Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹೈದರಾಬಾದ್‌ನಲ್ಲಿ ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಸಂಗೊಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವಿಡಿಯೋದಲ್ಲಿ ದುರ್ಗಾ ಮೂರ್ತಿಯ ಕೈ ಸೇರಿದಂತೆ ಕೆಲ ಭಾಗಗಳು ಮುರಿದಿರುವುದು ಮತ್ತು ಸುತ್ತಮುತ್ತ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ನೋಡಬಹುದು.

ಅರುಣ್ ಕುಮಾರ್ ಹಿಂದೂ (@arukumrhin11669)ಎಂಬ ಎಕ್ಸ್‌ ಬಳಕೆದಾರ ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ.. ಇದು ಹೈದರಾಬಾದ್. ಹೈದರಾಬಾದ್‌ನಲ್ಲಿ ಮಾತೆ ದುರ್ಗಾ ಮೂರ್ತಿ ಧ್ವಂಸ ಮಾಡಿದ ಜಿಹಾದಿ ಮುಸ್ಲಿಮರು. ಗಣೇಶನ ಮೂರ್ತಿ ಆಯಿತು ಈಗ ದುರ್ಗಾ ಮೂರ್ತಿ.. ಹಿಂದೂಗಳೆ ಇನ್ನಾದರು ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಸನಾತನ ಧರ್ಮ ನಾಶ ನಿಶ್ಚಿತ” ಎಂದು ಬರೆದುಕೊಂಡಿದ್ದರು.

ಶ್ರೇಯಾ ಸನಾತನಿ (@Shreya_Sanatani) ಎಂಬವರು ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಎಲ್ಲೋ ದೂರದ ಪಾಕಿಸ್ತಾನ ಮತ್ತು ಪಕ್ಕದ ಬಾಂಗ್ಲಾದೇಶದಲ್ಲಿ ನಡೆದಿರುವ ಘಟನೆ ಅಲ್ಲವೇ ಅಲ್ಲ. ನಮ್ಮ ಪಕ್ಕದ ಕಾಂಗ್ರೆಸ್ ಆಡಳಿತದ ತೆಲಂಗಾಣದ ಹೈದರಾಬಾದ್ ನಗರದಲ್ಲಿ…ದುರ್ಗಾ ಮಾತೆಯನ್ನ ಧ್ವಂಸ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹಬ್ಬಿಸುವುದರಲ್ಲಿ ಕುಖ್ಯಾತಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ (@MrSinha_) ಅಕ್ಟೋಬರ್ 11ರಂದು ವಿಡಿಯೋ ಹಂಚಿಕೊಂಡು “ಅತಿರೇಕ: ಹೈದರಾಬಾದ್‌ನಲ್ಲಿ ಮಾತೆ ದುರ್ಗೆಯ ಮೂರ್ತಿ ಧ್ವಂಸಗೊಳಿಸಲಾಗಿದೆ. ಇದು ಪಾಕಿಸ್ತಾನದ ಹೈದರಾಬಾದ್ ಅಲ್ಲ, ಕಾಂಗ್ರೆಸ್ ಆಡಳಿತ ಭಾರತದ ಹೈದರಾಬಾದ್” ಎಂದು ಬರೆದುಕೊಂಡಿದ್ದರು.

ಹಾಗಾದರೆ, ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿರುವುದು ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ, ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್ (ವಸ್ತು ಪ್ರದರ್ಶನ ಮೈದಾನ) ನಲ್ಲಿ ಸ್ಥಾಪಿಸಿದ್ದ ದುರ್ಗಾ ಮೂರ್ತಿಗೆ ಹಾನಿ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಈ ಕುರಿತು ಅಕ್ಟೋಬರ್ 11ರಂದು ವರದಿ ಪ್ರಕಟಿಸಿದ್ದ ತೆಲಂಗಾಣ ಟುಡೇ ಸುದ್ದಿ ವೆಬ್‌ಸೈಟ್ “ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಬೇಗಂ ಬಝಾರ್ ಪೊಲೀಸರು ಬೇಧಿಸಿದ್ದು, ಆರೋಪಿ ನಾಗರ್‌ಕರ್ನೂಲ್ ಜಿಲ್ಲೆಯ ಕೃಷ್ಣಯ್ಯ ಗೌಡ್ ಎಂಬಾತನನ್ನು ಬಂಧಿಸಿದ್ದಾರೆ” ಎಂದು ತಿಳಿಸಿತ್ತು.

“ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಲಯ ಡಿಸಿಪಿ ಅಕ್ಷಾಂಶ್ ಯಾದವ್, ಕೃಷ್ಣಯ್ಯಗೌಡ್‌ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಮತ್ತು ಅವರು ಹಸಿದಿದ್ದರು. ಹಾಗಾಗಿ, ಆಹಾರಕ್ಕಾಗಿ ದುರ್ಗಾ ಮೂರ್ತಿಯ ಬಳಿ ದಾಂಧಲೆ ನಡೆಸಿದ್ದಾರೆ” ಎಂದು ವಿವರಿಸಿದ್ದಾಗಿ ಹೇಳಿತ್ತು.

ಸಿಯಾಸತ್ ಡೈಲಿ‘ ಮತ್ತೊ ‘ಇಂಡಿಯಾ ಟುಡೇ‘ ಅಕ್ಟೋಬರ್ 12ರಂದು ಪ್ರಕಟಿಸಿದ್ದ ವರದಿಯಲ್ಲೂ ಇದೇ ವಿಷಯವನ್ನು ಹೇಳಲಾಗಿತ್ತು. ಆದ್ದರಿಂದ, ದುರ್ಗಾ ಮೂರ್ತಿಯನ್ನು ಮುಸ್ಲಿಮರು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...