Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸುತ್ತಿದ್ದ ಮುಸ್ಲಿಮರ ಸುಮಾರು 40 ಹೋಟೆಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜಾಗ್ರತೆ ಹಿಂದೂಗಳೇ ಜಾಗ್ರತೆ…ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಡಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹಿಂದೂ ಧರ್ಮವನ್ನು ನಾಶಮಾಡಲು, ಇವರ ಯಾವುದೇ ಆಹಾರ ಮಳಿಗೆಗಳಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ರಾಸಾಯನಿಕಗಳನ್ನು ಬಳಸುತ್ತಿರುವುದು ಪದೇಪದೇ ಬೆಳಕಿಗೆ ಬರುತ್ತಿವೆ. ಸಾಕಷ್ಟು ಕಡೆ ಸರ್ಕಾರಿ ಬಸ್ಸುಗಳನ್ನೂ ಇಂತಹದೇ ಹೋಟೆಲ್ ಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿಕೊಂಡಿರುತ್ತಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.

ಈ ಹಿಂದೆ ಇದೇ ಸುದ್ದಿಯನ್ನು “ತಮಿಳುನಾಡಿನ ಕೊಯಮತ್ತೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಿರಿಯಾನಿಯಲ್ಲಿ ಪುರುಷತ್ವ ಹರಣ ಔಷಧವನ್ನು ಸೇರಿಸಿದ್ದಾನೆ. ಈ ಬಿರಿಯಾನಿ ತಿನ್ನುವ ಗಂಡಸು ಅಥವಾ ಹೆಂಗಸರಿಗೆ ಮಕ್ಕಳಾಗೋದಿಲ್ಲ. ಹೀಗಾಗಿ, ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸಬೇಡಿ” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋಗಳ ಬಗ್ಗೆ ಮಾಹಿತಿ ಕೆಳಗಿದೆ.

ಫೋಟೋ -1 :

ಈ ಫೋಟೋ ಯೂಟ್ಯೂಬ್‌ ವಿಡಿಯೋ ಒಂದರಿಂದ ತೆಗೆದುಕೊಳ್ಳಲಾಗಿದೆ. ಸ್ಟ್ರೀಟ್‌ ಫುಡ್ ಅಫಿಷಿಯಲ್ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ “Indian Muslim festival DUM BIRYANI Preparation for 30 People & STREET FOOD” ಎಂಬ ಶೀರ್ಷಿಕೆಯಲ್ಲಿ ಜುಲೈ 1, 2026ರಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ಕೊಡಲಾಗಿದ್ದ ತಂಬ್‌ನೈಲ್‌ ಫೋಟೋ ಇದಾಗಿದೆ. ಈ ಫೋಟೋವನ್ನು ತಪ್ಪಾದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ ಎಂದು ಜೂನ್ 10, 2020ರಂದು ಟೈಮ್ಸ್‌ ಆಫ್ ಇಂಡಿಯಾ ಸುದ್ದಿ ಮಾಡಿತ್ತು.

ಮುಸ್ಲಿಮರು ತಮ್ಮ ಕಾರ್ಯಕ್ರಮಗಳಿಗೆ ಮಾಡುವ ರುಚಿಯಾದ ದಮ್ ಬಿರಿಯಾನಿ ಹೇಗೆ ತಯಾರಿಸುವುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ.

ಫೋಟೋ -2 :

ಸಾಮಾಜಿಕ ಜಾಲತಾಣದ ಪೋಸ್ಟ್‌ನ ಎರಡನೇ ಫೋಟೋ ಉತ್ತರ ಪ್ರದೇಶದ ಬಿಜ್ನೂರ್‌ಗೆ ಸಂಬಂಧಿಸಿದ್ದಾಗಿದೆ. ಈ ಫೋಟೋವನ್ನು ಬಿಜ್ನೋರ್ ಪೊಲೀಸರು ಜುಲೈ 11, 2019ರಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಿಜ್ನೋರ್‌ನ ಶೆರ್ಕೋಟ್ ಠಾಣೆಯ ಪೊಲೀಸರು ಮದ್ರಸಾವೊಂದರ ಮೇಲೆ ದಾಳಿ ಮಾಡಿದ್ದು, ಶಸ್ತ್ರಾಸ್ತ್ರ ಮಾರಾಟ ದಂಧೆಯನ್ನು ಬೇಧಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿತ್ತು.

ಫೋಟೋ-3 :

ಸಮವಸ್ತ್ರ ಧರಿಸಿದ ಸಿಬ್ಬಂದಿ ಮಾತ್ರೆಗಳಿರುವ ಬಾಕ್ಸ್‌ಗಳನ್ನು ಪರಿಶೀಲಿಸುತ್ತಿರುವ ಎರಡು ಫೋಟೋಗಳನ್ನು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅವುಗಳ ಬಗ್ಗೆ ಮಾಹಿತಿ ಹುಡುಕಿದಾಗ, ಅದು “ಶ್ರೀಲಂಕಾದ ಕೊಲಂಬೋದಲ್ಲಿ ವಶಕ್ಕೆ ಪಡೆಯಲಾದ ಮಾದಕ ವಸ್ತುಗಳ ಫೋಟೋ ಎಂದು ತಿಳಿದು ಬಂದಿದೆ. ಈ ಫೋಟೋಗಳನ್ನು ಕಳೆದ ವರ್ಷ ತೆಗೆಯಲಾಗಿತ್ತು. ಡೈಲಿ ಮಿರರ್ ಆನ್‌ಲೈನ್ ಎಂಬ ಶ್ರೀಲಂಕಾ ಮಾಧ್ಯಮದ ಈ ಘಟನೆ ಕುರಿತು ವರದಿ ಮಾಡಿತ್ತು. ವರದಿಯಲ್ಲೂ ವೈರಲ್ ಆಗಿರುವ ಮಾತ್ರೆಗಳ ಫೋಟೋಗಳು ಇರುವುದನ್ನು ನೋಡಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋ ಮತ್ತು ಮಾಹಿತಿ ಸಂಪೂರ್ಣ ಸುಳ್ಳು ಎಂಬುವುದು ತಿಳಿದು ಬಂದಿದೆ. ಮುಸ್ಲಿಮರ ವಿರುದ್ದ ದ್ವೇಷ ಹರಡುವ ಸಲುವಾಗಿ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಲಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...