Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...