆನ್‌ಲೈನ್ ಎಂಬ ಶ್ರೀಲಂಕಾ ಮಾಧ್ಯಮದ ಈ ಘಟನೆ ಕುರಿತು ವರದಿ ಮಾಡಿತ್ತು. ವರದಿಯಲ್ಲೂ ವೈರಲ್ ಆಗಿರುವ ಮಾತ್ರೆಗಳ ಫೋಟೋಗಳು ಇರುವುದನ್ನು ನೋಡಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋ ಮತ್ತು ಮಾಹಿತಿ ಸಂಪೂರ್ಣ ಸುಳ್ಳು ಎಂಬುವುದು ತಿಳಿದು ಬಂದಿದೆ. ಮುಸ್ಲಿಮರ ವಿರುದ್ದ ದ್ವೇಷ ಹರಡುವ ಸಲುವಾಗಿ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಲಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...