Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಬಾಲಕನ ಕತ್ತಿನಿಂದ ‘ತುಳಸಿ ಮಾಲೆ’ ಅಥವಾ ತಾಯತವನ್ನು ಮುಸ್ಲಿಮರು ಬಲವಂತವಾಗಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮೊಣಕಾಲು ಮಟ್ಟ ನೀರಿನಲ್ಲಿ ನಿಂತಿರುವ ಬಾಲಕನಿಗೆ ಆಹಾರ ಸಾಮಗ್ರಿ ನೀಡುವ ಮುಸ್ಲಿಂ ವ್ಯಕ್ತಿಯೊಬ್ಬರು, ಆತನ ಕತ್ತಿನಲ್ಲಿರುವ ತಾಯತವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ತೆಗೆಯುವ ದೃಶ್ಯವಿದೆ. ವಿಡಿಯೋ ಮೇಲೆ ಬಾಂಗ್ಲಾ ಭಾಷೆಯಲ್ಲಿ “ನೊಖಾಲಿಯಲ್ಲಿ ರಿಲೀಫ್ ಸಾಮಗ್ರಿಗಳ ವಿತರಣೆಯ ಸಮಯದಲ್ಲಿ ಮಗುವಿಗೆ ಶಿರ್ಕ್‌ನಿಂದ ಮುಕ್ತಿ ದೊರೆಯಿತು” ಎಂದು ಬರೆಯಲಾಗಿದೆ.

ಆಗಾಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಜಿತೇಂದ್ರ ಪ್ರತಾಪ್ ಸಿಂಗ್ (@jpsin1) ಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದ ಹೊಸ ಸರ್ಕಾರ ಹಿಂದೂಗಳನ್ನು ಹೇಗೆ ನಾಶ ಮಾಡುತ್ತಿದೆ ಎಂಬುವುದನ್ನು ನೋಡಿ. ನೊಖಾಲಿಯಲ್ಲಿ ಪ್ರವಾಹದಲ್ಲಿ ದಿನಗಟ್ಟಲೆ ಸಿಲುಕಿ ಹಸಿದಿದ್ದ ಹಿಂದೂ ಮಗುವನ್ನು ಜಮಾತ್-ಎ-ಇಸ್ಲಾಮಿಯ ಮೌಲ್ವಿಯೊಬ್ಬರು ಸಹಾಯ ಪಡೆಯುವ ಮೊದಲು ಕಲಿಮಾವನ್ನು ಪಠಿಸುವಂತೆ ಒತ್ತಾಯಿಸಿದರು. ನಂತರ ಮೌಲ್ವಿಯು ಮಗುವಿನ ಹಿಂದೂ ಸಂಕೇತವಾದ ತುಳಸಿ ಮಾಲೆಯನ್ನು ಬಲವಂತವಾಗಿ ತೆಗೆದು ಹಾಕಿದರು. ಅವನು ಇನ್ನು ಮುಂದೆ ಹಿಂದೂ ಅಲ್ಲ ಎಂದು ಮಗುವಿಗೆ ಹೇಳಿದರು. ಮಗು ಮಾಲೆಯನ್ನು ಹಿಂದಕ್ಕೆ ಕೇಳಿದಾಗ, ಅವರು ಇನ್ನು ಮುಂದೆ ಯಾವುದೇ ಪರಿಹಾರ ಸಾಮಗ್ರಿಗಳನ್ನು ಸಿಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಲಪಂಥೀಯ ಸುದ್ದಿ ವೆಬ್‌ಸೈಟ್ ‘ಓಪ್ಇಂಡಿಯಾ’ ಕೂಡ ವಿಡಿಯೋ ಕುರಿತು ಆಗಸ್ಟ್ 30ರಂದು ವರದಿ ಪ್ರಕಟಿಸಿತ್ತು. ವರದಿಯಲ್ಲಿ ಹಿಂದೂ ಮಗುವಿನಿಂದ ಮೌಲ್ವಿ ತುಳಸಿ ಮಾಲೆಯನ್ನು ತೆಗೆದಿದ್ದಾರೆ ಎಂದು ಆರೋಪಿಸಿತ್ತು. ಬಳಿಕ, ಮಗುವಿನ ಧರ್ಮವನ್ನು ಖಚಿತವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸುದ್ದಿಯಲ್ಲಿ ತಿದ್ದುಪಡಿ ಮಾಡಿತ್ತು. ಆದರೆ, ಸುದ್ದಿಯ ಯುಆರ್‌ಎಲ್‌ ಲಿಂಕ್‌ನಲ್ಲಿ ಇನ್ನೂ ಕೂಡ ಹಿಂದೂ ಮಗು ಎಂದೇ ಇದೆ.

ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ. ಸಿನ್ಹಾ  ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು ” ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳು ಪರಿಹಾರ ಸಾಮಾಗ್ರಿ ನೀಡಲು ಹಿಂದೂ ಮಕ್ಕಳ ಕುತ್ತಿಗೆಯಿಂದ ಧಾರ್ಮಿಕ ದಾರವನ್ನು ತೆಗೆದಿದ್ದಾರೆ. ಭಾರತದಲ್ಲಿ ಯಾವುದಾದರೂ ಸಹಾಯಕ್ಕೆ ಬದಲಾಗಿ ಯಾವುದೇ ಹಿಂದೂ ಸ್ವಾಮಿ ಮುಸ್ಲಿಂ ವ್ಯಕ್ತಿಗೆ ಇದೇ ರೀತಿ ಮಾಡಿದರೆ ಏನಾಗುತ್ತಿತ್ತು ಊಹಿಸಿ” ಎಂದು ಬರೆದಕೊಂಡಿದ್ದರು.

ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ ಫ್ರಂಟಲ್ ಫೋರ್ಸ್ (@FrontalForce) ಕೂಡ ಮಿ. ಸಿನ್ಹಾನಂತೆ ಬರೆದುಕೊಂಡು ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಆ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಆಲ್ಟ್ ನ್ಯೂಸ್ ಸುದ್ದಿಯಲ್ಲಿ “ನಾವು ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ಹ್ಮಾನ್ ಅವರೊಂದಿಗೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ಬಾಲಕ ಹಿಂದೂ ಧರ್ಮವದನಲ್ಲ, ಮುಸ್ಲಿಂ. ಅಲ್ಲದೆ, ಆತನ ಕತ್ತಿನಿಂದ ತುಳಸಿ ಮಾಲೆಯನ್ನಲ್ಲ ತೆಗೆದಿರುವುದು. ಅದು ತಲಿಸ್ಮನ್ (ಮುಸ್ಲಿಮರು ಧರಿಸುವ ತಾಯತ) ಎಂದು ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ನಾವು ಸೊಹಾನುರ್ಹ್ಮಾನ್ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 30ರಂದು ಅವರು ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿರುವುದು ಕಂಡು ಬಂದಿದೆ.

ಸೊಹಾನುರ್ಹ್ಮಾನ್ ಹೇಳಿರುವಂತೆ “ವೈರಲ್ ವಿಡಿಯೋವನ್ನು ಆಗಸ್ಟ್ 26ರಂದ ರಸೇಲ್ ಖಾನ್ ಎಂಬವರು ಮೊದಲು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಘಟನೆ ನಡೆದಿರುವುದು ನೊಖಾಲಿ  ಪ್ರದೇಶದಲ್ಲಿ ಎಂದಿದೆ. ಆ ಪ್ರದೇಶದಲ್ಲಿ ಚಂದ್‌ಪುರದ ‘ತೌಹಿದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್’ ಎಂಬ ಹೆಸರಿನ ಸಲಫಿ ಇಸ್ಲಾಮಿಕ್ ಶಾಲೆಯು ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಸಲಫಿ/ಅಹ್ಲೆ ಹದೀಸ್ ಅನುಯಾಯಿಗಳು ತವೀಜ್ (ತಾಯತ) ಧರಿಸುವುದನ್ನು ವಿರೋಧಿಸುತ್ತಾರೆ. ಸಲಫಿಗಳು ಅನೇಕ ಕಡೆಗಳಲ್ಲಿ ಜನರ ಕತ್ತಿನಿಂದ ತಾಯತ ಕತ್ತರಿಸಿದ ವಿಡಿಯೋಗಳು ಲಭ್ಯವಿದೆ”

“ಹಿಂದೂ ಬಾಲಕನ ತಾಯತ ಕತ್ತರಿಸಿ ಆತನನ್ನು ಶಿರ್ಕ್‌ನಿಂದ ಹೊರತರಲು ಸಾಧ್ಯವಿಲ್ಲ. ಈ ಶಿರ್ಕ್‌ ಅನ್ನುವುದು ಅಲ್ಲಾಹನನ್ನು ಆರಾಧಿಸುವ ಮುಸ್ಲಿಮರಿಗೆ ಸಂಬಂಧಿಸಿದ್ದಾಗಿದೆ. ಇಸ್ಲಾಮಿನಲ್ಲಿ ಬಹು ದೈವಾರಾಧನೆ ಶಿರ್ಕ್‌ ಎಂದು ಪರಿಗಣಿಸಲಾಗುತ್ತದೆ. ಸಲಫಿಗಳು ತಾಯತ ಧರಿಸುವುದನ್ನೂ ಬಹು ದೈವಾರಾಧನೆ ಎಂದು ಹೇಳುತ್ತಾರೆ. ಹಾಗಾಗಿ, ಮುಸ್ಲಿಂ ಬಾಲಕನ ಕತ್ತಿನಿಂದ ತಾಯತ ತೆಗೆದಿದ್ದಾರೆ” ಎಂದು ಸೊಹಾನುರ್ಹ್ಮಾನ್ ವಿವರಿಸಿದ್ದಾರೆ.

ವೈರಲ್ ವಿಡಿಯೋದಲ್ಲಿರುವ ಮೌಲ್ವಿಯ ಹೆಸರು ಅಬ್ದುಲ್ ಮಲೆಕ್ ಮಿಯಾಜಿ. ತೌಹೀದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್ ನಿರ್ವಹಿಸುತ್ತಿರುವ ಜಾಮಿಯಾ ದಾರುತೌಹೀದ್‌ನ ಸಹಾಯಕ ಪ್ರಾಂಶುಪಾಲರಾಗಿದ್ದಾರೆ. ಅವರೊಂದಿಗೆ ಸೊಹಾನುರ್ಹ್ಮಾನ್ ಮಾತನಾಡಿದ್ದು,” ವಿಡಿಯೋದಲ್ಲಿ ಬಾಲಕನ ಕತ್ತಿನಿಂದ ತಾಯತ ಕತ್ತರಿಸಿದ್ದು ನಾನೆ. ನೊವಾಖಾಲಿಯಲ್ಲಿ ಪರಿಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾಗ ಆ ವಿಡಿಯೋ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿರುವ ಮಗುವಿನ ಹೆಸರು ಸೊಹೈಲ್ ಎಂದಾಗಿದ್ದು, ಆತ ಸ್ಥಳೀಯ ಮದ್ರಾಸದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಂದೆಯ ಹೆಸರು ಅಬ್ದುಲ್ ಹಕ್, ಮತ್ತು ತಾಯಿ ರಜಿಯಾ ಖಾತುನ್ ಎಂದಾಗಿದೆ. ಇಬ್ಬರೂ ನೌಖಾಲಿಯ ಚಾರ್ ಅಲಗಿ ಗ್ರಾಮದವರು” ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ನೊವಾಖಾಲಿಯಲ್ಲಿ ಪ್ರವಾಹ ಬಂದಾಗ, ಅಲ್ಲಿನ ಸ್ಥಳೀಯ ಸಲಫಿ ಸಂಸ್ಥೆ ತೌಹೀದ್ ಅಕಾಡೆಮಿ ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಈ ವೇಳೆ ಪರಿಹಾರ ಸ್ವೀಕರಿಸಲು ಬಂದ ಸೊಹೈಲ್ ಎಂಬ ಬಾಲಕನ ಕತ್ತಿನಲ್ಲಿ ತಾಯತ ಕಂಡು, ಅದನ್ನು ಮೌಲ್ವಿ ಕತ್ತರಿಸಿ ತೆಗೆದಿದ್ದಾರೆ. ಆ ವಿಡಿಯೋವನ್ನು ಹಿಂದೂ ಬಾಲಕನ ತುಳಸಿ ಮಾಲೆಯನ್ನು ಮುಸ್ಲಿಮರು ಕತ್ತರಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...