Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...