Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...