Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು...

FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಮೂವರು ಮುಸ್ಲಿಂ ಧರ್ಮದ ವ್ಯಕ್ತಿಗಳು ಸಾಧುಗಳ ವೇಷ ಧರಿಸಿ ಹಿಂದೂ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದರು. ಈ ವೇಳೆ ಜನರ ಕೈಗೆ ಸಿಕ್ಕಿ ಬಿದ್ದಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಸದಾ ಕೋಮುದ್ವೇಷ ಉತ್ತೇಜಿಸುವ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವುದರಲ್ಲಿ ಕುಖ್ಯಾತಿ ಪಡೆದಿರುವ ‘ಸುದರ್ಶನ್ ನ್ಯೂಸ್‌ ಯುಪಿ‘ ಎಕ್ಸ್‌ ಪೇಜ್‌ನಲ್ಲಿ ಆರಂಭದಲ್ಲಿ ವಿಡಿಯೋ ಹಂಚಿಕೊಂಡು “ಮೀರತ್‌ನಲ್ಲಿ ಸಾಧುಗಳಾಗಿ ತಿರುಗಾಡುತ್ತಿದ್ದ ಮೂವರನ್ನು ಸಾರ್ವಜನಿಕರು ಹಿಡಿದಿದ್ದಾರೆ. ವಿಚಾರಣೆಯ ಸಮಯದಲ್ಲಿ, ಒಬ್ಬ ವ್ಯಕ್ತಿಯ ಆಧಾರ್ ಕಾರ್ಡ್‌ನಲ್ಲಿ ಎಂ.ಡಿ ಶಮೀಮ್ ಎಂದು ಹೆಸರು ಕಂಡು ಬಂದಿದೆ. ಎಂ.ಡಿ ಶಮೀಮ್ ತನ್ನ ಗ್ಯಾಂಗ್ ಜೊತೆ ಕೇಸರಿ ಬಟ್ಟೆಗಳನ್ನು ಧರಿಸಿ ಹಿಂದೂಗಳ ಮನೆಗಳಿರುವ ಪ್ರದೇಶಗಳಿಗೆ ತೆರಳುತ್ತಿದ್ದರು. ಮೂವರು ಮಕ್ಕಳನ್ನು ಕಳ್ಳತನ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ” ಬರೆದುಕೊಳ್ಳಲಾಗಿತ್ತು.

ಇದೇ ರೀತಿಯ ಆರೋಪಗಳೊಂದಿಗೆ ಇತರ ಅನೇಕ ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ನಾವು ಕೀ ವರ್ಡ್ಸ್‌ಗಳನ್ನು ಬಳಸಿ, ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ಜುಲೈ 14 ರಂದು ಆಜ್‌ತಕ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ಆ ವರದಿಯ ಪ್ರಕಾರ ಮೀರತ್‌ನ ಪ್ರಹ್ಲಾದ್ ನಗರದಲ್ಲಿ ಘಟನೆ ನಡೆದಿದ್ದು, ಮಕ್ಕಳ ಅಪಹರಣಕಾರರೆಂದು ಶಂಕಿಸಿ ಮೂವರು ಸಾಧುಗಳನ್ನು ಸಾರ್ವಜನಿಕರು ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹೊಡೆದಾಟದ ವಿಡಿಯೋ ವೈರಲ್ ಆದ ನಂತರ, ಪೊಲೀಸರು ವಿಷಯ ಅರಿತು ಪುನೀತ್, ಮಿಕ್ಕಿ ಮತ್ತು ಸುಧಾಂಶು ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿಯಿಂದ ಹಲ್ಲೆಗೊಳಗಾದವರು ಮುಸ್ಲಿಮರಲ್ಲ ಎಂಬುವುದು ಸಾಬೀತಾಗಿದೆ.

ತಪ್ಪು ಸಂದೇಶಗಳೊಂದಿಗೆ ವಿಡಿಯೋ ವೈರಲ್ ಆದ ನಂತರ ಮೀರತ್ ಪೊಲೀಸರು ಕೂಡ ಘಟನೆ ಕುರಿತು ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದರು. ಸಾರ್ವಜನಿಕರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಭಾವಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಮರಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇನ್ನು ಈ ಘಟನೆಯಲ್ಲಿ ಸಾಧುಗಳ ಗುರುತಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಟಿವಿ 9 ಭಾರತವರ್ಷ್ ಮತ್ತು ನ್ಯೂಸ್ 18 ವರದಿಗಳು ತಿಳಿಸಿವೆ. ಅವರು ಮುಸ್ಲಿಂ ಮಕ್ಕಳ ಅಪಹರಣಕಾರರು ಎಂದು ಭಾವಿಸಿ ಮೂವರನ್ನು ಒತ್ತೆಯಾಳಾಗಿ ಇಟ್ಟುಕೊಂಡು ಥಳಿಸಿದ್ದಾರೆ ಎಂಬುವುದು ಕೂಡ ತಿಳಿದು ಬಂದಿದೆ. ಸಾಧುಗಳು ಮುಸ್ಲಿಮರಲ್ಲ, ಆದರೆ ನಾಥ ಸಮುದಾಯದವರು ಎಂದು ಮೀರತ್ ಪೊಲೀಸರು ದೃಢಪಡಿಸಿದ್ದಾರೆ.

ಒಟ್ಟಿನಲ್ಲಿ ಮೀರತ್‌ನಲ್ಲಿ ಹಲ್ಲೆಗೊಳಗಾದವರು ಸಾಧುಗಳ ವೇಷ ಧರಿಸಿದ ಮುಸ್ಲಿಂ ವ್ಯಕ್ತಿಗಳಲ್ಲ. ಅವರು ನಾಥ  ಸಮುದಾಯಕ್ಕೆ ಸೇರಿದ ಹಿಂದೂ ಸಾಧುಗಳು. ಸಾರ್ವಜನಿಕರು ಮಕ್ಕಳ ಕಳ್ಳರು ಎಂದು ತಪ್ಪಾಗಿ ತಿಳಿದು ಅವರಿಗೆ ಥಳಿಸಿದ್ದರು. ಆ ಘಟನೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ. ಹಾಗಾಗಿ, ಪೋಸ್ಟ್‌ನಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...