Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ಸಿಖ್‌ ವೇಷ ಧರಿಸಿ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬುವುದು ಸುಳ್ಳು

Fact Check: ಮುಸ್ಲಿಮರು ಸಿಖ್‌ ವೇಷ ಧರಿಸಿ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಮುಸ್ಲಿಂ ವ್ಯಕ್ತಿಯೊಬ್ಬರು ಸಿಖ್ ಸಮುದಾಯದ ಟರ್ಬನ್ (ಪೇಟ) ಧರಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, “ಮುಸ್ಲಿಮರು ಸಿಖ್ಖರ ವೇಷ ಧರಿಸಿ ರೈತ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ. ಇದು ರೈತ ಹೋರಾಟದ ನಿಜಸ್ಥಿತಿ” ಎಂದು ಪ್ರತಿಪಾದಿಸಲಾಗಿದೆ.

‘Sunanda Roy'(@SaffronSunanda) ಎಂಬ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಮಾಡಿ, “ಅಬ್ದುಲ್ ಸಿಖ್ ವೇಷದಲ್ಲಿ, ಇದು ರೈತ ಹೋರಾಟದ ಹಿಂದಿನ ನಿಜಾಂಶ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ‘ನಾನುಗೌರಿ.ಕಾಂ’ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ.

ಮೊದಲಿಗೆ ನಾವು ವೈರಲ್ ವಿಡಿಯೋದ ಮೇಲೆ ಬರೆಯಲಾದ ಪಠ್ಯವನ್ನು ಗೂಗಲ್ ಲೆನ್ಸ್ ಬಳಸಿ ಭಾ‍ಷಾಂತರ ಮಾಡಿದ್ದೇವೆ. ಗುರುಮುಖಿ (Gurumukhi) ಭಾಷೆಯಲ್ಲಿ ಬರೆಯಲಾದ ಈ ಪಠ್ಯದಲ್ಲಿ “ಸಹೋದರ ಸಿದ್ದು ಮೂಸೆವಾಲ ಅವರ ಅಂತಿಮ ಪ್ರಾರ್ಥನೆ” ಎಂದು ಹೇಳಲಾಗಿದೆ. ಈ ಮೂಲಕ ಇದು ಮೇ 29, 2022ರಂದು ಪಂಜಾಬ್‌ನಲ್ಲಿ ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಸಾವಿಗೆ ಸಂಬಂಧಿಸಿದ್ದು ಎಂದು ನಮಗೆ ಖಚಿತವಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಡಿಯೋದ ಸ್ಕ್ರೀನ್ ಶಾಟ್ ಅನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದ್ದೇವೆ. ಈ ವೇಳೆ, ಜೂನ್,12, 2022ರಂದು ಫೇಸ್‌ಬುಕ್‌ನಲ್ಲಿ ಹಾಕಲಾದ ಪೋಸ್ಟ್‌ ಒಂದರಲ್ಲಿ ವಿಡಿಯೋದಲ್ಲಿರುವ ವ್ಯಕ್ತಿಯ ಫೋಟೋ ಇರುವುದು ಮಾಡಿರುವುದು ನಮಗೆ ಕಂಡು ಬಂದಿದೆ.

‘Sardarian Trust Punjab’ಎಂಬ ಫೇಸ್‌ಬುಕ್‌ ಪೇಜ್‌ನಲ್ಲಿ ಪೋಸ್ಟ್ ಮಾಡಲಾದ ಪೋಟೋದ ಜೊತೆಗೆ, “ಮೂಸೆವಾಲಾ ಅವರ ಅಂತಿಮ ಪ್ರಾರ್ಥನೆ – ಸರ್ದಾರಿಯನ್ ಟ್ರಸ್ಟ್ ಟರ್ಬನ್ ಸ್ಟಾಲ್ ಹಾಕಿತ್ತು. ಹಿಂದೂಗಳು ಮತ್ತು ಮುಸ್ಲಿಮರು ಪೇಟ ಧರಿಸಿದರು” ಎಂದು ಬರೆದುಕೊಳ್ಳಲಾಗಿದೆ.

‘Sardarian Trust Punjab’ಫೇಸ್‌ಬುಕ್ ಪೇಜ್‌ನಲ್ಲಿ ಜೂನ್ 10, 2022 ರಂದು ನಾವು ಮೇಲೆ ತಿಳಿಸಿದ ವೈರಲ್ ವಿಡಿಯೋವನ್ನು ಕೂಡ ಹಂಚಿಕೊಳ್ಳಲಾಗಿದ್ದು, “ಮೂಸೆವಾಲಾ ಅವರ ಅಂತಿಮ ಪ್ರಾರ್ಥನಾ ಸಮಾರಂಭವನ್ನು ಜೂನ್ 8,2022 ರಂದು ಅವರು ತವರು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ನಡೆಸಲಾಯಿತು. ಸಾವಿರಾರು ಅಭಿಮಾನಿಗಳು ಸಮಾರಂಭಕ್ಕೆ ಸೇರಿದ್ದರು” ಎಂದು ತಿಳಿಸಲಾಗಿದೆ.

ಮೇಲ್ಗಡೆ ಉಲ್ಲೇಖಿಸಿದ ಮೂಲಗಳ ಪರಿಶೀಲನೆ ನಡೆಸಿದ ಬಳಿಕ, ಇದು ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲ ಅವರ ಅಂತಿಮ ದರ್ಶನದ ಸಮಯದಲ್ಲಿ ಹಿಂದೂ-ಮುಸ್ಲಿಮರು ಸಿಧು ಧರಿಸುತ್ತಿದ್ದ ನೀಲಿ ಬಣ್ಣದ ಟರ್ಬನ್ ಧರಿಸಿ ಅವರಿಗೆ ಗೌರವ ಸಲ್ಲಿಸಿರುವ ದೃಶ್ಯ ಎಂಬುವುದು ನಮಗೆ ಖಚಿತವಾಗಿದೆ.

ಗಮನಾರ್ಹವಾಗಿ, ಇದೇ ವೈರಲ್ ವಿಡಿಯೊವನ್ನು 2023ರಲ್ಲಿ ಸುಳ್ಳು ಆರೋಪಗಳೊಂದಿಗೆ ದೆಹಲಿಯಲ್ಲಿ ಕುಸ್ತಿಪಟುಗಳ ಪ್ರತಿಭಟನೆಯ ಸಮಯದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಆ ಸಮಯದಲ್ಲಿ ಇಂಡಿಯಾ ಟುಡೇ ಮಲಯಾಳಂ ಇದರ ಸತ್ಯಾಸತ್ಯತೆ ಬಿಚ್ಚಿಟ್ಟಿತ್ತು.


ಪೋಸ್ಟ್ ಲಿಂಕ್ ಇಲ್ಲಿದೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...